nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳಿಂದ ವಿನಾ ಕಾರಣ ಕಾಲಹರಣ: ದಯಾಮರಣ ಕೇಳುವ ಸ್ಥಿತಿಗೆ ತಲುಪಿದ ಕುಟುಂಬ
    ತುಮಕೂರು February 3, 2022

    ಅಧಿಕಾರಿಗಳಿಂದ ವಿನಾ ಕಾರಣ ಕಾಲಹರಣ: ದಯಾಮರಣ ಕೇಳುವ ಸ್ಥಿತಿಗೆ ತಲುಪಿದ ಕುಟುಂಬ

    By adminFebruary 3, 2022No Comments2 Mins Read
    press meet

    ತುಮಕೂರು: ಪವತಿ ಖಾತೆಯ ಆಧಾರದಲ್ಲಿ ಪಹಣಿ, ಎಂ.ಆರ್‌ ಗಳು ಸಕ್ರಮವಾಗಿದ್ದರು, ಪ್ರತ್ಯೇಕ ಪೋಡಿ ಮಾಡಿಕೊಡದೇ ವಿನಾ ಕಾರಣ ಕಾಲಹರಣ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಂಡು ನೊಂದ ಮಹಿಳೆಗೆ ನ್ಯಾಯದೊರಕಿಸಿ ಕೊಡಬೇಕೆಂದು ಶೂದ್ರಸೇನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಸಿ.ರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.

    ನಿರ್ಮಲ ಕೆ.ಎನ್ ಕೋಂ ಲೇಟ್ ರಾಜಕುಮಾರ್ ಬಿನ್, ಕಮಲಮ್ಮ ತುಮಕೂರು ನಗರ ನಿವಾಸಿಯಾದ ಇವರ ಪತಿಯವರಾದ ಲೇಟ್ ರಾಜ್ ಕುಮಾರ್ ಬಿನ್ ಕಮಲಮ್ಮರವರಿಗೆ ಭೂ ನ್ಯಾಯ ಮಂಡಳಿಯಿಂದ 10 ಗುಂಟೆ ವಿಸ್ತೀರ್ಣದ ಜಮೀನು ಸರ್ವೇ ನಂ.3.3ರ ಚನ್ನನದಿಣ್ಣೆ ಪ್ರದೇಶದಲ್ಲಿ ಮಂಜೂರಾಗಿದ್ದು ನ್ಯಾಯಯುತವಾಗಿದೆ.


    Provided by
    Provided by

    ಹಾಗೂ ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳು ಸತ್ಯವಾಗಿವೆ. ತದನಂತರ ಇವರ ಪತಿಯಾದ ರಾಜ್‌ಕುಮಾರ್‌ ರವರು ಮರಣ ಹೊಂದಿದ್ದು, ಪವತಿ ಆಧಾರದಲ್ಲಿ ಇವರ ಹೆಸರಿಗೆ 10ಗುಂಟೆ ವಿಸ್ತೀರ್ಣದಲ್ಲಿ 02ಗುಂಟೆ ಸಾರ್ವಜನಿಕ ರಸ್ತೆಗೆ ಮಿಸಲಾಗಿದ್ದು, ಉಳಿದ 08 ಗುಂಟೆ ಇವರ ಹೆಸರಿಗೆ ಪಹಣಿ, ಎಂ.ಆರ್‌ , ದಾಖಲಾತಿಗಳಿವೆ, ಆದರೆ ಇದೇ ಸರ್ವೆ ನಂಬರ್‌ ಗಳಲ್ಲಿ ಕೆಲವರಿಗೆ ಭೂ ನ್ಯಾಯ ಮಂಡಳಿಯಲ್ಲಿ ಮಂಜೂರಾಗಿದ್ದು, ಅವರೆಲ್ಲರೂ ಜಿಲ್ಲಾಧಿಕಾರಿಗಳ ಮುಖಾಂತರ ಭೂ ಪರಿವರ್ತನೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆ ನಡೆಸುತ್ತಿದ್ದಾರೆ

    ಈ ಸರ್ವೇ ನಂಬರ್ ನಲ್ಲಿ ಮೂಲ ವಿಸ್ತೀರ್ಣ ವ್ಯತ್ಯಾಸವಾಗಿ ಮೂಲ ವಿಸ್ತೀರ್ಣಕ್ಕಿಂತ ಈಗಿನ ವಿಸ್ತೀರ್ಣ ವ್ಯತ್ಯಾಸವಾಗಿದೆ. ಆದ್ದರಿಂದ ನಾವುಗಳು ಈ ಸರ್ವೆ ನಂಬರ್‌ಗಳಿಗೆ ಸಂಬಂಧಿಸಿದಂತೆ ವಿಸ್ತೀರ್ಣ ವ್ಯತ್ಯಾಸದ ಬಗ್ಗೆ ತುಮಕೂರು ಉಪವಿಭಾಗಾಧಿಕಾರಿಗಳಿಗೆ ಮನವಿ ನೀಡಿದ್ದೆವು, ಈ ಮನವಿಗೆ ಸ್ಪಂದಿಸಿದ ವಿಭಾಗಾಧಿಕಾರಿಗಳು ತಮ್ಮ ಪತ್ರದೊಂದಿಗೆ ತುಮಕೂರು ತಾಲ್ಲೂಕು, ತಹಶೀಲ್ದಾರ್‌ರವರಿಗೆ ಈ ವಿಸ್ತೀರ್ಣದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ಆದರೆ ತಹಶೀಲ್ದಾರ್ ಕಛೇರಿಯಲ್ಲಿರುವ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಅಜಯ್‌ ರವರು ಹಾಗೂ ಗ್ರಾಮಲೆಕ್ಕಿಗರಾದ ರವಿಕುಮಾರ್ ಭೂಮಿಕೇಂದ್ರದ ಹೇಮಲತಾರವರು ವಿನ ಕಾರಣ ಯಾವುದೇ ಲೋಪಗಳು ಇಲ್ಲದಿದ್ದರೂ ವಿಸ್ತೀರ್ಣ ವ್ಯತ್ಯಾಸಗಳನ್ನು ಗುರುತಿಸದೇ ಕಳೆದ ಫೆಬ್ರವರಿ ತಿಂಗಳಿನಿಂದ ಡಿಸೆಂಬರ್ ತಿಂಗಳವರೆಗೆ ಏನು ಮಾಡದೇ ಅಲೆದಾಡಿಸಿ, ಅಲೆದಾಡಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿರುತ್ತಾರೆ ಎಂದು ಅವರು ತಿಳಿಸಿದರು.

    ನೊಂದ ಕುಟುಂಬಕ್ಕೆ ನ್ಯಾಯಯುತವಾಗಿ ಬಂದಿರುವ 8 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ವಿಸ್ತೀರ್ಣ ವ್ಯತ್ಯಾಸವಾಗಿರುವುದನ್ನು ಸರಿಪಡಿಸಿಕೊಡಬೇಕು ಹಾಗೂ ಇವರಿಗೆ ಮಾನಸಿಕವಾಗಿ ಹಿಂಸೆಯನ್ನು ನೀಡಿದ ಈ ಮೇಲಿನ ಅಧಿಕಾರಿಗಳ ವಿರುದ್ದ ಕಾನೂನು ರೀತ್ಯಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಅವರು ಇದೇ ವೇಳೆ ಒತ್ತಾಯಿಸಿದರು.

    “ತಾಲೂಕು ಕಚೇರಿ ಬಾಗಿಲು ತಟ್ಟಿ ತಟ್ಟಿ ನಮಗೆ ಸಾಕಷ್ಟು ನೋವು ಉಂಟಾಗಿದೆ. ಜಿಲ್ಲಾಧಿಕಾರಿಗಳು ಕೂಡಲೆ ನಮಗೆ ನ್ಯಾಯ ಕೊಡಿಸಲು ಮುಂದಾಗಬೇಕಿದೆ. ನಮಗೆ ನ್ಯಾಯ ಸಿಗದಿದ್ದರೆ, ನಾವು ಕುಟುಂಬ ಸಮೇತರಾಗಿ ಬಂದು ಜಿಲ್ಲಾಧಿಕಾರಿಗಳಿಗೆ ತುಮಕೂರು ಜಿಲ್ಲೆಯ ಸಂಘಟನೆಗಳ ಮುಖಾಂತರ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ಸಿದ್ದರಿದ್ದೇವೆ” ಎಂದು ನೊಂದ ಮಹಿಳೆಯ ಮಗನಾದ ಸಂದೀಪ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

     

    ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ.…

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.