ತುರುವೇಕೆರೆ: ತಾಲೂಕಿಗೆ ಇದೇ ತಿಂಗಳು 12ನೇ ತಾರೀಕಿನಂದು ಜಾತ್ಯತೀತ ಜನತಾದಳದ ಪಂಚ ರತ್ನ ರಥಯಾತ್ರೆ ಆಗಮಿಸಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇನ್ನು ಅನೇಕ ಮುಖಂಡರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈಗಾಗಲೇ ತುಮಕೂರು ಜಿಲ್ಲೆಗೆ ಈ ರಥಯಾತ್ರೆ ಆಗಮಿಸಿ, ಗುಬ್ಬಿ, ಶಿರಾ, ಮಧುಗಿರಿ, ಪಾವಗಡದಲ್ಲಿ ಯಾತ್ರೆ ಮುಗಿದಿದ್ದು, 12ರಂದು ತುರುವೇಕೆರೆ ತಾಲೂಕಿನ, ಗ್ರಾಮಗಳಿಗೆ ಆಗಮಿಸಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವುದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ, ರೈತರಿಗೆ ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣ ವ್ಯವಸ್ಥೆ, ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ ಜೊತೆಗೆ ಯುವಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ, ವಸತಿ ಇಲ್ಲದವರಿಗೆ ಸರಕಾರದಿಂದಲೇ ವಸತಿ ಕಟ್ಟಿಸಿ ಕೊಡುವ ಯೋಜನೆ ಹಾಗೂ ಸ್ತ್ರೀಶಕ್ತಿ ಸಂಘದ ಎಲ್ಲಾ ಸಾಲವನ್ನು ಮನ್ನಾ ಮಾಡುವುದು ಈ ಪಂಚರತ್ನ ರಥಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಈ ರಥಯಾತ್ರೆ ತಾಲೂಕಿನ ಗ್ರಾಮಗಳಾದ ದಂಡಿನಶಿವರ, ಸಂಪಿಗೆ ಹೊಸಹಳ್ಳಿ, ಕಲ್ಲೂರು, ಸಿ ಎಸ್.ಪುರ, ಶೆಟ್ಟಿಗೊಂಡನಹಳ್ಳಿ, ಮಾಯಸಂದ್ರ, ಮಾವಿನಕೆರೆ, ಮೇಲಿನಒಳಗೆರಹಳ್ಳಿ, ಸಂಜೆ 5:20ಕ್ಕೆ ದಬ್ಬೇಗಟ್ಟ ಗ್ರಾಮದಲ್ಲಿ ಗ್ರಾಮ ಸಭೆ ನಂತರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತು ಅವರ ತಂಡ ಅಲ್ಲೇ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷರಾದ ವಿಜಯಕುಮಾರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಚಂದ್ರೇಶ್, ಕಲ್ಲಹಳ್ಳಿ ಸಿದ್ದೇಗೌಡರು, ಶಂಕ್ರಣ್ಣ, ಮಂಗಿ ಕುಪ್ಪೆ ಬಸವರಾಜು, ರಾಜೇಂದ್ರ ಮುತ್ತುಗದ ಹಳ್ಳಿ, ಆನಂದ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy