ಮಧುಗಿರಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ತೀವ್ರ ಅಸ್ವಸ್ಥನಾಗಿರುವ ಗಾಯಾಳು ವ್ಯಕ್ತಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಮಿಡಿಗೇಶಿ ಹೋಬಳಿ ಗಂಪಲಹಳ್ಳಿ ಗ್ರಾಮದ ನಿವಾಸಿ ನಾಗಭೂಷಣ್ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಗಾಯಾಳು ವ್ಯಕ್ತಿ, ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು.
ಕೆಲ ವರ್ಷಗಳ ಹಿಂದೆ ಇದೇ ಗ್ರಾಮದ ರಮೇಶ್ ಬಿನ ಕರಿಯಪ್ಪ ಹಾಗೂ ಹಲ್ಲೆಗೆ ಒಳಗಾದ ನಾಗಭೂಷಣ್ ರವರ ಮಧ್ಯೆ ಕುಲ್ಲಕ್ಷ ಕಾರಣಕ್ಕೆ ಜಗಳವಾಗಿ ವೈಮನಸ್ಸಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ರಮೇಶ್ ಅವರು ನಾಗಭೂಷಣ್ ರವರ ಮನೆಗೆ ಏಕಾಏಕಿ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ದೊಣ್ಣೆಯಿಂದ ನಾಗಭೂಷಣ್ ಕೈಕಾಲುಗಳಿಗೆ ರಕ್ತ ಬರುವಂತೆ ಹೊಡೆದು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಯಾಳು ನಾಗಭೂಷಣ್ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.