nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್
    • ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    ಜಿಲ್ಲಾ ಸುದ್ದಿ February 28, 2026

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    By adminFebruary 28, 2026No Comments2 Mins Read
    e annapurna

    ಬಳ್ಳಾರಿ: ದೈಹಿಕ ಅಂಗವೈಕಲ್ಯಕ್ಕಿಂತ ಮಾನಸಿಕ ವೈಕಲ್ಯತೆ ದೊಡ್ಡದು. ವಿಶೇಷ ಚೇತನರನ್ನು ಕೀಳರಿಮೆಯಿಂದ ನೋಡದೆ, ಅವರಲ್ಲಿರುವ ವಿಶೇಷ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಹೇಳಿದರು.

    ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ದೇವರು ಒಂದು ಅಂಗವನ್ನು ವಿಕಲತೆ ಮಾಡಿದಾಗ ಮತ್ತೊಂದು ವಿಶೇಷ ಸಾಮರ್ಥ್ಯವನ್ನು ನೀಡಿರುತ್ತಾನೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಪೋಷಕರು ಮತ್ತು ಕುಟುಂಬದ ಸದಸ್ಯರು ವಿಶೇಷಚೇತನರನ್ನು ಮೂಲೆ ಗುಂಪು ಮಾಡದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಸರ್ಕಾರವು ಇವರ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತಿದೆ ಎಂದರು.

    ಜಿಲ್ಲೆಯ ವಿವಿಧ ಕೈಗಾರಿಕೆಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗ ತಮ್ಮ ಸಾಮಾಜಿಕ ಹೊಣೆಗಾರಿಕೆಯ ಅಡಿ ಇಂತಹ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮವು ಕೇವಲ ಸಹಾಯಧನ ವಿತರಣೆಗೆ ಸೀಮಿತವಾಗದೆ, ವಿಶೇಷ ಚೇತನರ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಸಮಾಜದ ಜವಾಬ್ದಾರಿಯನ್ನು ನೆನಪಿಸುವ ಕಾರ್ಯಕ್ರಮವಾಗಿದೆ ಎಂದರು.

    ಜಿಲ್ಲೆಯಲ್ಲಿ ದೃಷ್ಟಿಹೀನರಿಗಾಗಿ ಬ್ರೈಲ್ ಲಿಪಿ ಕಲಿಸುವ ಶಿಬಿರಗಳನ್ನು ಆಯೋಜಿಸುವ ಅಗತ್ಯವಿದೆ. ಶ್ರವಣ ದೋಷವುಳ್ಳವರಿಗೆ ಅಗತ್ಯ ಉಪಕರಣಗಳನ್ನು ಒದಗಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕು. ಮಕ್ಕಳಿಗೆ ಆರಂಭಿಕ ಹಂತದಲ್ಲೇ ಬ್ರೈಲ್ ಲಿಪಿಯ ತರಬೇತಿ ನೀಡುವುದರಿಂದ ಅವರ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರ ಭವಿಷ್ಯ ಉಜ್ವಲವಾಗಲಿದೆ. ಜಿಲ್ಲೆಯನ್ನು ಹಸಿರುಕರಣ ಮಾಡುವಲ್ಲಿ ಹೆಚ್ಚು ಹೆಚ್ಚು ಗಿಡ ನೆಡಬೇಕಾಗಿದೆ. ತ್ರಿಚಕ್ರ ವಾಹನ ಬಳಸುವರು ರಸ್ತೆ ಸಂಚಾರ ನಿಯಮ ಪಾಲಿಸುವ ಮೂಲಕ ನಿಧಾನವಾಗಿ ಸಂಚರಿಸಬೇಕು ಎಂದು ಆಶಿಸಿದರು.

    ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿನ ವಿಶೇಷ ಚೇತನರು ಸರ್ಕಾರದಿಂದಿರುವ ಸೌಲಭ್ಯಗಳು ವಂಚಿತರಾಗಿದ್ದಲ್ಲಿ ಕಚೇರಿಗೆ ಭೇಟಿ ನೀಡಿದರೆ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ವಿಕಲಚೇತನರಿಗೆ ಸೌಲಭ್ಯಗಳನ್ನು ನೀಡುವಾಗ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು. ಧನಾತ್ಮಕ ಕಾಳಜಿಯ ಮೂಲಕ ಅವರಿಗೆ ಹೆಚ್ಚಿನ ಸೌಲತ್ತುಗಳನ್ನು ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ಸಮಾನವಾಗಿ ಬದುಕಲು ಸಾಧ್ಯ ಎಂದು ಹೇಳಿದರು.

    ಕೈಗಾರಿಕಾ ಸಂಸ್ಥೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ವಿಕಲಚೇತನರ ಸಬಲೀಕರಣಕ್ಕಾಗಿ ಮತ್ತು ಅವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚು ಬಳಸಬೇಕು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಆತ್ಮವಿಶ್ವಾಸದ ಕೊರತೆಯೇ ಅತಿದೊಡ್ಡ ವಿಕಲಚೇತನವಾಗಿದೆ. ಆತ್ಮವಿಶ್ವಾಸವಿದ್ದರೆ ಎಂತಹ ಅಡೆತಡೆಗಳನ್ನೂ ಮೀರಿ ಗುರಿ ತಲುಪಬಹುದು. ವಿಕಲಚೇತನರಿಗೆ ಸಮಾಜದಲ್ಲಿ ಸಮಾನ ಅವಕಾಶ ಮತ್ತು ಸ್ವಾಭಿಮಾನದಿಂದ ಬದುಕಲು ಇಂತಹ ಸೌಲಭ್ಯಗಳು ದೊಡ್ಡ ಆಸರೆಯಾಗಲಿವೆ ಎಂದು ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿ ಯೋಜನೆಯಡಿ ಸುಮಾರು 53 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಸಾಂಕೇತಿಕವಾಗಿ ಕೆಲವರಿಗೆ ಪ್ರಮಾಣಪತ್ರ ಹಾಗೂ ವಾಹನಗಳನ್ನು ಹಸ್ತಾಂತರಿಸಲಾಯಿತು.

    ಈ ಸಂದರ್ಭದಲ್ಲಿ ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ವಿಶೇಷ ಚೇತನರು, ಅವರ ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ

    February 27, 2026

    ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್

    February 27, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    ತುಮಕೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳು ಕೇವಲ ಮಹಿಳೆಯರು, ಬಡವರ ಜೀವನ ಸುಧಾರಿಸುವ ಕಾರ್ಯಕ್ರಮ ಮಾತ್ರ ಆಗಿಲ್ಲ, ವಿಶೇಷವಾಗಿ…

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    February 28, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.