ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೌನ ಮುರಿದಿದ್ದಾರೆ. ಇದು ವರೆಗೆ ಪ್ರಕರಣದ ಬಗ್ಗೆ ಏನೂ ಮಾತನಾಡದ ಅವರು, ಈಗ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಇಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪ್ರಕರಣದ ಕುರಿತು ಉಲ್ಲೇಖಿಸಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಘಟನೆಯಿಂದಾಗಿ ನನಗೆ ಹಾಗೂ ನನ್ನ ಹದಿಹರೆಯದ ಮಗನಿಗೆ, ದರ್ಶನ್ ಅವರ ಸ್ನೇಹಿತರಿಗೆ, ಅಭಿಮಾನಿಗಳಿಗೆ ತುಂಬ ದುಃಖವಾಗಿದೆ ಎಂದಿದ್ದಾರೆ.
ತಾಯಿ ಚಾಮುಂಡೇಶ್ವರಿ ಹಾಗೂ ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿದೆ. ನ್ಯಾಯಾಲದಿಂದ ಪ್ರಕಟವಾಗಲಿರುವ ತೀರ್ಪು ದರ್ಶನ್ ಹಾಗೂ ಅಭಿಮಾನಿಗಳಿಗೆ ನೆಮ್ಮದಿಯ ಭಾವ ಮೂಡಿಸಲಿದೆ ಎಂದು ನಾನು ಭಾವಿಸುತ್ತೇನೆ. ಸತ್ಯ ಮೇವ ಜಯತೆ ಎಂದು ಬರೆದಿದ್ದಾರೆ.
ಇದೇ ವೇಳೆ ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ವಿವಿಧ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿಗಳು ಪ್ರಸಾರವಾಗುತ್ತಿವೆ. ದಯವಿಟ್ಟು ತನಿಖಾಧಿಕಾರಿಗಳು ನೀಡುವ ಮಾಹಿತಿ ಮಾತ್ರವನ್ನೇ ಪ್ರಕಟಿಸಿ ಎಂದು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಕುಟುಂಬದ ಕುರಿತು ಟಿವಿ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳು ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸುವಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA