ತುರುವೇಕೆರೆ: ಮುನಿಯೂರು ಗ್ರಾಮದಲ್ಲಿ ನಡೆದ “ದೇವರ ದಾಸಿಮಯ್ಯ ‘” ರವರ ಕಾರ್ಯಕ್ರಮಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರಲಕ್ಷ್ಮಿ ಅವರಿಗೆ ಆಮಂತ್ರಣ, ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಲಿತ ಜನಾಂಗದವರು ಎಂಬ ಕಾರಣಕ್ಕೆ ಅವರನ್ನು ಕಡೆಗಣಿಸಿ ,ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಘಟನಾ ಸಂಚಾಲಕ ದಂಡಿನಶಿವರ ಆಕ್ರೋಶ ವ್ಯಕ್ತಪಡಿಸಿದರು.
ತುರುವೇಕೆರೆ ಪಟ್ಟಣದ, ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಗೆ ತಾಲ್ಲೂಕು ತಹಶೀಲ್ದಾರರು ನೇರ ಹೊಣೆಗಾರರು. ಇವರು ಅನೇಕ ಬಾರಿ ದಲಿತ ವಿರೋಧಿ ನಡೆಯಲ್ಲೇ ಬಂದಿದ್ದಾರೆ. ಆದ್ದರಿಂದ ತಹಸೀಲ್ದಾರರನ್ನು ಕೂಡಲೇ ವರ್ಗಾವಣೆ ಮಾಡಿ ಇವರ ಮೇಲೆ ,ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು.
ಛಲವಾದಿ ,ಮಹಾ ಸಭಾದ ತಾಲ್ಲೂಕು ಅಧ್ಯಕ್ಷರಾದ ಡೊಂಕಿಹಳ್ಳಿ ರಾಮಣ್ಣ ಮಾತನಾಡಿ, ತಾಲ್ಲೂಕು ತಹಸೀಲ್ದಾರ್ ನಯಿಮ್ ಉನ್ನಿಸ್ಸ ಅಧಿಕಾರ ವಹಿಸಿಕೊಂಡ ತಕ್ಷಣ ದಲಿತರಿಗೆ ಸ್ಪಂದಿಸುತ್ತಿದ್ದರು. ಆದರೆ ಕಳೆದ ನಾಲ್ಕು ವರ್ಷಗಳಿಂದ ಇಲ್ಲಿನ ತಹಸೀಲ್ದಾರ್ ದಲಿತರ ವಿರೋಧಿಯಾಗಿದ್ದರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪತ್ರಿಕಾಗೋಷ್ಠಿಯಲ್ಲಿ ,ದಲಿತ ಮುಖಂಡರಾದ ಬೀಚನಹಳ್ಳಿ ರಾಮಣ್ಣ, ಡಿ.ಎಸ್.ಎಸ್ .ನಗರ ಘಟಕದ ಅಧ್ಯಕ್ಷರಾದ ಬಡಾವಣೆಯ ಶಿವರಾಜು, ಸುನಿಲ್, ವೀರೇಂದ್ರ ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5