ಕೊರಟಗೆರೆ: ತಾಲ್ಲೂಕಿನ ಕೊಳಾಲ ಹೋಬಳಿಯ ಕೋಳಾಲ ವಲಯದ ವಜ್ಜನಕುರಿಕೆ ವ್ಯಾಪ್ತಿಯ ಕಾರ್ಯಕ್ಷೇತ್ರದ ವಿಜಯವೀರ ಆಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1.50 ಲಕ್ಷ ರೂ.ಗಳ ಡಿಡಿ ವಿತರಣೆ ಮಾಡಲಾಯಿತು.
ಜಿಲ್ಲಾ ನಿರ್ದೇಶಕ ದಿನೇಶ್ ಮಾತನಾಡಿ, ಈ ಗ್ರಾಮದಲ್ಲಿ ಅಲ್ಪ ಪ್ರಮಾಣದ ಗ್ರಾಮಸ್ಥರಿದ್ದರು ಸಹ ಈಭಾಗದಲ್ಲಿ ಎರಡು ದೇವಾಲಗಳನ್ನು ಜೀರ್ಣೊದ್ದಾರ ಮಾಡುತ್ತಿರುವುದು ನೋಡಿದರೆ ನಿಜವಾಗಿಯೂ ಉನ್ನತ ಶಿಕ್ಷಣವಿದ್ದಂತೆ, ನಿಮ್ಮ ಈ ಒಳ್ಳೆಯ ಕಾರ್ಯಕ್ಕೆ ಶ್ರೀ ಕ್ಷೇತ್ರದ ಪೂಜ್ಯರಾದ ಡಾ.ವೀರೇಂದ್ರ ಹೆಗ್ಗೆಡೆ ರವರು ಈ ಒಂದು ಮೊತ್ತದ ಡಿಡಿಯನ್ನು ನೀಡಿರುತ್ತಾರೆ ಎಂದರು.
ನಂತರ ತಾಲ್ಲುಕು ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ, ಪ್ರತಿ ಗ್ರಾಮಗಳಿಗೂ ಏಳಿಗೆ ಆಗಬೇಕಾದರೆ ಅಂತ ಕಡೆ ಇಂತಹ ವೀರಾಂಜನೇಯ ಸ್ವಾಮಿ ದೇವಸ್ಥಾನಗಳು ಇರಬೇಕು. ಇಂತಹ ದೇವಾಲಯಗಳನ್ನು ನಿರ್ಮಿಸಿ ಅವುಗಳನ್ನು ಜೀರ್ಣೋದ್ಧಾರ ಮಾಡಬೇಕು. ದೇವಾಲಯಗಳು ಇರುವ ಕಡೆ ಸಂಸ್ಕೃತಿ ಬೆಳೆಯುತ್ತದೆ. ಒಳ್ಳೆಯ ಸಂಸ್ಕಾರ ಇರುತ್ತದೆ. ನಮ್ಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸಹ ಗ್ರಾಮಗಳ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ. ಹಾಗು ಮಹಿಳೆಯರನ್ನು ಒಗ್ಗೂಡಿಸಿಕೊಂಡು ಅವರನ್ನು ಸ್ವಾವಲಂಬಿ ಜೀವನ ನಡೆಸಲು ಎಲ್ಲಾ ರೀತಿಯಲು ಮುನ್ನುಗಿ ಸಹಾಯ ಮಾಡುತ್ತಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಹಾಗೂ ತಾಲ್ಲೂಕು ಯೋಜನಾಧಿಕಾರಿ ಬಾಲಕೃಷ್ಣ ಎಂ ಹಾಗೂ ವಲಯದ ಮೇಲ್ವಿಚಾರಕು ಕವಿತಾ ಸ್ಥಳೀಯ ಸೇವಾ ಪ್ರತಿನಿಧಿ ಅಭಿಲಾಷ ಮತ್ತು ರಮೇಶಯ್ಯ ಹಾಗೂ ಒಕ್ಕೂಟ ಅಧ್ಯಕ್ಷ ಗೋವಿಂದರಾಜು ಊರಿನ ಮುಖಂಡರು ಶ್ರೀ ರಾಮಯ್ಯ. ಉಮೇಶ್. ರಾಮ ಮೂರ್ತಿ. ರಾಜಣ್ಣ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB