nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ

    September 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    ತುಮಕೂರು September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    By Ganesh TumkuruSeptember 12, 2026No Comments2 Mins Read
    dr g parameshwar

    ತುಮಕೂರು: ತುಮಕೂರು ದಸರಾ ಕೊಡುಗೆಯಾಗಿ ನಗರದ ಅಮಾ‌ನಿಕೆರೆಯಲ್ಲಿ ನಾವೀನ್ಯಪೂರ್ಣ ತೇಲುವ ಸಂಗೀತ ಕಾರಂಜಿ ಹಾಗೂ ಡಾ.ಶ್ರೀ ಶಿವ ಕುಮಾರ ಸ್ವಾಮೀಜಿ ವೃತ್ತದಲ್ಲಿ ‘ತುಮಕೂರು ಸ್ಕ್ವೇರ್‌’ ಶಾಶ್ವತ ನಿರ್ಮಾಣಕ್ಕೆ ಶುಕ್ರವಾರ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಶಿಲಾನ್ಯಾಸ ನೆರವೇರಿಸಿದರು.

    ಪ್ರತ್ಯೇಕವಾಗಿ ಗುದ್ದಲಿಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಅವರು, ಈ‌ ಉಭಯ ಯೋಜನೆಗಳನ್ನು ಕೇವಲ ದಸರಾ ಹಬ್ಬಕ್ಕಾಗಿ ಮಾಡುತ್ತಿರುವುದಲ್ಲ, ಶಾಶ್ವತವಾಗಿ ಇರಲಿದ್ದು ನಗರವಾಸಿಗಳನ್ನು ರಂಜಿಸಲಿದೆ. ತುಮಕೂರು ನಗರದ ಸೌಂದರ್ಯವೂ ವೃದ್ಧಿಸಲಿದೆ. ಪ್ರಸ್ತುತ ವಾರದ ಪ್ರತಿ ಶನಿವಾರ, ಭಾನುವಾರ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವಂತೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ, ಆದರೆ ದಿನನಿತ್ಯವೂ ಅಗತ್ಯತೆ ಇದ್ದರೆ ಅದನ್ನು ಮುಂದೆ ನೋಡಿಕೊಂಡು ಆರಂಭಿಸಲಾಗುವುದು. ನೂರು ಅಡಿಗೂ ಹೆಚ್ಚು ಎತ್ತರಕ್ಕೆ ತೇಲುವ ಸಂಗೀತ ಕಾರಂಜಿಯು ಸುಮಾರು 300 ಅಡಿ ವಿಸ್ತೀರ್ಣಕ್ಕೆ ಹರಡಲಿದ್ದು, ಕಣ್ಣುಗಳಿಗೆ ರಸದೌತಣ ನೀಡಲಿದೆ.

    ವಿದೇಶಗಳ ಪ್ರಮುಖ ನಗರಗಳಲ್ಲಿ ಜನಾಕರ್ಷಣೆಯ ಸೆಂಟರ್‌ ಗಳಿರುತ್ತವೆ. ಉದಾಹರಣೆಗೆ ನ್ಯೂಯಾರ್ಕ್‌ನ ನ್ಯೂಯಾರ್ಕ್‌ ಸ್ಕ್ವೇರ್‌. ಅದೇ ಮಾದರಿಯಲ್ಲಿ ತುಮಕೂರು ನಗರದಲ್ಲೂ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಸ್ಕ್ವೇರ್‌ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದೇವೆ. ತುಮಕೂರು ಕೂಡ ಆಧುನಿಕತೆಯಲ್ಲಿ ಮುಂದಿರುವುದನ್ನು ಪ್ರದರ್ಶಿಸಲು ತುಮಕೂರು ಮಹಾನಗರ ಪಾಲಿಕೆಯ ಶ್ರೀ ಶಿವಕುಮಾರಸ್ವಾಮಿ ವೃತ್ತದಲ್ಲಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಿಸ್ಪ್ಲೇ ಬೋರ್ಡ್‌ನಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು, ಐತಿಹಾಸಿಕ ಪ್ರಾಮುಖ್ಯತೆಗಳು, ಪ್ರವಾಸಿ ಕೇಂದ್ರಗಳು, ಐತಿಹಾಸಿಕ ಸ್ಥಳಗಳು, ದೇವಸ್ಥಾನಗಳು, ಸಂಸ್ಥೆಗಳನ್ನು ಪ್ರದರ್ಶಿಸಲಾಗುವುದು. ಮನರಂಜನೆಯ ವೇದಿಕೆಯಾಗಿಯೂ ಉಪಯೋಗಿಸಲಾಗುವುದು. ಇದರಿಂದ ತುಮಕೂರು ಸಾಮಾನ್ಯ ಜನರಿಗೆ ದೂರದೂರುಗಳ ಪರಿಚಯ ಸಿಗಲಿದೆ. ಗೋಲ್‌ಗುಮ್ಮಟ, ಹಂಪಿಯಂತಹ ಐತಿಹಾಸಿಕ ಸ್ಮಾರಕ, ಉತ್ಸವಗಳನ್ನು ಇಲ್ಲಿಂದಲೇ ನೋಡಬಹುದಾಗಿದೆ.

    –ಡಾ.ಜಿ.ಪರಮೇಶ್ವರ, ಉಪಮುಖ್ಯಮಂತ್ರಿ

    (ಎಸ್‌ ಎಸ್‌ ವೃತ್ತ) ನಾಲ್ಕು ದಿಕ್ಕಿನಲ್ಲಿ ಬೃಹತ್‌ ಡಿಸ್‌ಪ್ಲೇ ಬೋರ್ಡ್‌ ಅಳವಡಿಸಿ ಕಲೆ, ಸಂಸ್ಕೃತಿ, ಸರ್ಕಾರದ ಯೋಜನೆಗಳ ಮಾಹಿತಿ ಪ್ರಸಾರ ಮಾಡಲಾಗುತ್ತಿದೆ. ಸರ್ಕಲ್‌ ಹೆಸರನ್ನು ಬದಲಾಯಿಸುವುದೇ ಉದ್ದೇಶಕ್ಕಕ್ರಮದೊಂದಿಲ್ಲ. ಡಾ.ಶ್ರೀ ಶಿವಕುಮಾರಸ್ವಾಮೀಜಿ ವೃತ್ತ ಶಿವಕುಮಾರಸ್ವಾಮೀಜಿ ವೃತ್ತವಾಗಿಯೇ ಉಳಿಯಲಿದೆಯೆಂದರು.

    ಸೂಕ್ತ ದಾಖಲೆ ಒದಗಿಸಿದರೆ ಪಿಂಚಣಿ ಮರುಜಾರಿ: 23 ಲಕ್ಷ ಪಿಂಚಣಿದಾರರ ಪಿಂಚಣಿ ಸ್ಥಗಿತಗೊಳಿಸಿರುವ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಅವರು ನಮ್ಮ ಸರ್ಕಾರದ ಗರಿಷ್ಠ ಆದಾಯ ಮಿತಿಯನ್ನು 33 ಸಾವಿರ ರೂ.ಗಳಿಂದ 1.2 ಲಕ್ಷ ರೂ. ಗೆ ಏರಿಕೆ ಮಾಡಿದೆ. ಇದೀಗ ಸ್ಥಗಿತಗೊಂಡಿರುವ ಪಿಂಚಣಿದಾರರು ಸೂಕ್ತ ವಯಸ್ಸಿನ ದೃಢೀಕರಣ ಪತ್ರ, ಆದಾಯ ಮತ್ತು ವಿಳಾಸ ಪ್ರಮಾಣಪತ್ರಗಳನ್ನು ಒದಗಿಸಿದರೆ ಪಿಂಚಣಿ ಮುಂದುವರಿಯಲಿದೆ. ವಯಸ್ಸು ಅಗದವರೂ, ಟ್ಯಾಕ್ಸ್ ಕಟ್ಟುವವರು, ಸರ್ಕಾರಿ ನೌಕರರು ಪಿಂಚಣಿ ಪಡೆಯುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

    ಕೇಂದ್ರಕ್ಕೆ ಬರ ಪರಿಹಾರ ಕೋರಿಕೆ ಸಂಬಂಧ ಸರ್ಕಾರ ನಿಯೋಗ ತೆರಳುವುದೇ ಎಂಬ ಪ್ರಶ್ನೆಗೆ ಮೊದಲು 2 ಪತ್ರ ಬರೆಯುತ್ತೇವೆ. ಸ್ಪಂದಿಸದಿದ್ದರೆ 3ನೇ ಪತ್ರ ಬರೆದು ನಿಯೋಗದಲ್ಲಿ ಪ್ರಧಾನಿ ಭೇಟಿಯಾಗುವುದಾಗಿ ತಿಳಿಸಿದರು. ಈ ವೇಳೆ ಬಿಎಂಟಿಸಿ ಉಪಾಧ್ಯಕ್ಷ ನಿಖೇತ್‌ರಾಜ್‌ ಮೌರ್ಯ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪಾಲಿಕೆ ಆಯುಕ್ತ ಬಿ.ಶುಭ, ಟೂಡಾ ಆಯುಕ್ತ ಉಮೇಶ್‌ಚಂದ್ರ, ಪಾಲಿಕೆ ಕಂದಾಯ ಉಪ ಆಯುಕ್ತ ಮನುಕುಮಾರ್, ಎಕ್ಸಿ ಕ್ಯೂಟಿವ್‌ ಎಂಜಿನಿಯರ್‌ ಸಂದೀಪ್ ಸೇರಿ ಹಲವರಿದ್ದರು.

    ಅವಶ್ಯವಾದರೆ ನಕ್ಸಲ್ ನಿಗ್ರಹ ದಳ ಪಾವಗಡಕ್ಕೆ:

    ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ಪೋಸ್ಟರ್ ಪ್ರತ್ಯಕ್ಷವಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು ನನ್ನ ಗಮನಕ್ಕೆ ಬಂದಿದೆ. ಎಸ್‌ ಪಿ ಅವರ ಜೊತೆ ಈ ಕುರಿತು ಚರ್ಚೆ ಮಾಡುತ್ತೇನೆ. ಅಂತಹ ಬೆಳವಣಿಗೆ ಕಂಡುಬಂದರೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗುವುದು. ನಕ್ಸಲ್ ಮುಕ್ತ ಕರ್ನಾಟಕ ಘೋಷಣೆ ಬಳಿಕ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ದಳವನ್ನು ಸಂಪೂರ್ಣವಾಗಿ ಮುಚ್ಚಿಲ್ಲ. ಅರ್ಧ ಪಡೆಯನ್ನು ಕೋಮು ಗಲಭೆ ನಿಯಂತ್ರಣಕ್ಕಾಗಿ ಸ್ಪೆಷಲ್‌ ಟಕ್ಕನ್‌ ಫೋರ್ಸ್‌ ಆಗಿ ಪರಿವರ್ತಿಸಲಾಗಿದೆ. ಇನ್ನರ್ಧ ಪಡೆ ದಳ ಆಗಿಯೇ ಕಾರ್ಯಾಚರಣೆ ನಡೆಸುತ್ತಿದೆ. ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ಖಾತ್ರಿಯಾದರೆ ನಕ್ಸಲ್ ನಿಗ್ರಹ ಪಡೆಯನ್ನು ಅಲ್ಲಿಗೆ ಕಳುಹಿಸುತ್ತೇವೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು: ಕಳೆದ ಎರಡು ದಶಕಗಳಿಂದ ಶಾಂತವಾಗಿದ್ದ ಪಾವಗಡ ತಾಲ್ಲೂಕಿನಲ್ಲಿ ಮತ್ತೆ ನಕ್ಸಲ್ ಹಾಗೂ ಬ್ಲ್ಯಾಕ್‌ ಮೇಲ್ ಚಟುವಟಿಕೆಗಳು ಮುನ್ನೆಲೆಗೆ ಬಂದಿವೆ.…

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ

    September 11, 2026

    ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ

    September 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.