nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
    ತುಮಕೂರು January 17, 2022

    ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು

    By adminJanuary 17, 2022No Comments2 Mins Read
    daya marana

    ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.


    Provided by
    Provided by

    ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7,500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ. ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‌ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ, ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ. ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ. ನಮ್ಮ ಮುಂದೆಯೇ ಹಲವಾರು ಉದಾಹರಣೆಗಳಿವೆ. ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

    ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರ ಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ, ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ, ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್, ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ತುಮಕೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಟ್ಟಿ ಮತ್ತು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 20…

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.