nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ

    March 19, 2026

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ
    • ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ
    • ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    • ಶೀಘ್ರದಲ್ಲೇ ಕೆಪಿಎಸ್‌ ಸಿ ಸುಧಾರಣೆ: ಪ್ರತಿವರ್ಷ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ
    • ಅತಿಥಿ ಶಿಕ್ಷಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಸರಳಗೊಳಿಸಲು ಮನವಿ
    • ಬೆಂಗಳೂರಿನ ‘ಎಎಂಬಿ ಸಿನಿಮಾಸ್’ನಿಂದ ಯುಗಾದಿ ಹಬ್ಬದ ವಿಶೇಷ ಕೊಡುಗೆ
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
    ತುಮಕೂರು January 17, 2022

    ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು

    By adminJanuary 17, 2022No Comments2 Mins Read
    daya marana

    ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.


    Provided by
    Provided by

    ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7,500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ. ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‌ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ, ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ. ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ. ನಮ್ಮ ಮುಂದೆಯೇ ಹಲವಾರು ಉದಾಹರಣೆಗಳಿವೆ. ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

    ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರ ಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ, ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ, ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್, ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು

    March 18, 2026

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    March 17, 2026

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಯುಗಾದಿ: ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ಜಾತ್ರಾ ಮಹೋತ್ಸವ

    March 19, 2026

    ಸರಗೂರು: ತಾಲೂಕಿನ ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಅಂಗವಾಗಿ ಗುರುವಾರ ಕಪಿಲ ನದಿ ದಡದಲ್ಲಿ ಹಾಲುಗಡ ಜಾತ್ರಾ ಮಹೋತ್ಸವ…

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    ಔರಾದ್ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ

    March 19, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    March 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.