ಮಧುಗಿರಿ: ದಲಿತ ಮುಖಂಡ ನರಸಿಂಹಮೂರ್ತಿ ಹತ್ಯೆ ಖಂಡಿಸಿ ಗುರುವಾರ ಎಲ್ಲಾ ದಲಿತ ಪರ ಸಂಘಟನೆಗಳು ಒಟ್ಟಾಗಿ ಮಧುಗಿರಿ ಉಪ ವಿಭಾಗ ದಂಡಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ದಲಿತ ಮುಖಂಡರು ಮಾತನಾಡಿ, ತುಮಕೂರು ಜಿಲ್ಲೆಯ ದಲಿತರ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಸರ್ಕಾರ ಮೊದಲು ದಲಿತ ಪರ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಗತಿಪರ ಸಂಘಟನೆಯ ಮುಖಂಡ ಜೀವಿಕ ಮಂಜುನಾಥ್, ಡಿಎಸ್ ಎಸ್ ಸಂಚಾಲಕ ನರಸಿಂಹಮೂರ್ತಿ ಹತ್ಯೆ ಖಂಡನೀಯ, ದಲಿತರಿಗೆ ರಕ್ಷಣೆ ನೀಡದ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ದಲಿತ ಮುಖಂಡ ಸಿದ್ದಾಪುರ ಮಾತನಾಡಿ, ರಂಗಶಾಮಯ್ಯ ರಾಜ್ಯ ಸರ್ಕಾರ ದಲಿತರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳನ್ನು ನಿರ್ಲಕ್ಷತನದಿಂದ ನೋಡುತ್ತಿದ್ದು, ಕೆಳವರ್ಗದವರಿಗೆ ಬಲ ಇಲ್ಲದಂತಾಗಿದೆ. ಇದು ತುಂಬಾ ಬೇಸರ ತರಿಸುತ್ತದೆ. ಸರ್ಕಾರ ಎಚ್ಚೆತ್ತು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಸಿದ್ದಾಪುರ ರಂಗಸ್ವಾಮಯ್ಯ, ದೊಡ್ಡೇರಿ ಕಣಿಮಯ್ಯ ಜೀವಿಕ ಮಂಜುನಾಥ್ , ಶಿವಕುಮಾರ್ ದೊಡ್ಡೇರಿ, ಮಹಾಲಿಂಗಯ್ಯ ಎಸ್., ಸಂಜೀವಯ್ಯ ಇನ್ನು ಮುಂತಾದವರು ಮುಖಂಡರು ಭಾಗವಹಿಸಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz