ತಿಪಟೂರು: ತಾಲೂಕಿನ ಸಾರ್ಥವಳ್ಳಿ ವಲಯದ ಸಾರ್ಥವಳ್ಳಿ ನಿವಾಸಿಯಾದ ಗಂಗಾಧರ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಳೆದ ನಾಲ್ಕು ವರ್ಷಗಳಿಂದ ಪ್ರತಿ ತಿಂಗಳು 1,000 ರೂ. ಗಳಂತೆ ಮಾಸಾಶನ ತಲುಪುತ್ತಿದ್ದು, ಅವರ ಕುಟುಂಬಕ್ಕೆ ಯೋಜನೆ ದೊಡ್ಡ ಆಸರೆಯಾಗಿದೆ.
ಇದರ ಜೊತೆಗೆ, ಗಂಗಾಧರ್ ಅವರ ಮಕ್ಕಳಾದ ಲಕ್ಷ್ಮಿ ಮತ್ತು ಹರೀಶ್ ಅವರಿಗೆ ಯೋಜನೆಯ ‘ವಾತ್ಸಲ್ಯ ವಿದ್ಯಾನಿಧಿ’ ಕಾರ್ಯಕ್ರಮದಡಿ ಅಗತ್ಯ ಶಿಕ್ಷಣ ಸಾಮಗ್ರಿಗಳಾದ ನೋಟ್ಬುಕ್, ಬ್ಯಾಗ್, ರೈನ್ಕೋಟ್, ಚಪ್ಪಲಿ ಹಾಗೂ ಬಟ್ಟೆಗಳನ್ನು ವಿತರಿಸಲಾಯಿತು.
ಈ ಸಾಮಗ್ರಿಗಳನ್ನು ತುಮಕೂರು-1 ಜಿಲ್ಲೆಯ ಮಾನ್ಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, “ಶ್ರೀ ಮಂಜುನಾಥ ಸ್ವಾಮಿಯ ಕೃಪೆಯಿಂದ ಇಬ್ಬರೂ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿ” ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿ ಉದಯ್, ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಮಕ್ಕಳ ತಾಯಿ ಚಂದ್ರಕಲಾ, ಸಮನ್ವಯಾಧಿಕಾರಿ ಪದ್ಮಾವತಿ ಎಂ.ಡಿ., ಮೇಲ್ವಿಚಾರಕ ಪ್ರದೀಪ್ ರೈ, ಸೇವಾಪ್ರತಿನಿಧಿ ಮೋಹನ್ ಸೇರಿದಂತೆ ತಾಲೂಕಿನ ಎಲ್ಲಾ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
