nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026
    Facebook Twitter Instagram
    ಟ್ರೆಂಡಿಂಗ್
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ
    ತುಮಕೂರು October 30, 2024

    51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ

    By adminOctober 30, 2024No Comments2 Mins Read
    v somanna

    ತುಮಕೂರು:  ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್‌ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

    ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ ಮೇಳ)ವನ್ನು ಪ್ರಾರಂಭಿಸಿ, 10ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯೇ ಈ ರೋಜ್‌ ಗಾರ್ ಮೇಳ ಎಂದು ತಿಳಿಸಿದರು.

    ಸ್ವಾತಂತ್ರ‍್ಯ ಭಾರತದ 75ನೇ ವರ್ಷದ ಅಮೃತ ಕಾಲದಲ್ಲಿ 75000 ನೇಮಕಾತಿ ಆದೇಶ ಪತ್ರಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲಾಗುವುದು ಎಂದರು.

    ಭಾರತದಲ್ಲಿ ಉದ್ಯೋಗ ಸೃಷ್ಟಿಯ ಪ್ರಮುಖ ಇಲಾಖೆಗಳಲ್ಲಿ ಒಂದಾದ ರೈಲ್ವೆ ಇಲಾಖೆಯೂ ಸಹ ಪ್ರಧಾನ ಮಂತ್ರಿಗಳ ಆಶಯದಂತೆ “ಮಿಷನ್ ಮೋಡ್ ರೆಕ್ರೂಟ್‌ಮೆಂಟ್ ಡ್ರೆöÊವ್”ನಲ್ಲಿ 2014 ರಿಂದ 2024ರ ಅವಧಿಯಲ್ಲಿ 5.02 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗವನ್ನು ಕಲ್ಪಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ರೈಲ್ವೆ ಇಲಾಖೆಯು ಅತ್ಯಂತ ಪಾರದರ್ಶಕ ವ್ಯವಸ್ಥೆಯನ್ನು ಅಳವಡಿಸಿದ್ದು, ಜನರ ಪ್ರಶಂಸೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ಮತ್ತು ಚಾಮ. ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ,…

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.