nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
    ತುಮಕೂರು January 17, 2022

    ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು

    By adminJanuary 17, 2022No Comments2 Mins Read
    daya marana

    ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.


    Provided by
    Provided by

    ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7,500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ. ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‌ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ, ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ. ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ. ನಮ್ಮ ಮುಂದೆಯೇ ಹಲವಾರು ಉದಾಹರಣೆಗಳಿವೆ. ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

    ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರ ಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ, ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ, ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್, ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು…

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.