ದೇಶೀಯ ಹಸುಗಳನ್ನು ಸಾಕುತ್ತಿರುವ ರೈತರಿಗೆ ತಿಂಗಳಿಗೆ 900 ರೂಪಾಯಿ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಹೇಳಿದೆ.
ಕೃಷಿ ಕುರಿತ ನೀತಿ ಆಯೋಗದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಮಧ್ಯಪ್ರದೇಶ ನೈಸರ್ಗಿಕ ಕೃಷಿ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದಾಗಿ ಪ್ರಕಟಿಸಿದ್ದಾರೆ.
ನೈಸರ್ಗಿಕ ಕೃಷಿಗೆ ದೇಸಿ (ದೇಶಿ) ಹಸುಗಳು ಅತ್ಯಗತ್ಯವಾಗಿವೆ. ರೈತರು ಕನಿಷ್ಠ ಒಂದು ದೇಸಿ ಹಸುವನ್ನು ಸಾಕಬೇಕು. ಅಂತಹ ರೈತರಿಗೆ ತಿಂಗಳಿಗೆ 900 ರೂ.ಗಳನ್ನು ನೀಡಲು ನಿರ್ಧರಿಸಿದ್ದೇವೆ. ಆದ್ದರಿಂದ, ಒಬ್ಬ ರೈತ ದೇಸಿ ಹಸುವಿಗೆ ವರ್ಷದಲ್ಲಿ ಒಟ್ಟು 10,800 ರೂ. ಪಡೆಯಲಿದ್ದಾರೆ ಎಂದಿದ್ದಾರೆ.
ರಾಜ್ಯದ 52 ಜಿಲ್ಲೆಗಳಲ್ಲಿ ತಲಾ 100 ಗ್ರಾಮಗಳಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಸಂಸದ ಸರ್ಕಾರ ವಿಶೇಷ ಚಟುವಟಿಕೆಗಳನ್ನು ಪ್ರಾರಂಭಿಸಲಿದೆ. ಪ್ರಸಕ್ತ ಖಾರಿಫ್ ಬೆಳೆ ಹಂಗಾಮಿನಲ್ಲಿ ರಾಜ್ಯದ 5,200 ಗ್ರಾಮಗಳಲ್ಲಿ ನೈಸರ್ಗಿಕ ಕೃಷಿ ಚಟುವಟಿಕೆಗಳು ಆರಂಭವಾಗಲಿವೆ.
ಇದುವರೆಗೆ 1.65 ಲಕ್ಷ ರೈತರು ನೈಸರ್ಗಿಕ ಕೃಷಿಯಲ್ಲಿ ಆಸಕ್ತಿ ತೋರಿದ್ದಾರೆ. ನೈಸರ್ಗಿಕ ಕೃಷಿಗೆ ವಾತಾವರಣ ನಿರ್ಮಿಸಲು ರಾಜ್ಯದಲ್ಲೂ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5