nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರ್ಷಾಂತ್ಯದಲ್ಲಿ ಯಾವುದೇ ಅನುದಾನ ರದ್ದಾಗದಂತೆ ಕ್ರಮವಹಿಸಲು ದೀಪ ಚೋಳನ್ ಸೂಚನೆ
    ತುಮಕೂರು January 29, 2025

    ವರ್ಷಾಂತ್ಯದಲ್ಲಿ ಯಾವುದೇ ಅನುದಾನ ರದ್ದಾಗದಂತೆ ಕ್ರಮವಹಿಸಲು ದೀಪ ಚೋಳನ್ ಸೂಚನೆ

    By adminJanuary 29, 2025No Comments2 Mins Read
    tumakuru

    ತುಮಕೂರು:  ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲಿಂಕ್‌ ಡಾಕ್ಯುಮೆಂಟ್, ರಾಜ್ಯ ಹಾಗೂ ಕೇಂದ್ರದಿಂದ ಯಾವುದೇ ಕಾಮಗಾರಿ/ಕಾರ್ಯಕ್ರಮ/ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ರದ್ದಾಗದಂತೆ ಈ ಆರ್ಥಿಕ ವರ್ಷದೊಳಗಾಗಿ ಖರ್ಚು ಮಾಡಬೇಕು ಎಂದು ನಿರ್ದೇಶನ ನೀಡಿದರು.


    Provided by
    Provided by

    ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದರಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿರಬೇಕು. ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಿಕೊಳ್ಳಬಾರದು ಎಂದು ತಿಳಿಸಿದರಲ್ಲದೆ, ಮಳೆಯಿಂದ ಶಿಥಿಲವಾದ ಶಾಲಾ ಕೊಠಡಿಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಕಾಲ ಕಾಲಕ್ಕೆ ದುರಸ್ತಿ ಕೈಗೊಂಡಲ್ಲಿ ಮಕ್ಕಳಿಗೆ ತರಗತಿ ನಡೆಸಲು ಕೊಠಡಿಗಳ ಕೊರತೆ ಉಂಟಾಗದು ಎಂದು ಸಲಹೆ ನೀಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು ಅಂಕಿ–ಅಂಶಗಳ ಪ್ರಕಾರ ಸರ್ಕಾರದಿಂದ ಮಂಜೂರಾದ 683 ಅಂಗನವಾಡಿ ಕಟ್ಟಡಗಳ ಪೈಕಿ 548 ಕಟ್ಟಡಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದಂತೆ 84 ಕಟ್ಟಡ ಕಾಮಗಾರಿಗಳು ಪ್ರಗತಿಯಲ್ಲಿದ್ದು, 51 ಕಟ್ಟಡಗಳನ್ನು ಪ್ರಾರಂಭಿಸಿಯೇ ಇಲ್ಲ. ಮೂರ‍್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಬಹುದಾದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಈವರೆಗೂ ಪ್ರಾರಂಭಿಸದೆ ಬಾಕಿ ಉಳಿಸಲು ಕಾರಣವೇನೆಂದು ಪ್ರಶ್ನಿಸಿದಾಗ ಇಲಾಖಾಧಿಕಾರಿ ದಿನೇಶ್ ಮಾಹಿತಿ ನೀಡುತ್ತಾ, ಶೀಘ್ರದಲ್ಲಿಯೇ ಸ್ಥಳೀಯ ಜನಪ್ರತಿನಿಧಿಗಳಿಂದ ಕಾಮಗಾರಿಯ ಚಾಲನೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ನಂತರ ಮಾತನಾಡಿದ ಕಾರ್ಯದರ್ಶಿಗಳು ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳಬೇಕು. ಯಾವುದೇ ಸಬೂಬು ನೀಡದೆ ಮಂಜೂರಾದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.

    ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ತಜ್ಞ ವೈದ್ಯರ ಕೊರತೆಯಿದೆ ಎಂದು ಕಾರ್ಯದರ್ಶಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ದೀಪ ಚೋಳನ್ ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿದ್ದು, ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯಡಿ ನಿಯಮ ಉಲ್ಲಂಘಿಸಿದ ತುರುವೇಕೆರೆ ಹಾಗೂ ಕುಣಿಗಲ್‌ನಲ್ಲಿ 2 ಸ್ಕ್ಯಾನಿಂಗ್ ಸೆಂಟರ್ ಹಾಗೂ ಹುಳಿಯಾರಿನಲ್ಲಿ 1 ನರ್ಸಿಂಗ್ ಹೋಮ್ ಅನ್ನು ಜಪ್ತಿ ಮಾಡಲಾಗಿದೆ. ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ ಶಾಲಾ ಕಾಲೇಜುಗಳಲ್ಲಿ ಕಾಲ–ಕಾಲಕ್ಕೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಯಕ್ರಮದಡಿ ಮನೆ-ಮನೆಗೆ ಭೇಟಿ ನೀಡಿ ಈವರೆಗೂ 7 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡುವ ಮೂಲಕ ಮಧುಮೇಹ, ರಕ್ತದೊತ್ತಡ, ಕುಷ್ಠರೋಗ, ಕ್ಷಯ ಸೇರಿದಂತೆ ವಿವಿಧ ರೋಗಗಳನ್ನು ಪತ್ತೆ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

    ಕೃಷಿ ಜಂಟಿ ನಿರ್ದೇಶಕ ರಮೇಶ್ ಮಾತನಾಡಿ, ಕೃಷಿ ಭಾಗ್ಯ ಯೋಜನೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡ, ಕ್ಷೇತ್ರ ಬದು, ಪಾಲಿಥೀನ್ ಹೊದಿಕೆ, ತುಂತುರು ನೀರಾವರಿ ಘಟಕ, ಡೀಸೆಲ್ ಪಂಪ್ ಸೆಟ್ ಹಾಗೂ ಹೊಂಡದ ಸುತ್ತ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಆರ್ಥಿಕ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಪಾಲನೆ, ಶಿಕ್ಷಣ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.