nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ರಸ್ತೆಗಳಿಗೆ ಟೋಲ್ ಗೇಟ್ ಅನ್ನೋ ಗ್ರಹಣ | ಅಕ್ರಮ ಟೋಲ್ ಗೇಟ್‍ಗಳಿಂದ ಬೇಕು ಮುಕ್ತಿ ಜನರಿಗೆ
    ರಾಜ್ಯ ಸುದ್ದಿ January 31, 2023

    ದೇಶದ ರಸ್ತೆಗಳಿಗೆ ಟೋಲ್ ಗೇಟ್ ಅನ್ನೋ ಗ್ರಹಣ | ಅಕ್ರಮ ಟೋಲ್ ಗೇಟ್‍ಗಳಿಂದ ಬೇಕು ಮುಕ್ತಿ ಜನರಿಗೆ

    ಬೋವಿ ಸಮಾಜದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್, ರೈತ ಮುಖಂಡ ರೇವಣ್ಣ ಆಕ್ರೋಶ
    By adminJanuary 31, 2023No Comments3 Mins Read
    tollgeat

    ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಲು ಇರುವ ದೂರ 180 ಕಿ.ಮೀ.  ಆದ್ರೆ, ಕೇವಲ 180 ಕಿ.ಮೀ. ಅಂತದಲ್ಲಿ ನಾಲ್ಕು ಟೋಲ್ ಗೇಟ್ ಗಳು ಕಾರ್ಯಾಚರಿಸುತ್ತಿದ್ದು, ಸಾರ್ವಜನಿಕರನ್ನು ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಬೋವಿ ಸಮಾಜದ ಜಿಲ್ಲಾಧ್ಯಕ್ಷ ಸಂದೀಪ್ ಕುಮಾರ್  ಹಾಗೂ ರೈತ ಮುಖಂಡ ರೇವಣ್ಣ ಜಂಟಿ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸುವ ವೇಳೆ  ನೆಲಮಂಗಲ ಕುಣಿಗಲ್ ರಸ್ತೆ ಟೋಲ್, ಬೆಳ್ಳೂರು ಕ್ರಾಸ್(ಆದಿಚುಂಚನ ಗಿರಿ) ಟೋಲ್, ಹಿರಿಸಾವೆ ಟೋಲ್, ಶಾಂತಿ ಗ್ರಾಮ ಟೋಲ್ ಗಳಲ್ಲಿ ಸಾರ್ವಜನಿಕರು ಹಣ ಪಾವತಿಸಿ ಪ್ರಯಾಣಿಸಬೇಕಾದ ದುಸ್ಥಿತಿ ಇದೆ. ಬೆಳ್ಳೂರು ಕ್ರಾಸ್ (ಆದಿಚುಂಚನಗಿರಿ ) ಟೋಲ್ ನಿಂದ ಹಿರಿಸಾವೆ ಟೋಲ್ ಸಾಗಲು ಕೇವಲ 17km ಇದೆ. ಆದ್ರೆ 17 ಕಿ.ಮೀ. ಅಂತರದಲ್ಲಿ ಟೋಲ್ ಗೇಟ್ ನಿರ್ಮಿಸಿ ಸಾರ್ವಜನಿಕರಿಂದ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    60 ಕಿ.ಮೀ. ಒಳಗಡೆಯ ಟೋಲ್ ಗೇಟ್ ಗಳನ್ನು ತೆರವುಗೊಳಿಸುವ ಬಗ್ಗೆ ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಘೋಷಣೆ ಮಾಡಿದ್ದಾರೆ. ಆದರೆ ಇದು ಕರ್ನಾಟಕದಲ್ಲಿ ಅನ್ವಯವಾಗುವುದಿಲ್ಲವೇ? ಎಂದು ಅವರು ಪ್ರಶ್ನಿಸಿದರು.

    ಮನಬಂದಂತೆ ಟೋಲ್ ಗೇಟ್ ಗಳು ಎದ್ದು ನಿಲ್ಲುತ್ತಿದೆ. ಸಾರ್ವಜನಿಕರು ತಮ್ಮ ವಾಹನಗಳಿಗೆ ಹಾಕುವ ಪೆಟ್ರೋಲ್, ಡೀಸೆಲ್ ಗಿಂತಲೂ ಹೆಚ್ಚು ಹಣವನ್ನು ಟೋಲ್ ಗೇಟ್ ಗಳಿಗೆ ನೀಡುವಂತಾಗಿದೆ. ಶಾಂತಿ ಗ್ರಾಮ ಟೋಲ್ ಗೇಟ್ ನಿಂದಾಗಿ ಸಮೀಪದಲ್ಲಿರುವ ಗ್ರಾಮ ನಿವಾಸಿಗಳಿಗೆ ಟೋಲ್ ಗೇಟ್ ನಿಂದಾಗಿ ತೀವ್ರ ತೊಂದರೆಯಾಗುತ್ತಿದೆ. ಸ್ಥಳೀಯ ಮಟ್ಟದ ಮದುವೆ ಸಮಾರಂಭಗಳಿಗೆ ವಾಹನಗಳು ಬರಬೇಕಾದರೂ ಟೋಲ್ ಹಣ ಪಾವತಿಸಿಯೇ ಬರಬೇಕಾದ ಸ್ಥಿತಿ ಸ್ಥಳೀಯರದ್ದಾಗಿದೆ.  ಟೋಲ್ ಗೇಟ್ ಬಳಿಯಿಂದ ಪ್ರತಿನಿತ್ಯ ಓಡಾಡುತ್ತಿರುವ ಸಾಮಾನ್ಯ ಜನರಿಗೂ ತೆರಿಗೆ ಹೊರ ಬೀಳುತ್ತಿದೆ. ಈ ಬಗ್ಗೆ ಪ್ರಶ್ನಿಸುವಂತಿಲ್ಲ, ಸಾರ್ವಜನಿಕರು ಟೋಲ್ ಗೇಟ್ ಸಿಬ್ಬಂದಿಗೆ ಹೆದರಿ ಕೊಂಡು ಪ್ರಯಾಣಿಸುವ ದುಸ್ಥಿತಿ ಇದೆ ಎಂದು ದೂರಿದರು.

    ನಮ್ಮ ರಾಜ್ಯದ ಜನರಿಗೆ ಸಾರ್ವಜನಿಕರಿಗೆ ಟೋಲ್ ವಿಚಾರವಾಗಿ ಹೆಚ್ಚಿನ ಮಾಹಿತಿ ಇಲ್ಲ, ಇದನ್ನೇ ಬಂಡವಾಳ ಮಾಡಿಕೊಂಡಿರುವ ಟೋಲ್ ಕಂಪೆನಿ ಸರ್ವೀಸ್ ರಸ್ತೆಗಳಿಗೂ ಟೋಲ್ ಸಂಗ್ರಹ ಮಾಡುತ್ತಿರುವಂತಹ ಘಟನೆಗಳು ನಡೆಯುತ್ತಿವೆ. ರಸ್ತೆಗಳು ಕೂಡ ಅಲ್ಲಲ್ಲಿ ಅರ್ಧಂಬರ್ಧ ಕಾಮಗಾರಿ ನಡೆಯುತ್ತಿದ್ದರೂ, ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸುವ ಗೋಜಿಗೆ ಜನಪ್ರತಿನಿಧಿಗಳು ಕೂಡ ಮುಂದಾಗುತ್ತಿಲ್ಲ, ಉಡುಪಿಯ ಹೆಜಮಾಡಿ ಟೋಲ್ ಗೇಟ್ ಬಗ್ಗೆ ಅಲ್ಲಿನ ಜನರು ಹೋರಾಟ ನಡೆಸಿ ನ್ಯಾಯ ಪಡೆದುಕೊಂಡರು, ಆದರೆ, ಬೆಂಗಳೂರಿನಿಂದ ಹಾಸನ ವರೆಗೆ ದಿನನಿತ್ಯ ಗಣ್ಯರು, ಹಲವಾರು ಸಂಘಟನೆಗಳ ನಾಯಕರು, ಗ್ರಾಮದ ಮುಖಂಡರು ಟೋಲ್ ನೀಡಿ ಪ್ರಯಾಣಿಸಿದರು, ಇದೊಂದು ಅನ್ಯಾಯ ಎಂದು ಧ್ವನಿ ಎತ್ತದೇ ಇರುವುದು ಅಚ್ಚರಿಯ ವಿಚಾರವಾಗಿದೆ ಎಂದು ಹೇಳಿದರು.

    ರಾಜ್ಯದಲ್ಲಿ ಅಕ್ರಮ ಟೋಲ್ ಗೇಟ್ ಗಳಿವೆ ಎಂದು ರಾಜ್ಯ ಸರ್ಕಾರವೇ ಒಪ್ಪಿಕೊಂಡಿದೆ ಆದರೆ, ಅಕ್ರಮ ಟೋಲ್ ಗೇಟ್ ಗಳನ್ನು ಹಾಗೆಯೇ ಬಿಟ್ಟು ಜನರನ್ನು ಸುಲಿಗೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದರ ಬಗ್ಗೆ ಆಡಳಿತ ಪಕ್ಷದವರು ಬಿಡಿ, ವಿರೋಧ ಪಕ್ಷದ ನಾಯಕರೇ ಮೌನವಾಗುವ ಮೂಲಕ ಸಾರ್ವಜನಿಕರನ್ನು ಸುಲಿಗೆ ಮಾಡಲು ಮೌನ ಸಮ್ಮತಿ ನೀಡಿದ್ದಾರೆಯೇ ಅನ್ನೋ ಅನುಮಾನಗಳು ಕಾಡುತ್ತಿವೆ ಎಂದು ಅವರು ಹೇಳಿದರು.

    ರಸ್ತೆಗಳನ್ನು ಸರ್ಕಾರಗಳೇ ಮುಂದೆ ನಿಂತು ಜನರ ತೆರಿಗೆಯ ಹಣದಲ್ಲೇ ನಿರ್ಮಾಣ ಮಾಡಬೇಕು. ಸರ್ಕಾರವೇ ಬೇಕಾದರೆ ಟೋಲ್ ಗೇಟ್ ಮಾಡಿಕೊಳ್ಳಲಿ. ಖಾಸಗಿ ಕಂಪೆನಿಗಳ ಕೈಗೆ ರಸ್ತೆ ನಿರ್ಮಾಣದ ಜವಾಬ್ದಾರಿ ನೀಡಿ ಜನರನ್ನು ಸುಲಿಗೆ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ, ತಕ್ಷಣವೇ ಜನರನ್ನು ಸುಲಿಗೆ ಮಾಡುತ್ತಿರುವ ಕಂಪೆನಿಗಳನ್ನು ಬ್ಯಾನ್ ಮಾಡಬೇಕು, ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಇನ್ನೂ ಟೋಲ್ ಗೇಟ್ ಗಳಲ್ಲಿ ಸ್ಥಳೀಯರಿಗೆ ಯಾವುದೇ ಉದ್ಯೋಗಾವಕಾಶಗಳನ್ನೂ ನೀಡಲಾಗಿಲ್ಲ, ಟೋಲ್ ಗೇಟ್ ನಿಂದಾಗಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಆ್ಯಂಬುಲೆನ್ಸ್ ಗೆ ಕೂಡ ಹೋಗಲು ಸರಿಯಾಗಿ ದಾರಿ ನೀಡದಿರುವುದು ಮೊದಲಾದ ಸಮಸ್ಯೆಗಳ ಬಗ್ಗೆ ಜನರು ಮಾತುಕತೆ ನಡೆಸಲು ತೆರಳಿದಾಗ ಜನರನ್ನು ಗೇಟ್ ನಿಂದ ಹೊರಗೆ ನಿಲ್ಲಿಸಿ ಮಾತನಾಡಿ, ಅವಮಾನ ಮಾಡಿ ಅಹಂಕಾರ ಮೆರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಟೋಲ್ ಗೇಟ್ ವಿರುದ್ಧ ಸರಕಾರ ಸರಿಯಾದ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ಇದೇ ಫೆಬ್ರವರಿ 6ರಂದು ಎಲ್ಲ ಸಂಘಟನೆಗಳು ಜೊತೆಗೂಡಿ, ತೀವ್ರವಾದ ಹೋರಾಟ ನಡೆಸಲು ಈಗಾಗಲೇ ನಿರ್ಧರಿಸಿದ್ದೇವೆ ಎಂದು ಸಂದೀಪ್ ಕುಮಾರ್  ಹಾಗೂ  ರೇವಣ್ಣ ತಿಳಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.