nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026
    Facebook Twitter Instagram
    ಟ್ರೆಂಡಿಂಗ್
    • ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    • ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್
    • ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್
    • ಸರ್ಕಾರಿ ಶಾಲೆಗಳ ವಿಲೀನ: 2022ರಿಂದ ಈವರೆಗೆ 31 ಹೊಸ ಕೆಪಿಎಸ್ ಶಾಲೆಗಳ ಆರಂಭ: ಸಚಿವ ಮಧು ಬಂಗಾರಪ್ಪ
    • ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ
    • ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    ಕೊರಟಗೆರೆ March 16, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminMarch 16, 2026No Comments2 Mins Read
    g parameshwar

    ಕೊರಟಗೆರೆ : ಗ್ಯಾರಂಟಿ ಯೋಜನೆಗೆ ಮಾತ್ರ ದುಡ್ಡು ಕೊಡ್ತಾರೇ, ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ನೀಡುತ್ತಿಲ್ಲ ಎಂಬುದು ವಿರೋಧ ಪಕ್ಷದ ಆರೋಪ. ಟೀಕೆ ಟಿಪ್ಪಣಿಗಳು ಬರುವುದು ಸರ್ವೇ ಸಾಮಾನ್ಯ ಅದಕ್ಕೆ ನನ್ನ ಅಭಿವೃದ್ದಿ ಕಾಮಗಾರಿಗಳೇ ಉತ್ತರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಟಾಂಗ್ ನೀಡಿದರು.

    ಕೊರಟಗೆರೆ ಪಟ್ಟಣ ಮತ್ತು ತಾಲ್ಲೂಕಿನಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯಿಂದ ಭಾನುವಾರ ಏರ್ಪಡಿಸಲಾಗಿದ್ದ 14 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೇರವೇರಿಸಿ ಮಾತನಾಡಿದರು.


    Provided by
    Provided by

    ಕೇಂದ್ರ ಸರಕಾರ 53 ಲಕ್ಷ ಕೋಟಿ ಬಜೆಟ್ ಮಂಡಿಸಿದೆ ಅದರಲ್ಲಿ 14 ಲಕ್ಷ ಕೋಟಿ ಸಾಲ ಮಾಡಿದೆ. ನಮ್ಮ ರಾಜ್ಯ ಸರಕಾರ 4 ಲಕ್ಷ 48 ಸಾವಿರ ಬಜೆಟ್ ಮಂಡಿಸಿದೆ. ಬಜೆಟ್ ಗಾತ್ರದಲ್ಲಿ ಶೇ.25ರಷ್ಟು ಒಳಗೆ ಸಾಲ ಮಾಡಲು ನಮ್ಮ ಸರಕಾರಕ್ಕೂ ಅವಕಾಶವಿದೆ. ನಮ್ಮ ದೇಶ ಸೇರಿ ಎಲ್ಲಾ ರಾಜ್ಯಗಳು ಇದನ್ನೇ ಮಾಡುತ್ತವೆ ಇದರ ಮಾಹಿತಿ ವಿರೋಧ ಪಕ್ಷಗಳಿಗೆ ಸರಿಯಾಗಿ ಇಲ್ಲ ಎಂದು ಹೇಳಿದರು.

    ನಮ್ಮ ರಾಜ್ಯದ ಸಿಎಂ ನನ್ನ ಕ್ಷೇತ್ರದ ಅಭಿವೃದ್ದಿಗೆ 50 ಕೋಟಿ ಅನುದಾನ ನೀಡಿದ್ದಾರೆ. ಗ್ರಾಮೀಣ ರಸ್ತೆ ಮತ್ತು ಮೂಲ ಸೌಲಭ್ಯ ಅಭಿವೃದ್ದಿಗೆ ವಿಶೇಷ ಆಧ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಯ ಜೊತೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿವೆ. ಶಂಕುಸ್ಥಾಪನೆ ಆದ ಕಾಮಗಾರಿಗಳನ್ನು ಗುತ್ತಿಗೆದಾರರು ತ್ವರಿತವಾಗಿ ಮುಗಿಸಿ ಅಭಿವೃದ್ದಿಗೆ ಸಹಕಾರ ನೀಡಬೇಕಿದೆ ಎಂದರು.

    ಕ್ರೀಡಾ ಇಲಾಖೆ ಆಯುಕ್ತರಾದ ಚೇತನ್ ಮಾತನಾಡಿ, ಯುವ ಸಬಲೀಕರಣ ಕ್ರೀಡಾ ಇಲಾಖೆಯಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಕನಸಿನ ಕೂಸು ಒಳಾಂಗಣ ಮತ್ತು ಹೊರಂಗಣ ಕ್ರೀಡಾಂಗಣಕ್ಕೆ 7 ಕೋಟಿ ಕೊರಟಗೆರೆಗೆ ಬಂದಿದೆ. ಗ್ರಾಮೀಣ ಭಾಗದ ಕ್ರೀಡಾಪಟುಗಳು ಕ್ರಿಡಾಂಗಣದ ಅನುಕೂಲ ಪಡೆದು ರಾಜ್ಯ,ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಬೆಳೆಯಬೇಕಿದೆ ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಓ ಅಶ್ವಿಜಾ, ಎಸ್ಪಿ ಅಶೋಕ್, ಮಧುಗಿರಿ ಎಸಿ ಶಿವಪ್ಪ, ತಹಶೀಲ್ದಾರ್ ಮಂಜುನಾಥ, ತಾಪಂ ಇಓ ಅಪೂರ್ವ, ಎಇಇ ಕೆಆರ್‌ ಐಡಿಎಲ್ ನಾಗಯ್ಯ, ಎಇಇ ಸಿಂಧು, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಕೆ ನಾಗಣ್ಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಶ್ವತ್ಥ ನಾರಾಯಣ್, ಅರಕೆರೆ ಶಂಕರ್, ಮಹಿಳಾಧ್ಯಕ್ಷೆ ಜಯಮ್ಮ, ಯುವಧ್ಯಕ್ಷ ಬೈರೇಶ್, ಅಟ್ಟಿಕ ನಾಗರಾಜ್, ವಿನಯ್ ಕುಮಾರ್, ಅರವಿಂದ್ ಸೇರಿದಂತೆ ಇತರರು ಇದ್ದರು.

    14 ಕೋಟಿ ಕಾಮಗಾರಿಗೆ ಚಾಲನೆ:

    4 ಕೋಟಿ 23 ಲಕ್ಷದ ರಾಜೀವ್‌ ಗಾಂಧಿ ಒಳಾಂಗಣ ಕ್ರೀಡಾಂಗಣ ಮತ್ತು 21 ಲಕ್ಷದ ವನಧನ ವಿಕಾಸ ಕೇಂದ್ರ ಉದ್ಘಾಟನೆ, 3 ಕೋಟಿಯ ಹೊರಂಗಣ ಗ್ಯಾಲರಿ, 1 ಕೋಟಿ 50 ಲಕ್ಷದ ತಾಲ್ಲೂಕು ಆಡಳಿತ ಕಚೇರಿ ರಸ್ತೆ, 2 ಕೋಟಿಯ ತಾ.ಪಂ. ನೂತನ ಕಟ್ಟಡ, 60 ಲಕ್ಷ ಬಯಲು ಆಂಜನೇಯ ರಸ್ತೆ, 1 ಕೋಟಿಯ ಸೋಂಪುರ ರಸ್ತೆಗೆ ಶಂಕುಸ್ಥಾಪನೆ ಸೇರಿ ವಿವಿಧ ಕಾಮಗಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ನೇರವೇರಿಸಿದರು.

     ಏಪ್ರಿಲ್‌ ನಲ್ಲಿ ಕಬ್ಬಡಿ ಮತ್ತು ಕ್ರಿಕೆಟ್:

    ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಯುವ ಸ್ನೇಹಿತರಿಂದ ಜಿಲ್ಲಾಮಟ್ಟದ ಕಬ್ಬಡಿ ಮತ್ತು ಕ್ರಿಕೇಟ್ ಪಂದ್ಯಾವಳಿಗೆ ಅನುಮತಿ ನೀಡಿದ್ದೇನೆ. ಏಪ್ರಿಲ್ ಮಾಹೆಯೇ ಕ್ರೀಡಾಪಟುಗಳಿಗೆ ಕ್ರೀಡಾಸ್ಪೂರ್ತಿ ತುಂಬಿ ಯುವಕರಿಗೆ ಉತ್ತೇಜನ ನೀಡಲಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಶುಭ ಹಾರೈಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯಿತಿ ಈಗ ಪುರಸಭೆ: 15ರಿಂದ 23ಕ್ಕೆ ಏರಿಕೆಯಾದ ವಾರ್ಡ್‌ಗಳ ಸಂಖ್ಯೆ

    March 16, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    March 16, 2026

    ಸರಗೂರು:  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್…

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    ಶಾಸಕರ ಪ್ರಶ್ನೆಗಳಿಗೆ ಉತ್ತರವಿಲ್ಲ: ‘ಹೀಗಾದರೆ ಸದನ ನಡೆಸುವುದು ಹೇಗೆ?’: ಸದನದಿಂದ ಹೊರನಡೆದ ಸ್ಪೀಕರ್ ಯು.ಟಿ. ಖಾದರ್

    March 16, 2026

    ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಜಮೀನು ಖರೀದಿ: ಸ್ಮಶಾನ ಭೂಮಿ ಕೊರತೆ ನೀಗಿಸಲು ಸರ್ಕಾರ ಪ್ಲಾನ್

    March 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.