nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಮಟ್ಟದಲ್ಲಿ ಭಾರತದ ವೈದ್ಯರಿಗೆ ಬೇಡಿಕೆ: ಜಾಗತಿಕ ಪೈಪೋಟಿ ಎದುರಿಸಲು ಸನ್ನದ್ದರಾಗುವುದು ಇಂದಿನ ಅಗತ್ಯ: ಡಾ.ಜಿ.ಪರಮೇಶ್ವರ್
    ರಾಜ್ಯ ಸುದ್ದಿ November 9, 2024

    ವಿಶ್ವಮಟ್ಟದಲ್ಲಿ ಭಾರತದ ವೈದ್ಯರಿಗೆ ಬೇಡಿಕೆ: ಜಾಗತಿಕ ಪೈಪೋಟಿ ಎದುರಿಸಲು ಸನ್ನದ್ದರಾಗುವುದು ಇಂದಿನ ಅಗತ್ಯ: ಡಾ.ಜಿ.ಪರಮೇಶ್ವರ್

    By adminNovember 9, 2024No Comments3 Mins Read
    dr g parameshwar

    ತುಮಕೂರು:  ವಿಶ್ವಮಟ್ಟದಲ್ಲಿ ಭಾರತದ ವೈದ್ಯರಿಗೆ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ತಂತ್ರಜ್ಞಾನ ಅಳವಡಿಕೆ, ಪರಸ್ಪರ ಶೈಕ್ಷಣಿಕ ಅಧ್ಯಯನ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬಂಧಪಟ್ಟಂತೆ ಒಪ್ಪಂದಗಳನ್ನು ಮಾಡಿಕೊಳ್ಳುವುದರ ಮೂಲಕ ಜಾಗತಿಕ ಪೈಪೋಟಿಯನ್ನು ಎದುರಿಸಲು ಸನ್ನದ್ದರಾಗುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾಹೇ ವಿವಿ ಕೂಡ ಅಂತಾರಾಷ್ಟ್ರೀಯ ವಿವಿಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ ಎಂದು ಸಾಹೇ ವಿವಿಯ ಕುಲಾಧಿಪತಿ  ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು.

    ನಗರದ ಹೊರವಲಯದ ಅಗಳಕೋಟೆಯ ಡಾ.ಎಚ್.ಎಂ. ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ  ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ವಿಶ್ವವಿದ್ಯಾಯಲದ ವ್ಯಾಪ್ತಿಯ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ,  ಡೆಂಟಲ್ ಕಾಲೇಜು ಹಾಗೂ  ನೆಲಮಂಗಲದ ಶ್ರೀ ಸಿದ್ಧಾರ್ಥ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್‌ ನ  2024—25 ನೇ ಶೈಕ್ಷಣಿಕ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ‘ವೈಟ್ ಕೋಟ್ ಧಾರಣೆ ಮತ್ತು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


    Provided by
    Provided by

    ಈ ಹಿಂದೆ ಇದ್ದ ಕಲಿಕಾ ಪದ್ದತಿ ಹಾಗೂ ಇಂದಿನ ಕಲಿಕಾ ಪದ್ದತಿಯಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಆಧುನಿಕ ತಂತ್ರಜ್ಷಾನದೊಂದಿಗೆ ಕಲಿಕೆ ಸರಳವಾಗಿದೆ. ಅದೇ ರೀತಿ ಪೈಪೋಟಿ ಎದುರಾಗಿದೆ. ವಿಶ್ವ ಮಟ್ಟದಲ್ಲಿ ಫ್ಲೋರಿಡಾ ವಿವಿ, ಆವಲಾನ್  ವಿವಿಗಳೊಂದಿಗೆ ವಿದ್ಯಾರ್ಥಿ, ಪ್ರಾಧ್ಯಾಪಕರ, ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬಂಧಪಟ್ಟಂತೆ ಅಂತಾರಾಷ್ಟ್ರೀಯ ವಿವಿಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದ್ದು ಇಂದು ಸಿದ್ದಾರ್ಥ ಸಂಸ್ಥೆಯು ತನ್ನ ವಿದ್ಯಾರ್ಥಿಗಳು ವಿಶ್ವಮಟ್ಟದಲ್ಲಿ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಸಾಧ್ಯವಾಗಿಸಿದೆ. ಇದು ವಿಶ್ವ ಮಟ್ಟದಲ್ಲಿ ತನ್ನ ಉಪಸ್ಥಿತಿಯನ್ನು ಸಾರಿ ಹೇಳಿದೆ ಎಂದು ಡಾ.ಜಿ.ಪರಮೇಶ್ವರ್ ನುಡಿದರು.

    ವಿದ್ಯಾರ್ಥಿಗಳು ಕೂಡ ಆತ್ಮವಿಶ್ವಾಸದೊಂದಿಗೆ ತಮ್ಮ ಶೈಕ್ಷಣಿಕ ಬೆಳವಣಿಗೆ ಜೊತೆಗೆ ತಮ್ಮಲ್ಲಿ ಅಡಗಿರುವ ಪ್ರತಿಭೆಗನುಗುಣವಾಗಿ ಗಂಭೀರವಾಗಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಸಾಹಿತ್ಯ ಚಟುವಟಿಕೆಗಲ್ಲೂ ತೊಡಗಿಸಿಕೊಂಡು ಉನ್ನತ ಮಟ್ಟದಲ್ಲಿ ಭಾಗವಹಿಸಿ ಬೆಳೆಯಬೇಕು. ತಾವು ಕೂಡ ಶೈಕ್ಷಣಿಕ ಆಧ್ಯಯನಕ್ಕೆ ತೊಂದರೆ ಮಾಡಿಕೊಳ್ಳದ ಹಾಗೆ ರಾಷ್ಟ್ರಮಟ್ಟದ ಅಂತರ್ ವಿವಿ ಕ್ರೀಡೆಗಳಲ್ಲಿ ಭಾಗವಹಿಸಿ ಸಾಧನೆಗಳನ್ನು ಮಾಡಿರುವುದನ್ನು ಈ ಸಂದರ್ಭದಲ್ಲಿ ಡಾ.ಪರಮೇಶ್ವರ ಸ್ಮರಿಸಿದರು.

    ಗ್ರಾಮಾಂತರ ಪ್ರದೇಶದವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ತಲುಪಿಸುವುದಾಗಿದೆ. ಇದರಲ್ಲಿ ಸಂಸ್ಥೆ ಗರಿಷ್ಠ ಮಟ್ಟದ ಸಾಧನೆ ಮಾಡಿರುವುದು ಸಂತೋಷದ ವಿಷಯವಾಗಿದೆ. ವೈದ್ಯಕೀಯ ಮಹಾವಿದ್ಯಾಲಯದಿಂದ 40 ಸಾವಿರ ವೈದ್ಯರು ಹಾಗೂ 30 ಸಾವಿರ ಇಂಜಿನಿಯರ್‌ ಗಳನ್ನು ಸಮಾಜಕ್ಕೆ  ಸಿದ್ದಾರ್ಥ ಸಂಸ್ಥೆ ನೀಡಿದೆ ಎಂದು ಡಾ.ಜಿ.ಪರಮೇಶ್ವರ್ ಅವರು, ಪ್ರಾಧ್ಯಾಪಕ ವೃಂದದವರು ಅಂತರಾಷ್ಟ್ರೀಯ ವಿವಿ ಒಪ್ಪಂದಗಳ ಷರತ್ತಿಗೆ ಒಳಪಟ್ಟು ಹೊರದೇಶಕ್ಕೆ ಹೋಗಿ ಅಧ್ಯಯನ ಮಾಡಿ, ಮರಳಿ ಬಂದು ಸಂಸ್ಥೆಯ ವಿದ್ಯಾರ್ಥಿಗಳಿಗೆ ಕಲಿಸುವ ಗುಣಧರ್ಮ ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು.

    ರ‍್ಯಾಗಿಂಗ್‌ ಗೆ ಅವಕಾಶವಿಲ್ಲ:

    ಮುಖ್ಯ ಅಥಿತಿಗಳಾಗಿ ಮಾತನಾಡಿದ ಉನ್ನತ ಶಿಕ್ಷಣರಾದ ಡಾ.ಎಂ.ಸಿ.ಸುಧಾಕರ್, ಇತ್ತೀಚಿನ ದಿನಗಳಲ್ಲಿ ಕ್ಯಾಂಪಸ್‌ ಗಳಲ್ಲಿ ರ‍್ಯಾಗಿಂಗ್ ನಡೆಯುವುದು ಕಡಿಮೆಯಾಗಿದೆ. ಹಾಗಂತ ಕಾನೂನು ವ್ಯಾಪ್ತಿ ಮೀರಿ ರ‍್ಯಾಗಿಂಗ್ ನಂತಹ ಚಟುವಟಿಗಳನ್ನು ನಡೆಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಖಿಲ ಭಾರತ ವೈದ್ಯಕೀಯ ಪರಿಷತ್ತು ನಿಬಂಧನಗಳನ್ನು ವಿಧಿಸಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಸಿದರು.

    ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕಾದರೆ ನಿರಂತರ ಅಧ್ಯಯನ ಮಾಡಿ. ಕಾಲೇಜು ದಿನಗಳನ್ನು ಆಸ್ವಾದಿಸಿ. ಆದರೆ ಸುಮ್ಮನೆ ಸುತ್ತಾಡಿ ಕಾಲಹರಣ ಮಾಡಬೇಡಿ. ಕ್ರಿಯಾತ್ಮಕವಾಗಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಕಾಲ ಕಳೆಯಿರಿ. ಬಿಳಿಸಮವಸ್ತ್ರ ಧರಿಸಿದ ನಂತರ ನಿಮ್ಮಲ್ಲಿ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಅವರು ಸಲಹೆ ನೀಡಿದರು.

    ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶಕರಾದ ಡಾ.ಬಿ.ಎಲ್.ಸುಜಾತ ರಾಥೋಡ್ ಅವರು ಮಾತನಾಡಿ, ಸಮಾಜದಲ್ಲಿ ವೈದ್ಯಕೀಯ ವೃತ್ತಿಗೆ ಜವಾಬ್ದಾರಿಯುತ ಸ್ಥಾನವಿದೆ. ಅದರ ಸ್ಥಾನ–ಮಾನಗಳನ್ನು ಅರಿತು ಕಾರ್ಯನಿರ್ವಹಣೆಗೆ ನಿಮ್ಮ ಮನೋಸ್ಥಿತಿಗಳನ್ನು ಸಜ್ಜುಗೊಳಿಸಿಕೊಳ್ಳಿ ಎಂದು ಸಲಹೆ ನೀಡಿದರು.

    ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಸಾಹೇ ವಿವಿಯ ಉಪ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಡಾ.ಎಂ.ಝೆಡ್. ಕುರಿಯನ್, ಪರಿಕ್ಷಾಂಗ ನಿಯಂತ್ರಕರಾದ ಡಾ.ಜಿ.ಗುರುಶಂಕರ್, ಪ್ರಾಂಶುಪಾಲರಾದ ಡಾ. ಸಾಣಿಕೊಪ್ಪ, ಡಾ.ದಿವಾಕರ್, ಡಾ.ಪ್ರವೀಣ್ ಕುಡುವಾ, ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಸೇರಿದಂತೆ ಸಮೂಹ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಿಗೆ ಸಾಹೇ ಕುಲಾಧಿಪತಿಗಳು ವೈದ್ಯಕೀಯ ಸಮವಸ್ತ್ರ ‘ವೈಟ್ ಕೋಟ್’ ಗಳನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರು ನೂತನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.