nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್​ ಪತ್ನಿ ವಿಜಯಲಕ್ಷ್ಮೀ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿ ಮಾಡಿದಾಗ ಏನೆಲ್ಲ ಮಾತುಕತೆ ನಡೆಯಿತು ?
    ರಾಜ್ಯ ಸುದ್ದಿ July 25, 2024

    ದರ್ಶನ್​ ಪತ್ನಿ ವಿಜಯಲಕ್ಷ್ಮೀ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿ ಮಾಡಿದಾಗ ಏನೆಲ್ಲ ಮಾತುಕತೆ ನಡೆಯಿತು ?

    By adminJuly 25, 2024No Comments2 Mins Read
    d k shivakumar

    ದರ್ಶನ್​ ಪತ್ನಿ ವಿಜಯಲಕ್ಷ್ಮೀ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಈ ವಿಚಾರವನ್ನು ಸ್ವತಃ ಡಿ.ಕೆ. ಶಿವಕುಮಾರ್​ ಅವರೇ ಬಹಿರಂಗಪಡಿಸಿದ್ದಾರೆ. ಮೊನ್ನೆ ನಡೆದ ರಾಮನಗರದ ಕರಗ ಮಹೋತ್ಸವದಲ್ಲಿ ದರ್ಶನ್​ ವಿಚಾರ ಪ್ರಸ್ತಾಪಿಸಿದ ಡಿಕೆಶಿ, ನನ್ನ ಭೇಟಿಗೆ ದರ್ಶನ್​ ಪತ್ನಿ ಸಮಯ ಕೇಳಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.

    ನಾನಿಂದು ದರ್ಶನ್​ ಪತ್ನಿಯನ್ನು ಭೇಟಿಯಾಗಿ ಮಾತನಾಡುವೆ. ಏನಾದರೂ ಅನ್ಯಾಯವಾಗಿದ್ದರೆ ಸರಿಪಡಿಸಲು ಪ್ರಯತ್ನಿಸುವೆ. ಆದರೆ, ಪ್ರತಿಯೊಬ್ಬರು ಕೂಡ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಡಿ.ಕೆ. ಶಿವಕುಮಾರ್​ ಅವರು ಹೇಳಿದ್ದರು. ಈ ವೇಳೆ ಅವರ ಭಾಷಣದ ಮಧ್ಯೆ ದರ್ಶನ್​ ಅಭಿಮಾನಿಗಳು ಡಿಬಾಸ್ ಎಂದು ಘೋಷಣೆಗಳನ್ನು ಕೂಗಿದ್ದರು.


    Provided by
    Provided by

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಥಿತರಾಗಿರುವ ನಟ ದರ್ಶನ್ ಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ.

    ಅವರ ಮಗ ವಿನೀಷ್ ನಮ್ಮ ಶಾಲೆಯಲ್ಲಿ ಓದುತ್ತಿದ್ದ, ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ಕೊಟ್ಟಿದ್ದೀನಿ, ಕೇಸ್ ವಿಚಾರವಾಗಿ ಮಾತನಾಡಲು ಅವರು ಬಂದಿರಲಿಲ್ಲ’ ಎಂದಿದ್ದಾರೆ.

    ಶಾಲೆಗೆ ಭೇಟಿ ನೀಡುತ್ತಿಲ್ಲ. ಆಡಳಿತ ಜವಾಬ್ದಾರಿಯನ್ನು ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಪುತ್ರನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.

    ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೆ, ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ಭೇಟಿಗೆ ನಿರಾಕರಿಸಿದರೆ ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದರು.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/JItjEWZ9e5fBWDL6CkTr97

     

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.