nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
    ತುಮಕೂರು January 17, 2022

    ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು

    By adminJanuary 17, 2022No Comments2 Mins Read
    daya marana

    ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.

    ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7,500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ. ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‌ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ, ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ. ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ. ನಮ್ಮ ಮುಂದೆಯೇ ಹಲವಾರು ಉದಾಹರಣೆಗಳಿವೆ. ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

    ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರ ಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ, ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ, ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್, ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.