ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದ ಕೆರೆಯು ಈ ಹಿಂದೆ ಸುರಿದ ಭಾರಿ ಮಳೆಯಿಂದ ಸುಮಾರು 18 ವರ್ಷಗಳ ನಂತರ ಕೋಡಿ ಬಿದ್ದಿದೆ.
ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ದೊಡ್ಡ ಮಟ್ಟದಲ್ಲಿ ಕೆರೆ ಕೋಡಿ ಬಿದ್ದಿದೆ. ಇದೇ ಸಂದರ್ಭದಲ್ಲಿ ತುಮಕೂರು ಮಾರ್ಗವಾಗಿ ತೋವಿನಕೆರೆ ಬರುತ್ತಿದ್ದ ಕಾರೊಂದು ಚಾಲಕನ ಸಹಿತ ಕೆರೆಕೋಡಿ ನೀರಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು.
ಸ್ಥಳೀಯರ ಮತ್ತು ದಾಸಲುಕುಂಟೆ ಗ್ರಾಮದ ಸಿದ್ದರಾಜು ಮತ್ತು ಅವರ ಗೆಳೆಯರ ತಂಡ ಕಾರು ಚಾಲಕರನ್ನು ತಡರಾತ್ರಿಯಲ್ಲಿಯೇ ರಕ್ಷಣೆ ಮಾಡಿದ್ದಾರೆ. ನಂತರ ಬೆಳಿಗ್ಗೆ ಸ್ಥಳೀಯರು ಕಾರನ್ನು ಜೆಸಿಬಿ ಯಂತ್ರದ ಮೂಲಕ ಕಾರನ್ನು ಹೊರ ತೆಗೆದಿದ್ದಾರೆ
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy