nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026
    Facebook Twitter Instagram
    ಟ್ರೆಂಡಿಂಗ್
    • ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ
    • ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ
    • ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ
    • ಬೆಂಗಳೂರಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    • ಮೈಸೂರು ದಸರಾ 2026: ಪ್ರಥಮ ಹಂತದ ಗಜಪಡೆಯ ತೂಕ ಪರೀಕ್ಷೆ; 5,770 ಕೆಜಿ ತೂಕದೊಂದಿಗೆ ‘ಶ್ರೀಕಂಠ’ ಅತ್ಯಂತ ಭಾರವಾದ ಆನೆ!
    • ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಣೆ
    • PGಯ 7ನೇ ಮಹಡಿಯಿಂದ ಜಿಗಿದು ಸಾಫ್ಟ್’ವೇರ್ ಇಂಜಿನಿಯರ್ ಯುವತಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ದಲಿತ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ
    ತಿಪಟೂರು January 29, 2022

    ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ದಲಿತ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

    By adminJanuary 29, 2022No Comments2 Mins Read
    protest

    ತಿಪಟೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

    ಜ.26ರಂದು ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆವನ್ನು ಕಾರ್ಯಕ್ರಮದ ವೇದಿಕೆಯಿಂದ ತೆಗೆಸಿ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

    ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ರಾಯಚೂರು ಜಿಲ್ಲಾನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು .
    ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಬಿ.ಹೆಚ್.ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿಮುಂದೆ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರ ಹಾಗೂ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಿದರು. ತಹಸೀಲ್ದಾರ್ ಚಂದ್ರಶೇಖರಯ್ಯ ಮನವಿಪತ್ರ ಸ್ವೀಕರಿಸಿದರು

    ಪ್ರತಿಭಟನಾ ನಿರತರನ್ನ ಉದೇಶಿಸಿ ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಮತ್ತು ಸಂವಿಧಾನಕ್ಕೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ ಮಹಾನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದು ಖಂಡನೀಯ ಎಂದರು.
    ಜಾತಿ ಮನಸ್ಥಿತಿಯ ಮಲ್ಲಿಕಾರ್ಜನಗೌಡರಿಂದ ಸಾಮಾಜಿಕ ನ್ಯಾಯದೊರೆಯಲು ಸಾಧ್ಯವಿಲ್ಲ. ಕಾನೂನನ್ನು ಗೌರವಿಸದ ವ್ಯಕ್ತಿ ನ್ಯಾಯಾಧೀಶ ಹುದ್ದೆಗೆ ಅನರ್ಹವಾಗಿದ್ದೂ ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಮಲ್ಲಿಕಾರ್ಜುನಗೌಡರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಬೇಕು. ಕೂಡಲೇ ನ್ಯಾಯಾಧೀಶ ಸ್ಥಾನದಿಂದ ವಜಾಗೊಳಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

    ಎಪಿಎಂಸಿ ನಿರ್ದೇಶಕ ಬಜಗೂರುಮಂಜುನಾಥ್ ಮಾತನಾಡಿ, ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾದವಾಗಿದೆ ಈ ಕೃತ್ಯ ಪ್ರತಿಯೊಬ್ಬ ಭಾರತೀಯ ಖಂಡಿಸಬೇಕಾದ ಕೃತ್ಯವಾಗಿದೆ. ಉಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವೃತ್ತಿಯಿಂದ ವಜಾ ಮಾಡಿ ಗಡಿ ಪಾರು ಮಾಡಬೇಕು ಎಂದು ಒತ್ತಾಯಿಸಿದರು.

    ರೈತ ಮುಖಂಡ ಭೈರನಾಯ್ಕನಹಳ್ಳಿ ಲೋಕೇಶ್ ಮಾತನಾಡಿ , ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯಾಧೀಶರಾಗಿರಲು ಯಾವುದೇ ಅರ್ಹತೆ ಮತ್ತು ಸಾಮಾನ್ಯ ಜ್ಞಾನ, ತಿಳುವಳಿಕೆ ಇಲ್ಲ ಎಂದರು.

    ಪ್ರತಿಭಟನೆಯಲ್ಲಿ ಮುಖಂಡರಾದ ಪೆದ್ದಿಹಳ್ಳಿನರಸಿಂಹಯ್ಯ, ಯಗಚ್ಚಿಕಟ್ಟೆ ರಾಘವೇಂದ್ರ, ಶಂಕರಪ್ಪ, ಸೈಫುಲ್ಲಾ , ಜಿ.ಕುಮಾರ್, ಲಿಂಗರಾಜು, ನಾಗತಿಹಳ್ಳಿ ಕೃಷ್ಣಮೂರ್ತಿ, ರಘು, ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ

    August 29, 2026

    ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

    August 20, 2026

    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ

    August 19, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    ಬಳ್ಳಾರಿ:  ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ನೂತನವಾಗಿ…

    ರಾಮನಗರದಲ್ಲಿ ಭಾರೀ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಕಲಿ ನೋಟು ಮುದ್ರಿಸುತ್ತಿದ್ದ ಐವರು ವಶಕ್ಕೆ

    August 31, 2026

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡುವಂತೆ ಸಚಿವ ಈಶ್ವರ್ ಖಂಡ್ರೆಗೆ ಮನವಿ

    August 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.