nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ರಾಜ್ಯೋತ್ಸವ: ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು October 25, 2024

    ಕನ್ನಡ ರಾಜ್ಯೋತ್ಸವ: ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ

    By adminOctober 25, 2024No Comments3 Mins Read
    sahithya vara

    ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಜ್ಞಾನಪೀಠ ಪುರಸ್ಕೃತರು, ಕನ್ನಡ ನಾಡು–ನುಡಿಗಾಗಿ ಹೋರಾಡಿದ ಜಿಲ್ಲೆಯ ಹೆಸರಾಂತ ಕವಿ/ಸಾಹಿತಿಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಾಹಿತ್ಯವಾರ ಆಚರಣೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡುವುದಲ್ಲದೆ, ಕನ್ನಡ ಸಾಹಿತ್ಯ ಮತ್ತು ಕನ್ನಡ ಕವಿಗಳ ಇತಿಹಾಸದ ಪರಿಚಯವಾಗುತ್ತದೆ. ಭಾರತದ ಇತರೆ ಭಾಷೆಗಳಿಗಿಂತ ಕನ್ನಡ ಭಾಷೆ ಶ್ರೀಮಂತ ಭಾಷೆಯಾಗಿದ್ದು, ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.


    Provided by
    Provided by

    ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕೀಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಬೇಕು ಎಂದು ನಿರ್ದೇಶಿಸಿದರು.

    ಮೆರವಣಿಗೆಯಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖಾಧಿಕಾರಿಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳು ಹಾಗೂ ಜಿಲ್ಲೆಯ ಹೆಸರಾಂತ ಸಾಹಿತಿ ಹಾಗೂ ಕವಿಗಳ ಭಾವಚಿತ್ರದೊಂದಿಗೆ ಸಮಾಜಮುಖಿ ಚಿಂತನೆಯುಳ್ಳ ಅವರ ಬರಹದ ಸಾಲುಗಳ ಘೋಷ ವಾಕ್ಯಗಳ ಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೂ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದವರ ಪರಿಚಯ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

    ಮೆರವಣಿಗೆಯಲ್ಲಿ ಭಾಗವಹಿಸುವ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ತಬ್ಧಚಿತ್ರಗಳು ನವೆಂಬರ್ 1ರ ಬೆಳಿಗ್ಗೆ 7:30 ಗಂಟೆಗೆ ಟೌನ್‌ಹಾಲ್ ವೃತ್ತದ ಬಳಿ ಹಾಜರಿರಬೇಕು. ಮೆರವಣಿಗೆಯು ಟೌನ್‌ಹಾಲ್ ವೃತ್ತದ ಮುಂಭಾಗದಿಂದ ಪ್ರಾರಂಭಗೊಂಡು ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ತಲುಪಲಿದೆ ಎಂದು ತಿಳಿಸಿದರು.

    ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಧ್ವಜಸ್ತಂಭ, ಗೌರವರಕ್ಷೆ ಸ್ವೀಕಾರ ಸೇರಿದಂತೆ ಕಾರ್ಯಕ್ರಮ ನಡೆಸಲು ಅಗತ್ಯ ವೇದಿಕೆ, ಗಣ್ಯರಿಗೆ ಆಸನ ವ್ಯವಸ್ಥೆ, ಅಲಂಕಾರಿಕ ಹೂಕುಂಡಗಳ ವ್ಯವಸ್ಥೆ, ನಾಡಗೀತೆಯ ಗಾಯನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

    ಧ್ವಜಾರೋಹಣದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮಕ್ಕಳ ತಂಡಗಳನ್ನು ಸಿದ್ಧಪಡಿಸಿಕೊಂಡು ತಾಲೀಮು ನಡೆಸಲು ಹಾಗೂ ಕಾರ್ಯಕ್ರಮವನ್ನು ಸಂಘಟಿಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

    ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಅಧಿಕಾರಿಗಳು/ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಸಮಿತಿಯ ಮೂಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ನಿರ್ದೇಶಿಸಿದರು.

    ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಮಕ್ಕಳಿಂದ ಕನ್ನಡ ಭಾಷೆಯ ಹಿರಿಮೆ–ಗರಿಮೆಗಳನ್ನು ಸಾರುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು/ ಅಧೀನ ಅಧಿಕಾರಿಗಳು/ಸಿಬ್ಬಂದಿಗಳು ತಪ್ಪದೇ ಹಾಜರಾಗಲು ಸೂಚಿಸಿದರು.

    ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025

    ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ: ಮಾಜಿ ಸಚಿವ ಹೇಳಿಕೆ

    July 9, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.