ತುಮಕೂರು: ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಸಿಬ್ಬಂದಿಯಿಂದ ದಲಿತ ಪರಿಶಿಷ್ಟ ಪಂಗಡದ ( ನಾಯಕ ) ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ನಡೆದಾಡುವ ದೇವತೆ ಶ್ರೀ ಮಾತೆ ಕಮಲಮ್ಮನವರು ಸ್ಥಾಪಿತ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ದ ಸಿಬ್ಬಂದಿಯಾದ ಅಶ್ವಥ್ ನಾರಾಯಣ ಎಂಬ ವ್ಯಕ್ತಿ ಸರೋಜಮ್ಮ ಎಂಬ ದಲಿತ ( ನಾಯಕ ) ಮಹಿಳೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪಕ್ಕದಲ್ಲಿ ಮಹಿಳೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಮಹಿಳೆ ತನ್ನ ಪರಿಚಯಸ್ಥರನ್ನು ಶ್ರೀ ಮಹಾಲಕ್ಷ್ಮಿಯ ದರ್ಶನ ಮಾಡಲು ಕರೆದುಕೊಂಡು ಹೋದ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಕರೆದುಕೊಂಡು ಹೋಗಿ ಅಪರಾಧಿಯಂತೆ ಬಾಯಿಗೆ ಬಂದಂತೆ ಬೈದು, ಭಾರತೀಯ ಸಂಸ್ಕೃತಿಯ ವಿಶಿಷ್ಟ ಪವಿತ್ರಸ್ಥಾನವನ್ನು ಹೊಂದಿರುವ ಮಾಂಗಲ್ಯವನ್ನು ಕಿತ್ತುಹಾಕಿ ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ಪವಿತ್ರತೆಗೆ ಧಕ್ಕೆ ಬರುವಂತೆ ನೀಚ ಕೃತ್ಯ ನಡೆದಿದೆ. ಈ ಹಿಂದೆ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಚಾರಿಟೆಬಲ್ ಟ್ರಸ್ಟ್ ಮಾಡಿಕೊಂಡಿದ್ದರು. ಹೊಸದಾಗಿ ಇನ್ನೊಂದು ಟ್ರಸ್ಟ್ ಮಾಡಿ, ಎರಡು ಟ್ರಸ್ಟ್ ಗಳ ನಡುವೆ ಜಗಳ ನಡೆದು ಪ್ರಕರಣವು ಕೋರ್ಟ್ ಮೆಟ್ಟಿಲೇರಿತ್ತು, ಈ ಸಮಯದಲ್ಲಿ ಧಾರ್ಮಿಕ ದತ್ತಿ ಇಲಾಖೆ ಮಹಾಲಕ್ಷ್ಮಿ ದೇವಸ್ಥಾನ ತುಮಕೂರು ಜಿಲ್ಲಾಡಳಿತ ಸುಸೂತ್ರವಾಗಿ ದೇವಸ್ಥಾನದ ಅಭಿವೃದ್ಧಿ ಕಾರ್ಯ ನಡೆಸಿಕೊಂಡು ಬಂದಿದ್ದು, ಕೋರ್ಟ್ ಮತ್ತೆ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಆಡಳಿತ ನಡೆಸುವಂತೆ ತೀರ್ಪು ನೀಡಿದ ಬಳಿಕ ಟ್ರಸ್ಟ್ ಆಡಳಿತ ನಡೆಸಲು ಪ್ರಾರಂಭಿಸಿದ ದಿನದಿಂದಲೂ ಭಕ್ತಾದಿಗಳ ಮೇಲೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಲೇ ಬಂದವು. ಈ ದೇವಸ್ಥಾನಕ್ಕೆ ತಿಂಗಳಿಗೆ ಲಕ್ಷಾಂತರ ರೂಪಾಯಿ ಕಾಣಿಕೆ ರೂಪದಲ್ಲಿ ಬರುತ್ತದೆ ಕೆಲವು ಸಿಬ್ಬಂದಿಗಳ ವರ್ತನೆಗಳಿಂದ ಭಕ್ತಾದಿಗಳು ದಿನವೂ ಶಾಪ ಹಾಕುವಂತಹ ಪ್ರಕರಣಗಳು ನಡೆದಿರುತ್ತದೆ. ಒಟ್ಟಾರೆಯಾಗಿ ಈ ಪ್ರಕರಣವು ಟ್ರಸ್ಟ್ ನ ಹಣಬಲವು ಬಡ ದಲಿತರ ನೋವು ಯಾವುದಕ್ಕೆ ನ್ಯಾಯ ಸಿಗುತ್ತದೆ ಎಂದು ಕಾದು ನೋಡಬೇಕಿದೆ
ಈ ಘಟನೆ ಸಂಬಂಧ ಮಹಿಳಾ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣವು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಹಿಳಾ ದೌರ್ಜನ್ಯ ಮತ್ತು ಜಾತಿ ನಿಂದನೆಯ ಬಗ್ಗೆ ಪ್ರಕರಣ ದಾಖಲಾಗಿರುದನ್ನು ತಿಳಿದ ಮೇಲೆ ಸ್ಥಳಕ್ಕೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿ ಎನ್ನುವ ಆಕ್ರೋಶದ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ.
ವರದಿ: ಸಿದ್ದರಾಜು ಟಿ.ಹೆಚ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5