ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆಗೊಳಿಸುವುದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ನಮ್ಮ ಪಕ್ಷಕ್ಕೆ ಅರ್ಜಿ ಹಾಕಿಲ್ಲ, ಹಾಕಿದರೂ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಸಾಧ್ಯ ಎಂದರು.
ಯತ್ನಾಳ್ ಅವರು ಒಂದು ಸಮಾಜದ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ಹಾಗಾಗಿ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4