ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕೇಜ್ರಿವಾಲ್ ಅವರ ಬಂಧನವು ಕಾನೂನಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಬಂಧನವನ್ನು ಕಾನೂನುಬಾಹಿರವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದರು.
ವೀಡಿಯೊ ಕಾನ್ಸರೆನ್ಸಿಂಗ್ ಮೂಲಕ ನನ್ನನ್ನು ಪ್ರಶ್ನಿಸಬಹುದಿತ್ತು ಎಂಬ ಕೇಜ್ರಿವಾಲ್ ಅವರ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಲಯವು “ತನಿಖೆಯನ್ನು ಹೇಗೆ ಮಾಡಬೇಕೆಂದು ಆರೋಪಿಗೆ ನಿರ್ಧರಿಸಲು ಅವಕಾಶವಿಲ್ಲ. ಆರೋಪಿಯ ಅನುಕೂಲಕ್ಕೆ ತಕ್ಕಂತೆ ವಿಚಾರಣೆ ನಡೆಯುವುದಿಲ್ಲ. ಈ ನ್ಯಾಯಾಲಯವು ಸಾರ್ವಜನಿಕರಿಗೊಂದು, ಸಾರ್ವಜನಿಕ ಸೇವಕರಿಗೆ ಒಂದು ರೀತಿಯಲ್ಲಿ ವಿಚಾರಣೆ ಮಾಡಲಾಗುವುದಿಲ್ಲ” ಎಂದು ಹೇಳಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296