ಗುಬ್ಬಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪ್ರಗತಿ ಬಂದು ಸ್ವಸಹಾಯ ಸಂಘದ ಫಲಾನುಭವಿಗಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅದರಂತೆ ನಿಮ್ಮ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಪ್ರಗತಿ ಬಂಧು ಸಂಘದ ಮೂಲಕ ಉಳಿತಾಯ ಮಾಡುವ ಜೊತೆಗೆ ಸಂಘದ ಸದಸ್ಯರು ಆರ್ಥಿಕ ಚಟುವಟಿಕೆಗಳನ್ನು ಮಾಡಲು ಮುಂದಾಗುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಬೆಳವಣಿಗೆ ಆಗಲು ಸಹಕಾರಿಯಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಹರೀಶ್ ಸಲಹೆ ನೀಡಿದರು.
ಗುಬ್ಬಿ ತಾಲೂಕಿನ ತೊರೆಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು ಗ್ರಾಮದಲ್ಲಿ ನೂತನ ಸಂಘವನ್ನು ಉದ್ಘಾಟಿಸಿದ್ದು ಅದರಂತೆ ಸಂಘದ ಉಳಿತಾಯ ಹಾಗೂ ಸಂಘದ ಹಣವನ್ನು ಕಟ್ಟಲು ಹೇರೂರು ಗ್ರಾಮದಲ್ಲಿ ಸಂದಾಯ ಕೇಂದ್ರ ಪ್ರತಿ ಬಾರಿ ಮಾಡುವ ಸಭೆಯಲ್ಲಿ ಉಳಿತಾಯಣವನ್ನು ಕಟ್ಟುವ ಮೂಲಕ ಸಂಘದ ಅಭಿವೃದ್ಧಿಗೆ ಸಂಘದ ಸದಸ್ಯರು ಸಹಕರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy