nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಪರ್ಧಾತ್ಮಕ ಮನೋಭಾವ ರೂಪಿಸಿಕೊಳ್ಳಿ: ಯುವ ಪೀಳಿಗೆಗೆ ಜಿನೇಂದ್ರ ಕಣಗಾವಿ  ಕರೆ
    ಜಿಲ್ಲಾ ಸುದ್ದಿ April 7, 2025

    ಸ್ಪರ್ಧಾತ್ಮಕ ಮನೋಭಾವ ರೂಪಿಸಿಕೊಳ್ಳಿ: ಯುವ ಪೀಳಿಗೆಗೆ ಜಿನೇಂದ್ರ ಕಣಗಾವಿ  ಕರೆ

    By adminApril 7, 2025No Comments2 Mins Read
    jain milan

    ಬೆಂಗಳೂರು: ಇಂದಿನ ಜಾಗತೀಕರಣ, ಉದಾರಿಕರಣ ಹಾಗೂ ಯಾಂತ್ರಿಕರಣದ ಕಾಲಘಟ್ಟದಲ್ಲಿ ಯುವ ಪೀಳಿಗೆ ಸ್ಪರ್ಧಾತ್ಮಕ ಮನೋಭಾವ ರೂಪಿಸಿಕೊಂಡು ಸಂಘಟಿತರಾಗುವಂತೆ ಹಿರಿಯ ಐ.ಪಿ.ಎಸ್ ಅಧಿಕಾರಿ ಜಿನೇಂದ್ರ ಕಣಗಾವಿ ಜೈನ ಸಮುದಾಯಕ್ಕೆ ಕರೆ ನೀಡಿದರು.

    ಅವರಿಂದು ಇಲ್ಲಿನ ಪೇರೆಂಟ್ ಅಸೋಸಿಯೇಷನ್ ಕಾಲೇಜಿನಲ್ಲಿ ರಾಜಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಸುಹಾಸ್ತಿ ಜೈನ್ ಮಿಲನ್  ದೂರದೃಷ್ಟಿ, ಕ್ರಿಯಾಶೀಲತೆ , ಹೊಂದಾಣಿಕೆ ಮನೋಭಾವತ್ವದ ಸಂಘಟನೆಯಾಗಿದ್ದು ಕಳೆದ  ಹಲವಾರು ವರ್ಷಗಳಿಂದ ಉತ್ತಮ ಕಾರ್ಯಕ್ರಮಗಳ ಮೂಲಕ ಹೆಚ್ಚು ಪ್ರವರ್ಧಮಾನಕ್ಕೆ ಬಂದಿದೆ ಎಂದರು.

    ಈ ಹಿಂದೆ 60 ವರ್ಷ ಮೀರಿದ್ದವರಿಗಿದ್ದ ಹಲವು ಕಾರ್ಯಕ್ರಮಗಳಿಗೆ ಯುವ ಪೀಳಿಗೆಯನ್ನ ಸಂಘಟಿಸಿ ಒಂದು ಗುಡಿಸುತ್ತಿದೆ, ಜೈನರನ್ನ ಒಂದೆಡೆ ಸೇರಿಸಿ ಸ್ಪರ್ಧಾತ್ಮಕ ಮನೋಭಾವದ ಮೂಲಕ ಜಿನ ಸಮ್ಮಿಲನವನ್ನು ಪ್ರೋತ್ಸಾಹಿಸುತ್ತಿದೆ, ಇದರ ಜೊತೆಗೆ ಧಾರ್ಮಿಕ ಮನೋಭಾವ ಸದುದ್ದೇಶವು  ಮುಖ್ಯವಾಗಿದೆ ಎಂದರು. ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿಯಾಗಲಿದ್ದು, ಇದೊಂದು ಬಾವನಾತ್ಮಕ ಸಮ್ಮೇಳನವಾಗಿದೆ ಎಂದರು.

    ಸ್ಪರ್ಧಾತ್ಮಕ ಚಟುವಟಿಕೆಯ ಬಗ್ಗೆ ಉತ್ಸಾಹ ಜೈನರಲ್ಲಿ ತುಂಬಾ ಕಡಿಮೆ ಇದ್ದು  ಐ.ಎ.ಎಸ್., ಐ.ಪಿ.ಎಸ್, ಕೆ.ಎ.ಎಸ್. ಪರೀಕ್ಷೆಗಳಲ್ಲಿ ಹೆಚ್ಚು ಭಾಗವಹಿಸಬೇಕೆಂದ ಅವರು, ಸಮುದಾಯ ಇದಕ್ಕೆ ನೂರಾರು ಕೋಟಿ  ರೂ.ಗಳನ್ನುಖರ್ಚು  ಮಾಡುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

    ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಸುಭಾಷ್ ಜಿನ ಗೌಡ ಮಾತನಾಡಿ, ಕಳೆದ  ಹಲವಾರು ವರ್ಷಗಳಿಂದ ಯುವ ಜೈನ್ ಮಿಲನ್  ಸಂಘಟಿತವಾಗುತ್ತಿದೆ, ಯುವಜನತೆಯ ಸಂಘಟನೆಯಿಂದ ಸುಹಾಸ್ತಿ ಯಶಸ್ಸು ಕಂಡಿದೆ, ಸದಸ್ಯತ್ವಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ ಸುಹಾಸ್ತಿ ಹೆಚ್ಚು ಹೆಚ್ಚು ಸಂಘಟಿತರಾಗಬೇಕೆಂದರು. ಕ್ರೀಡೆ ,ಸಂಸ್ಕೃತಿ ,ಡ್ರಾಯಿಂಗ್ ಇನ್ನಿತರ ಚಟುವಟಿಕೆಗಳಿಗೆ ಸುಹಸ್ತಿ ಹೆಚ್ಚು ಸಹಕಾರ ನೀಡಿದೆ ಎಂದರು.

    ಭಾರತೀಯ ಜೈನ್ ಮಿಲನ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ  ರಾಜಾಜಿನಗರ ಪೇರೆಂಟ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಮೃತ್ಯುಂಜಯ ಮಾತನಾಡಿ,  ಭಾರತೀಯ ಜೈನ್ ಮಿಲನ್  ಈ ಹಿಂದೆ ಸಮಾಜ ಸಂಘಟನೆಗೆ ಹಲವು ಪ್ರಯತ್ನ ಮಾಡಿದರು ಯಶಸ್ಸು ಕಂಡಿಲ್ಲ, ಸಂಘಟನೆಗೆ ಯುವ ಪೀಳಿಗೆ ಅಗತ್ಯವಾಗಿದ್ದು, ಈಗ ಸುಹಾಸ್ತಿ ಜೈನ್ ಯುವ ಮಿಲನ್ ನಿಂದ ಯಶಸ್ಸು ಕಾಣುತ್ತಿದೆ. ಕ್ರೀಡೆಯಿಂದ ಪ್ರಾರಂಭವಾಗಿ ಹಲವು ಚಟುವಟಿಕೆಗಳ ಮೂಲಕ ಯುವಕ , ಯುವತಿಯರಿಗೆ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನ ಹಮ್ಮಿಕೊಂಡು ಸಂಘಟಿತರಾಗುವಂತೆ ಕರೆ ನೀಡಿದರು.

    ಕರ್ನಾಟಕ ಜೈನ್ ಅಸೋಸಿಯೇಷನ್ ನಿರ್ದೇಶಕ  ಹಾಗೂ ವ್ಯಾನ್ ಗಾರ್ಡು ಬಿಜಿನೆಸ್ ಸ್ಕೂಲ್ ನ  ಡಾ. ಅನಿಲ್ ಕುಮಾರ್ ಮಾತನಾಡಿ,  ಸುಹಾಸ್ತಿ ಯುವ ಜೈನಮಿಲನ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು.

    ಕಾರ್ಯಕ್ರಮದಲ್ಲಿ  ರಾಜಾಜಿನಗರ ಪೇರೆಂಟ್ಸ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು, ಲೋಕಾಯುಕ್ತ ಡಿ .ವೈ .ಎಸ್ ಪಿ.ವೀರೇಂದ್ರ ಕುಮಾರ್,  ಬೆಂಗಳೂರಿನ ಪುಟ್ಟೇನಹಳ್ಳಿ,  ಶ್ರೀ ಶೀತಲನಾಥ ಎಜುಕೇಶನ್ ಅಂಡ್  ಚಾರಿಟಬಲ್ ಟ್ರಸ್ಟ್ ನ   ರಾಜ್ಯದ್ಯಕ್ಷರಾದ ಎಸ್‌.ವಿ.ಧನ್ಯ ಕುಮಾರ್,  ಚಕ್ರೇಶ್ವರಿ ಮಹಿಳಾ ಸಮಾಜದ ಅಧ್ಯಕ್ಷ ನಾಗಶ್ರೀ ಮುಪ್ಪಾನೆ , ಸುಹಾಸ್ತಿ ಜೈನ್ ಮಿಲನ ಅಧ್ಯಕ್ಷ ವಜ್ರ ಕುಮಾರ್. ಕರ್ನಾಟಕ ಜೈನ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ಚಿತ್ತಾ ಎಂ.ಜಿನೇಂದ್ರ, ಜ್ಯೋತಿ ನೇಮಿ ರಾಜ್, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜೈನ ಕ್ರೀಡಾ ಸಂಘಟನೆಗಳು ,ಹಲವಾರು ಯುವ ಜೈನ್ ಸಂಘಟನೆಗಳು, ಮಹಿಳಾ  ಸಂಘಟನೆಗಳು, ಯುವ ಜೈನ್ ಮಿಲನ್ ಗಳು  ಸುಹಾಸ್ತಿ ಯುವ ಜೈನ್ ಮಿಲನ ಪದಾಧಿಕಾರಿಗಳು, ಶ್ರಾವಕ– ಶ್ರಾವಕಿಯರು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.  ಸುಹಾಸ್ತಿ ಯುವ ಜೈನ್ ಮಿಲನ್ ನ ದರ್ಶನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ವರದಿ: ಜೆ.ರoಗನಾಥ,  ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಸಹಯೋಗದಲ್ಲಿ, ಕಾರವಾರದ ನಗರಸಭೆ ಉದ್ಯಾನವನದಲ್ಲಿ ಗುರುವಾರ…

    ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.