nammatumakuru

    Subscribe to Updates

    Get the latest creative news from FooBar about art, design and business.

    What's Hot

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ
    • Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ
    • ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ
    • ಬೋರ್ ವೆಲ್ ಮೋಟರ್ ಆನ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟ; ಮತ್ತೊಂದು ಸಜೀವ ಬಾಂಬ್ ಪತ್ತೆ, ರೈತ ಅಪಾಯದಿಂದ ಪಾರು
    • ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ
    • ಸಿಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಬಿ. ಖಂಡ್ರೆ; ಕೂಲಿಕಾರ್ಮಿಕರೊಂದಿಗೆ ಮಣ್ಣು ಎತ್ತಿ ಕೆಲಸ ಮಾಡಿದ ಸಚಿವರು
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನ ಮಂಡಲದ ಅಧಿವೇಶನದಲ್ಲಿ ಸ್ಲಂ ಜನರ ಸಮಸ್ಯೆಗಳ ಮೇಲೆ ಚರ್ಚೆ: ಪ್ರಸಾದ್‌ ಅಬ್ಬಯ್ಯ
    ರಾಜ್ಯ ಸುದ್ದಿ December 15, 2024

    ವಿಧಾನ ಮಂಡಲದ ಅಧಿವೇಶನದಲ್ಲಿ ಸ್ಲಂ ಜನರ ಸಮಸ್ಯೆಗಳ ಮೇಲೆ ಚರ್ಚೆ: ಪ್ರಸಾದ್‌ ಅಬ್ಬಯ್ಯ

    By adminDecember 15, 2024No Comments3 Mins Read
    protest

    ಬೆಳಗಾವಿ: ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ 13/12/2024ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ನಡೆದ ಸಾಮಾಜಿಕ ನ್ಯಾಯಕ್ಕಾಗಿ ಸ್ಲಂ ನಿವಾಸಿಗಳ ಹಕ್ಕೋತ್ತಾಯ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್‌ ಅಬ್ಬಯ್ಯ,  ರಾಜ್ಯದಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಸ್ತುತ ಬಜೆಟ್‌ನಲ್ಲಿ ಹಣ ಮೀಸಲಿಡುವುದು ಸೇರಿದಂತೆ ಸ್ಲಂ ಕಾಯಿದೆಗೆ ವಿರುದ್ಧವಾಗಿರುವ ವಸತಿ ಇಲಾಖೆ ಸುತ್ತೋಲೆ ವಾಪಸಾತಿ ಹಾಗೂ ಲ್ಯಾಂಡ್‌ ಬ್ಯಾಂಕ್‌ ನೀತಿ ಕುರಿತಂತೆ ಪ್ರಸ್ತುತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ಈಗಾಗಲೇ ಸಮಯ ನಿಗಧಿಯಾಗಿದ್ದು ಅದರಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆ ನೋಂದಣಿ ಮತ್ತು ಇ.ಖಾತಾ ಪ್ರಕ್ರಿಯೆಯನ್ನು ಸರಳಗೊಳಿಸಿ ಖಾಸಗಿ ಸ್ಲಂಗಳ ಅಭಿವೃದ್ಧಿಗೂ ಮುಂದಾಗುವ ಜೊತೆಗೆ ಪ್ರಧಾನ್‌ ಮಂತ್ರಿ ಅವಾಸ್‌ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ ವಸತಿ ಯೋಜನೆಯನ್ನು ಪೂರ್ಣಗೊಳಲು ಹಣ ಮಂಜೂರಾತಿ  ಸೇರಿದಂತೆ ಸ್ಲಂ ಜನರ ಪರವಾದ ಕಾನೂನು ಮತ್ತು ನೀತಿಗಳನ್ನು ನನ್ನ ಅವಧಿಯಲ್ಲಿ ಮುಖ್ಯಮಂತ್ರಿ ಮತ್ತು ವಸತಿ ಸಚಿವರ ಬೆಂಬಲದೊಂದಿಗೆ ಮಾಡುವ ಭರವಸೆ ನೀಡಿದರು. ನಾನೂ ದಲಿತನಾಗಿ ಸ್ಲಂ ಜನರ ಕಷ್ಟದ ಅನುಭವವನ್ನು ಹೊಂದಿದ್ದು ಈ ಕಷ್ಟಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡಿ, ಮುಂದಿನ ದಿನಗಳಲ್ಲಿ ಸ್ಲಂ ಜನರ ರಾಜ್ಯಮಟ್ಟದ ಸಮಾವೇಶವನ್ನು ಮಾಡುವ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು. ನಾನೂ ಸಹ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ಹಕ್ಕೋತ್ತಾಯಗಳಿಗೆ ಪೂರಕವಾಗಿದ್ದೇನೆ ಎಂದರು.

    ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೋಂದಣಿ, ಇ.ಖಾತಾ ಸರಳೀಕರಣಕ್ಕೆ ಮುದ್ರಾಂಕ ಇಲಾಖೆ ಒಪ್ಪಿಗೆ: ಸ್ಲಂ ಬೋರ್ಡ್‌ ಆಯುಕ್ತ

    ವಸತಿ ಕಾರ್ಯದರ್ಶಿಗಳ ಪರವಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರಾದ ಡಾ.ಅಶೋಕ್‌ ಡಿ.ಆರ್‌ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿದರು. ಈಗಾಗಲೇ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೋಂದಣಿಗೆ ಇ-ಖಾತಾ ತೊಡಕಾಗಿರುವ ಬಗ್ಗೆ ಮುದ್ರಾಂಕ ಇಲಾಖೆಯ ಎಐಜಿ ಅವರೊಂದಿಗೆ ಸಭೆ ನಡೆಸಿ 94ಸಿಸಿ ಮಾದರಿಯಲ್ಲಿ ನೋಂದಣಿ ಮಾಡಿಕೊಡಲು ಒಪ್ಪಿಸಲಾಗಿದೆ. ಹಾಗೆ ಇದುವರೆಗೂ 1.86 ಲಕ್ಷ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿದೆ ತೊರಿತವಾಗಿ ಪ್ರಧಾನ್‌ ಮಂತ್ರಿ ಅವಾಸ್‌ ಯೋಜನೆಯಲ್ಲಿ ಬಾಕಿ ಇರುವ ಮನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗುವುದು ಖಾಸಗಿ ಮಾಲೀಕತ್ವದ ಘೋಷಣೆಗೆ ಯಾವುದೇ ರೀತಿಯ ತೊಡಕಿಲ್ಲ, ಈಗಾಗಲೇ ಹಣಕಾಸು ಇಲಾಖೆ ಸ್ಲಂಗಳ ಘೋಷಣೆ ಆಡಳಿತಾತ್ಮಕ ವಿಚಾರವೆಂದು ಸ್ಪಷ್ಟೀಕರಣ ನೀಡಿರುವುದರಿಂದ ಉತ್ತರ ಕರ್ನಾಟಕ ಭಾಗದ ಸ್ಲಂ ನಿವಾಸಿಗಳಿಗೆ ವಸತಿ ಇಲಾಖೆ ಸುತ್ತೋಲೆ ತೊಡಕಾಗಿದ್ದು, ಎಲ್ಲಾ ವಿಭಾಗಗಳಿಂದ ಬಾಕಿ ಇರುವ ಸರ್ಕಾರಿ ಮತ್ತು ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆಗೆ ಕ್ರಮವಹಿಸಲು ಸ್ಪಷ್ಟ ಸೂಚನೆ ನೀಡಲಾಗುವುದೆಂದರು.

    ನುಡಿದಂತೆ ಸಿದ್ದರಾಮಯ್ಯ ಸರ್ಕಾರ ನಡೆದುಕೊಳ್ಳಬೇಕು: ಎ.ನರಸಿಂಹಮೂರ್ತಿ

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ 2023ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಲಂ ಜನರಿಗೆ ನೀಡಿರುವ ಪ್ರಾಳಿಕೆಯ ಭರವಸೆಯಂತೆ ಸಿದ್ದರಾಮಯ್ಯ ಸರ್ಕಾರ ನಡೆಯಬೇಕು. ನಗರಗಳಲ್ಲಿ ಅಸಮಾನತೆ ಮತ್ತು ಅಭಿವೃದ್ಧಿ ತಾರತಮ್ಯದಿಂದ ಕೊಳಚೆ ಪ್ರದೇಶದಲ್ಲಿರುವ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಕಾಂಗ್ರೆಸ್‌ ಪಕ್ಷದ ಭರವಸೆಯ ಮೇಲೆ ಸ್ಲಂ ನಿವಾಸಿಗಳು ಈ ಸರ್ಕಾರವನ್ನು ಆಯ್ಕೆ ಮಾಡಿದ್ದು ವಸತಿ ಹಕ್ಕು ಕಾಯಿದೆ, ನಗರ ಉದ್ಯೋಗ ಖಾತ್ರಿ ಕಾಯಿದೆ, ಹೊಸ ಸ್ಲಂ ಕಾಯಿದೆ ಸೇರಿದಂತೆ ನಿವೇಶನ ರಹಿತರಿಗೆ ವಿಶೇಷ ವರ್ಗಗಳಿಗೆ ವಸತಿ ಕಲ್ಪಿಸಲು ಲ್ಯಾಂಡ್‌ ಬ್ಯಾಂಕ್ ನೀತಿ ಜಾರಿಯನ್ನು ತುರ್ತಾಗಿ ಮಾಡಬೇಕು. ಸ್ಲಂ ಜನರಿಗೆ ಸ್ಪಂಧಿಸುವ ಮತ್ತು ಸರ್ಕಾರಕ್ಕೆ ಹೆಸರು ತರುವ ದಕ್ಷತೆಯ ವಸತಿ ಸಚಿವರನ್ನು ಹಾಗೂ ವಸತಿ ಕಾರ್ಯದರ್ಶಿಯನ್ನು ಸರ್ಕಾರ ನೇಮಕ ಮಾಡಬೇಕೆಂದು ಆಗ್ರಹಿಸಿ ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆ ತಡೆಯಿಂದ ಉತ್ತರ ಕರ್ನಾಟಕದ ಕಲ್ಯಾಣ/ಕಿತ್ತೂರು ವಲಯಗಳ 150 ಸ್ಲಂಗಳ ಕಳೆದ 2 ವರ್ಷಗಳಿಂದ ಘೋಷಣೆಯಾಗದೆ ಅತಂತ್ರ ಸ್ಥಿತಿಯಲ್ಲಿವೆ, ಈ ಬಗ್ಗೆ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಚಳಿಗಾಲದ ಅಧಿವೇಶದಲ್ಲಿ ಚರ್ಚೆಯಾಗಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯ ನೇತೃತ್ವವನ್ನು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿ ಪದಾಧಿಕಾರಿಗಳಾದ ಗದಗನ ಇಮ್ತಿಯಾಜ್‌ ಆರ್‌ ಮಾನ್ವಿ, ಹುಬ್ಬಳ್ಳಿಯ ಶೋಭ ಕಮತಾರ್‌, ಬೆಳಗಾವಿಯ ಫಕೀರಪ್ಪ ತಳವಾರ್‌, ಬೆಂಗಳೂರಿನ ಚಂದ್ರಮ್ಮ, ರಾಯಚೂರಿನ ಜನಾರ್ಧನ್‌ ಹಳ್ಳಿಬೆಂಚಿ, ದಾವಣಗೆರೆಯ ರೇಣುಕ ಎಲ್ಲಮ್ಮ, ತುಮಕೂರಿನ ಅರುಣ್‌, ಹೊಸಪೇಟೆಯ ವೆಂಕಮ್ಮ, ಬಳ್ಳಾರಿಯ ಶೇಖರ್‌ ಬಾಬು, ಬಿಜಾಪುರದ ಅಕ್ರಮ್‌ ಮಶಾಲ್ಕರ್‌, ಕಲ್ಬುರ್ಗಿಯ ರೇಣುಕ ಸರಡಗಿ, ಯಾದಗಿರಿಯ ಹಣಮಂತ ಸಹಪೂರ್ಕರ್‌, ಚಿತ್ರದುರ್ಗದ ಸುಧಾ, ಧಾರವಾಡದ ರಸೂಲ್‌ ನದಾಫ್‌ ವಹಿಸಿದ್ದರು. ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯ ಮಂಜೂಬಾಯಿ, ದಮನಿತ ಸಾಧನ ಮಹಿಳಾ ಸಂಘದ ಅನ್ನಪೂರ್ಣ ಹಾಗೂ ಸ್ಲಂ ಜನಾಂದೋಲನ ಕರ್ನಾಟಕದ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    ಯಾದಗಿರಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ದರ್ಜೆಯ 24 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ…

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026

    ಬೋರ್ ವೆಲ್ ಮೋಟರ್ ಆನ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟ; ಮತ್ತೊಂದು ಸಜೀವ ಬಾಂಬ್ ಪತ್ತೆ, ರೈತ ಅಪಾಯದಿಂದ ಪಾರು

    August 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.