ಮಧುಗಿರಿ: ಪಟ್ಟಣದ ಪುರಸಭೆಯಲ್ಲಿನ ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದೇಶ ಮತ್ತು ಸೂಚನೆಗಳನ್ನು ಗಾಳಿಗೆ ತೂರಿ ನಿಯಮಗಳನ್ನು ಮರೆತು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ.
ದಿನಾಂಕ :16/03/2024 ರ ಶನಿವಾರದಂದು ಮಧುಗಿರಿಯ ಪುರಸಭೆ ಕಾರ್ಯಾಲಯದ ಮುಂದೆ ಇರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸದೇ ಅಪಮಾನ ಮಾಡಿರುವ ಪ್ರಕರಣದ ಬೆಳಕಿಗೆ ಬಂದಿದೆ.
ಕಾಳಜಿ ಫೌಂಡೇಶನ್ ತುಮಕೂರು ಮತ್ತು ನೈಜ್ಯ ಹೋರಾಟಗಾರರ ವೇದಿಕೆಯ ಕಾರ್ಯಕರ್ತರು, ಪೌರ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಕಾರ್ಮಿಕರ ಕೈ ಸೇರದೆ ವಂಚಿತವಾಗುತ್ತಿರುವ ದೂರಿನ ಮೇರೆಗೆ ಪುರಸಭೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಷ್ಟ್ರಧ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿಧಾನಗತಿಯಲ್ಲಿ ಇಳಿಸಬೇಕು. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು. ರಾಷ್ಟ್ರ ಧ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿಯೂ ಸಹ ಪ್ರತಿದಿನ ನಿಯಮಾನುಸಾರ ರಾಷ್ಟ್ರಧ್ವಜ ಹಾರಿಸಬೇಕೆಂಬ ಆದೇಶವಿದ್ದರೂ ಸಹ ಮಧುಗಿರಿ ಪುರಸಭೆಯಲ್ಲಿ ಧ್ವಜ ಹರಿಸದೇ ಅವಮಾನ ಮಾಡಿರುವ ಘಟನೆ ನಡೆದಿದೆ.

ಪುರಸಭೆ ಮ್ಯಾನೇಜರ್ ಗುರುಪ್ರಸಾದ್ ರಾಷ್ಟ್ರಧ್ವಜ ಹಾರಿಸಲು ನಮಗೆ ಯಾವುದೇ ಆದೇಶವಿಲ್ಲ, ಹಾಗಾಗಿ ನಾನು ಧ್ವಜ ಹರಿಸಿಲ್ಲ ಎಂದು ಸಬೂಬು ಹೇಳಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.
ಈ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ತಪ್ಪಿತಸ್ಥರ ಮೇಲೆ ಶಿಕ್ಷೆಗೆ ಗುರಿ ಪಡಿಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296