ತುಮಕೂರು : ದಿವ್ಯದೃಷ್ಟಿ ಕಲಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ತುಮಕೂರಿನ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ವಿದ್ಯಾವಾಚಸ್ಪತಿ ಖ್ಯಾತ ಸಾಹಿತಿ ಡಾ.ಕವಿತಾಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ರಾಜ್ಯ ಪ್ರಶಸ್ತಿ ವಿಜೇತ ನವರತ್ನ ಇಂದುಕುಮಾರ್, ತಿಲಕ್ ಪಾರ್ಕ್ ಪೊಲೀಸ್ ಠಾಣೆ ಮಹಿಳಾ ಸಬ್ ಇನ್ಸ್ಪೆಕ್ಟರ್ ಚಂದ್ರಕಲಾ ಟಿ.ಎಸ್. ಹಾಗೂ ರಮೋ ಮಜಾ ಟಾಕೀಸ್ ಖ್ಯಾತಿ ಗೌರವ ನಿರ್ದೇಶಕರು ದಿವ್ಯದೃಷ್ಟಿ ಸಂಸ್ಥೆ ಇವರುಗಳು ಉದ್ಘಾಟಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಜಾ ಟಾಕೀಸ್ ರೆಮೋ , ಎಲ್ಲರಿಗೂ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು ತಿಳಿಸಿ, ಸಾಧಕಿ ಕುಸುಮಾ ಜೈನ್ ಜೈನ್ ಅವರ ಸಾಧನೆಯನ್ನು ಶ್ಲಾಘಿಸಿದರು. ಜೊತೆಗೆ ಎಲ್ಲರೂ ಒಟ್ಟಾಗಿ ಇರೋಣ ನಗುನಗುತ ಇರೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಣಿ ಚಂದ್ರಶೇಖರ್, ಜಲಜ ಜೈನ್ ಕಾರ್ಯದರ್ಶಿ ದಿವ್ಯದೃಷ್ಟಿ ಸಂಸ್ಥೆ, ಕುಮಾರಿ ಚೈತ್ರಲಿ ನೃತ್ಯ ಕಲಾವಿದೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಹಾಗೂ ನಂದಿನಿ ಬ್ರಹ್ಮದೇವ ಅಧ್ಯಕ್ಷರು ದಿವ್ಯದೃಷ್ಟಿ ಸಂಸ್ಥೆ ಉಪಸ್ಥಿತರಿದ್ದರು.
ವರದಿ: ಎ.ಎನ್.ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB