nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೇಶಕ್ಕೇ ಮಾದರಿ: ಶಾಸಕ ಕೆ.ಷಡಕ್ಷರಿ ಅಭಿಮತ
    ತಿಪಟೂರು February 1, 2025

    ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೇಶಕ್ಕೇ ಮಾದರಿ: ಶಾಸಕ ಕೆ.ಷಡಕ್ಷರಿ ಅಭಿಮತ

    By adminFebruary 1, 2025No Comments2 Mins Read
    tipaturu

    ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಾಮೂಹಿಕ ಶ್ರೀ ಶನಿಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಅದ್ದೂರಿಯಿಂದ ನೆರವೇರಿತು.

    ಕಾರ್ಯಕ್ರಮದ ಮೊದಲಿಗೆ ಸ್ವಾಮಿಯ ಅರ್ಚಕರಾದ ಶ್ರೀ ಅಡವೀಶಪ್ಪನವರ ನೇತೃತ್ವದಲ್ಲಿ ಹೊನ್ನವಳ್ಳಿಯ ನೂರೈವತ್ತೊಂದು  ದಂಪತಿಗಳ ಸಮಕ್ಷಮದಲ್ಲಿ ಶ್ರೀ ಸ್ವಾಮಿ ಶನಿದೇವರ ಪೂಜೆ, ನವಗ್ರಹಗಳ ಪೂಜೆ ನೆರವೇರಿತು.

    ಬಳಿಕ ಕೀರ್ತನಕಾರರಾದ ಡಾ.ಅಶೋಕ್ ಕೆ.ಪಿ.ರವರು ಶನಿದೇವರ ಹುಟ್ಟು, ದೇವರು ಹಾಗೂ ಮಾನವನ ಜೀವನದಲ್ಲಿ ಶನಿಮಹಾತ್ಮರ ಪಾತ್ರದ ಬಗ್ಗೆ ಸವಿಸ್ತಾರವಾಗಿ ಕಥಾ ಪರಾಯಣವು ನಡೆಸಿಕೊಟ್ಟರು.

    ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ತಿಪಟೂರು ಶಾಸಕರಾದ ಷಡಕ್ಷರಿಯವರು ಉದ್ಘಾಟಿಸಿ ಮಾತನಾಡಿ,  ರಾಜ್ಯದ ಜನತೆಗೆ ಸರ್ಕಾರದ ಒಟ್ಟೊಟ್ಟಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಜನ ಸಂಘಟನೆಯ ಮುಖೇನ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಜನಮನ್ನಣೆಗೆ ಪಾತ್ರವಾಗಿದೆ ಎಂದು ಶ್ಲಾಘಿಸಿದರು.

    13 ವರ್ಷದ ಹಿಂದೆ ತಾಲ್ಲೂಕಿಗೆ ಯೋಜನೆಯು ಕಾಲಿಟ್ಟಾಗ  ತಿಪಟೂರಿನ  ವ್ಯಾಪ್ತಿಯಲ್ಲಿ ಮಾತ್ರ ಇದ್ದು, ಪ್ರಸ್ತುತ ಶ್ರೀ ಕೆಂಪಮ್ಮ ದೇವಿಯ ಕೃಪೆಯೊಂದಿಗೆ ಯೋಜನೆ ತಾಲ್ಲೂಕಿನ ಪ್ರತಿ ಮೂಲೆ ಮೂಲೆಗೂ ತಲುಪಿ ಬಡ ಜನತೆಗೆ ಆರ್ಥಿಕ ಶಿಸ್ತನ್ನು ಕಲಿಸಿಕೊಡುವುದರೊಂದಿಗೆ ತಾಲ್ಲೂಕಿನ ಜನ ಮನ್ನಣೆಗೆ ಪಾತ್ರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ನೆರೆದ ಎಲ್ಲಾ ಜನತೆಗೆ ಭಗವಾನ್ ಶ್ರೀ ಶನಿದೇವರು ಹಾಗೂ ಮಂಜುನಾಥಸ್ವಾಮಿಯು ನಿಮ್ಮೆಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಶುಭ ಹಾರೈಸಿದರು.

    ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತುಮಕೂರು–1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ,  ಗ್ರಾಮಾಭಿವೃದ್ದಿ ಯೋಜನೆಯು ಯಾವುದೇ ಕಾರಣಕ್ಕೂ ಯಾರಿಗೂ ಸಾಲ ಕೊಡುತ್ತಿಲ್ಲ, ಬದಲಾಗಿ ರಾಜ್ಯದಲ್ಲಿ ಸರಿಸುಮಾರು 6ಲಕ್ಷ ಸಂಘಗಳನ್ನು ಮಾಡಿ ಬಡವರ್ಗದ ಜನತೆಯ ಏಳಿಗೆಗಾಗಿ ಕೃಷಿ ಕಾರ್ಯಕ್ರಮಗಳು, ಜ್ಞಾನವಿಕಾಸ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ದಿ ಕಾರ್ಯಕ್ರಮಗಳನ್ನು ಮಾಡುವುದರೊಟ್ಟಿಗೆ ಸಂಘದ 60 ಲಕ್ಷ ಕುಟುಂಬಗಳಿಗೆ ದೇಶದ ಪ್ರತಿಷ್ಟಿತ ರಾಷ್ಟ್ರೀಕೃತ ಬ್ಯಾಂಕುಗಳ ಮುಖಾಂತರ ನೇರ ಸಾಲ ಸೌಲಭ್ಯವನ್ನು ಒದಗಿಸಿಕೊಟ್ಟು, ರಾಜ್ಯದ 3 ಕೋಟಿ ಜನತೆಯ ಮನೆಮನಗಳನ್ನು ಮುಟ್ಟಿದೆ ಎಂದು ತಿಳಿಸಿದರು.

    ಹೊನ್ನವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೊಡ್ಡಯ್ಯನವರು ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೊನ್ನವಳ್ಳಿ ಹೋಬಳಿಯ ಸಬ್ ಇನ್ಸ್ಪೆಕ್ಟರ್ ಚಂದ್ರಕಾಂತ್, ಮತ್ತಿಹಳ್ಳಿ ಗ್ರಾಮ ಪಂ.ಸದಸ್ಯರಾದ ಹರೀಶ್ ಗೌಡ, ಹೊನ್ನವಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ಶ್ರೀಕಂಠಮೂರ್ತಿ, ಪ್ರಸಾದ್, ರೈತ ಹೋರಾಟಗಾರರಾದ ಮುಪ್ನೇಗೌಡ, ಸಾಮೂಹಿಕ ಶ್ರೀ ಶನಿಪೂಜಾ ಸಮಿತಿ ಅದ್ಯಕ್ಷರಾದ ಜಗದೀಶ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಿಪಟೂರು ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ., ತಾಲ್ಲೂಕಿನ ಎಲ್ಲಾ ಕಾರ್ಯಕರ್ತರು ಹಾಗೂ ಹೊನ್ಮವಳ್ಳಿ ಹೋಬಳಿಯ ಸುತ್ತಮುತ್ತಲ ಸಾವಿರಕ್ಕೂ ಅಧಿಕ ಮಂದಿಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

    ವರದಿ:  ಆನಂದ್,  ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.