ದಿಗಂಬರ ಜೈನ ಮುನಿಗಳಿಗೆ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಕಿರುಕುಳ ನೀಡುತ್ತಿರುವ ವೀಡಿಯೋವೊಂದು ವೈರಲ್ ಆಗಿದ್ದು, ಈ ಘಟನೆಯ ತನಿಖೆಗೆ ಉತ್ತರಾಖಂಡ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ದಾರೆ ಎಂದು ವರದಿ ತಿಳಿಸಿದೆ.
“ಈ ವೀಡಿಯೋ ದಿಗಂಬರ ಮುನಿಗಳ ಭಾವನೆಗಳಿಗೆ ನೋವುಂಟು ಮಾಡಿದೆ, ಉತ್ತರಾಖಂಡ ಎಲ್ಲಾ ಧರ್ಮಗಳ ಜನರ ಭಾವನೆಗಳನ್ನೂ ಗೌರವಿಸುತ್ತದೆ. ಯಾವುದೇ ಧರ್ಮಕ್ಕೆ ಅಗೌರವ ಸಹಿಸುವುದಿಲ್ಲ, ಆರೋಪಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಲಾಗುವುದು,” ಎಂದು ಉತ್ತರಾಖಂಡ ಡಿಜಿಪಿ ಅಭಿನವ್ ಕುಮಾರ್ ಹೇಳಿದ್ದಾರೆ. ಆರೋಪಿ ಯೂಟ್ಯೂಬರ್ ಎನ್ನಲಾಗಿದ್ದು, ತೆಹ್ರಿ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ.
ಆತನ ವಿರುದ್ಧ ಐಪಿಸಿ ಹಾಗೂ ಐಟಿ ಕಾಯಿದೆಯನ್ವಯ ಪ್ರಕರಣ ದಾಖಲಿಸಲಾಗಿದೆ. ವೀಡಿಯೋದಲ್ಲಿ ದಿಗಂಬರ ಜೈನ ಮುನಿಗಳು ರಸ್ತೆ ಬದಿಯಲ್ಲಿ ಕುಳಿತುಕೊಂಡಿರುವಾಗ ಆರೋಪಿ ಅವರಿಗೆ ಕಿರುಕುಳ ನೀಡುತ್ತಿರುವುದು ಹಾಗೂ ಬಟ್ಟೆ ಧರಿಸದೆ ಸಾರ್ವಜನಿಕವಾಗಿ ಏಕೆ ಕಾಣಿಸಿಕೊಳ್ಳಿಸುತ್ತಿದ್ದೀರಿ ಎಂದು ಪ್ರಶ್ನಿಸುತ್ತಿರುವುದು ಕಾಣಿಸುತ್ತದೆ. ಮುನಿಗಳು ವಿವರಣೆ ನೀಡಲು ಯತ್ನಿಸಿದರೂ ಆ ವ್ಯಕ್ತಿ ಸಮಾಧಾನಗೊಳ್ಳದೇ ಇದ್ದಾಗ ಅವರು ಯಾವುದೇ ಪ್ರಶ್ನೆಗೆ ಉತ್ತರಿಸದೆ ಅಲ್ಲಿಂದ ತೆರಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA