nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ

    November 28, 2025

    2028ರ ಎಚ್.ಡಿ.ಕೋಟೆ ವಿಧಾನಸಭಾ ಚುನಾವಣೆ: ಜೆಡಿಎಸ್ ನಿಂದ ಹಿನಕಲ್ ಕೆಂಪನಾಯಕ ಟಿಕೆಟ್ ಆಕಾಂಕ್ಷಿ

    November 28, 2025

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ
    • 2028ರ ಎಚ್.ಡಿ.ಕೋಟೆ ವಿಧಾನಸಭಾ ಚುನಾವಣೆ: ಜೆಡಿಎಸ್ ನಿಂದ ಹಿನಕಲ್ ಕೆಂಪನಾಯಕ ಟಿಕೆಟ್ ಆಕಾಂಕ್ಷಿ
    • ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ
    • LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ
    • ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ
    • ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್‌ ಲೈನ್‌ ಅರ್ಜಿ ಆಹ್ವಾನ
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ: ಮತದಾರರ ಪಟ್ಟಿಗೆ ನೋಂದಾಯಿಸಲು ಡಿ.10 ಕೊನೆಯ ದಿನ
    • ನ.28 ರಂದು ಪತ್ರಿಕಾ ವಿತರಕರ ಕ್ರೀಡಾಕೂಟದ ಬಹುಮಾನ ವಿತರಣೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ
    ತುಮಕೂರು October 30, 2024

    51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ

    By adminOctober 30, 2024No Comments2 Mins Read
    v somanna

    ತುಮಕೂರು:  ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್‌ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

    ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು.


    Provided by
    Provided by

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ ಮೇಳ)ವನ್ನು ಪ್ರಾರಂಭಿಸಿ, 10ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯೇ ಈ ರೋಜ್‌ ಗಾರ್ ಮೇಳ ಎಂದು ತಿಳಿಸಿದರು.

    ಸ್ವಾತಂತ್ರ‍್ಯ ಭಾರತದ 75ನೇ ವರ್ಷದ ಅಮೃತ ಕಾಲದಲ್ಲಿ 75000 ನೇಮಕಾತಿ ಆದೇಶ ಪತ್ರಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲಾಗುವುದು ಎಂದರು.

    ಭಾರತದಲ್ಲಿ ಉದ್ಯೋಗ ಸೃಷ್ಟಿಯ ಪ್ರಮುಖ ಇಲಾಖೆಗಳಲ್ಲಿ ಒಂದಾದ ರೈಲ್ವೆ ಇಲಾಖೆಯೂ ಸಹ ಪ್ರಧಾನ ಮಂತ್ರಿಗಳ ಆಶಯದಂತೆ “ಮಿಷನ್ ಮೋಡ್ ರೆಕ್ರೂಟ್‌ಮೆಂಟ್ ಡ್ರೆöÊವ್”ನಲ್ಲಿ 2014 ರಿಂದ 2024ರ ಅವಧಿಯಲ್ಲಿ 5.02 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗವನ್ನು ಕಲ್ಪಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ರೈಲ್ವೆ ಇಲಾಖೆಯು ಅತ್ಯಂತ ಪಾರದರ್ಶಕ ವ್ಯವಸ್ಥೆಯನ್ನು ಅಳವಡಿಸಿದ್ದು, ಜನರ ಪ್ರಶಂಸೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ

    November 28, 2025

    ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ

    November 28, 2025

    ಕಲಾವಿದರಿಗೆ ಧನ ಸಹಾಯಕ್ಕಾಗಿ ಆನ್‌ ಲೈನ್‌ ಅರ್ಜಿ ಆಹ್ವಾನ

    November 28, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ

    November 28, 2025

    ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 20 ಕೋಟಿ ರೂ.…

    2028ರ ಎಚ್.ಡಿ.ಕೋಟೆ ವಿಧಾನಸಭಾ ಚುನಾವಣೆ: ಜೆಡಿಎಸ್ ನಿಂದ ಹಿನಕಲ್ ಕೆಂಪನಾಯಕ ಟಿಕೆಟ್ ಆಕಾಂಕ್ಷಿ

    November 28, 2025

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025

    LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ

    November 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.