nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!
    ಜಿಲ್ಲಾ ಸುದ್ದಿ October 23, 2025

    ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!

    By adminOctober 23, 2025No Comments2 Mins Read
    dipawali

    ವರದಿ: ಹಾದನೂರು ಚಂದ್ರ

    ಸರಗೂರು:  ಆಕರ್ಷಕ ಮೈಕಟ್ಟು ಹೊಂದಿರುವ ಹೋರಿಗಳು ಹಾಗೂ ಒಂದೇ ತರನಾಗಿ ಕಾಣುವ ಜೋಡೆತ್ತುಗಳು ಎತ್ತಿನಗಾಡಿಗೆ ಎರಡು ಟ್ರಾಕ್ಟರ್ ಇಂಜಿನ್ ಕಟ್ಟಿಕೊಂಡು ಎಳೆದುಕೊಂಡು ನಾಗಾಲೋಟದಲ್ಲಿ ಓಡುತ್ತಿದ್ದ ಮೈನವಿರೇಳಿಸುವ ದೃಶ್ಯ ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು.


    Provided by
    Provided by

    ತಾಲೂಕಿನ ಹಾದನೂರು ಗ್ರಾಮದಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ 3ನೇ ವರ್ಷದ ಜೋಡಿ ಎತ್ತಿನಗಾಡಿಗೆ ಎರಡು ಟ್ರಾಕ್ಟರ್ ಇಂಜಿನ್ ಕಟ್ಟಿಕೊಂಡು ಎಳೆಯುವ ಸ್ಪರ್ಧೆಯನ್ನು ಹಾದನೂರು ಜೈ ಭೀಮ್ ಅಂಬೇಡ್ಕರ್ ಹುಡುಗರ ಬಳಗವತಿಯಿಂದ ಆಯೋಜಿಸಿದ್ದು ನಂತರ ಗ್ರಾಮದ ಯಜಮಾನರು ಹಾಗೂ ಮುಖಂಡರು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಸೇರಿಕೊಂಡು ಜೋಡಿ ಎತ್ತಿನಗಾಡಿಗೆ ಸ್ಪರ್ಧೆಗೆ ಚಾಲನೆ  ನೀಡಿದರು.

    ಮೈದಾನದಲ್ಲಿ ತಾ ಮುಂದು, ನಾ ಮುಂದು ಎಂದು ಜೋಡಿ ಎತ್ತಿನ ಗಾಡಿಗಳ ಮೇಲೆ ನಿಂತು ಹಗ್ಗವನ್ನು ಕೈಯಲ್ಲಿ ಹಿಡಿದು ಎತ್ತುಗಳಿಗೆ ಪಟ, ಪಟನೆ ಚಾವಟಿಯಲ್ಲಿ ಬಾರಿಸುತ್ತ ಗೆಲುವಿಗಾಗಿ ಹರಸಾಹಸ ಪಡುತ್ತಿದ್ದರೆ, ಮೈದಾನದ ಸುತ್ತಲೂ ನೆರೆದ ಬೆಂಬಲಿಗರು ಹಾಗೂ ಪ್ರೇಕ್ಷಕರು ಸಿಳ್ಳೆ, ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಿದ್ದರು.

    ಕ್ಷ ಣದಲ್ಲಿಯೇ ಮತ್ತೊಂದು ಜೊತೆ ಎತ್ತಿನ ಗಾಡಿ ಓಟ ಕಣ್ತುಂಬಿಕೊಳ್ಳಲು ಮುತ್ತಿಕೊಳ್ಳುತ್ತಿದ್ದರು. ಮಂಡ್ಯ ಜಿಲ್ಲೆಯ ಜೋಡಿ ಜೋಡೆತ್ತುಗಳಿಗೆ ಮೊದಲನೇ ಶಿರನಹಳ್ಳಿ ಗರುಡ ಸಿಪಾಯಿ.ದ್ವಿತೀಯ ಕಿಲನಪುರ ದಯಾನಂದಸ್ವಾಮಿ .ತೃತೀಯ ಮಂಡ್ಯ ಹುಲಿವಾನ. ಪಂದ್ಯದಲ್ಲಿ ಗೆಲುವು ಸಾಧಿಸಿ ಬಹುಮಾನ ಹಾಗೂ ಟ್ರೋಫಿ ಪಡೆದುಕೊಂಡರು.

    ಚಾಮರಾಜನಗರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳು ಹಾಗೂ  ಎಚ್.ಡಿ.ಕೋಟೆ ಸರಗೂರು, ನಂಜನಗೂಡು ತಾಲೂಕಗಳು ಗ್ರಾಮದ ಸೇರಿದಂತೆ 18 ಜತೆ ಜೋಡೆತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ನೌಕಾಟ್‌ ಮಾದರಿಯಲ್ಲಿ ಸ್ಪರ್ಧೆ ನಡೆಸಲಾಯಿತು.

    ಇದಕ್ಕೂ ಮೊದಲು ಹಾದನೂರು ಗ್ರಾಮದ ಪ್ರಮುಖ ಮುಖ್ಯ ಬೀದಿಯಲ್ಲಿ ಜೋಡೆತ್ತುಗಳನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಮೆರವಣಿಗೆಗೆ ಚಾಲನೆ ನೀಡಿದರು. ನಾನಾ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

    ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಹಾಗೂ ಯಜಮಾನ ಪ್ರಕಾಶ್, ಸದಸ್ಯರು ರಾಜೇಶ್, ಶಿವರಾಜು, ಕೆಂಪಸಿದ್ದ, ಆಯೋಜಕರು ಗ್ರಾಮೀಣ ಪ್ರದೇಶದ ರೋಮಾಂಚನಕಾರಿ ಕ್ರೀಡೆಯಲ್ಲಿ ಎತ್ತಿನಗಾಡಿ ಓಟವೂ ಒಂದಾಗಿದೆ. ಹಿಂದಿನ ಕಾಲದಲ್ಲಿ ಸದಾ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ರೈತರು ಮನರಂಜನೆ ಮತ್ತು ಸಾಹಸ ಪ್ರದರ್ಶನಕ್ಕಾಗಿ ಹುಟ್ಟುಹಾಕಿದ ಎತ್ತಿನಗಾಡಿ ಓಟ ಇವತ್ತಿಗೂ ಗ್ರಾಮೀಣ ಭಾಗದ ಪ್ರಮುಖ ಕ್ರೀಡೆಯಾಗಿ ಗಮನಸೆಳೆಯುತ್ತಿದೆ. ಈಗ ಮೊದಲಿಗೆ ಹೋಲಿಸಿದರೆ ಒಂದಷ್ಟು ಬದಲಾವಣೆಗಳೊಂದಿಗೆ ಇನ್ನಷ್ಟು ವೈಭವತೆ ಪಡೆದುಕೊಂಡಿರುವುದು ನಿಜಕ್ಕೂ ಖುಷಿಪಡುವ ಸಂಗತಿಯಾಗಿದೆ.

    ಈ ಸಂದರ್ಭದಲ್ಲಿ ಯಜಮಾನರು ರಾಜೇಶ್, ಪ್ರಕಾಶ್, ಗ್ರಾಪಂ ಸದಸ್ಯರು ಶಿವರಾಜು,ಕೆಂಪಸಿದ್ದ, ಆಯೋಜಕರು ನಾಗೇಶ್, ಮೂರ್ತಿ, ರಂಗಸ್ವಾಮಿ, ಮಧು, ಪ್ರಕಾಶ್ (ಕುಳ್ಳ), ರವಿಕುಮಾರ್, ಸುನೀಲ್, ಸೂರ್ಯ, ಆಕಾಶ್, ಸಂಜಯ್, ಅಜೀತ್, ಪಾಪ, ಮುಖಂಡರು ರಾಜಣ್ಣ, ಪುಟ್ಟಸ್ವಾಮಿ, ನಾಗರಾಜು, ಶಿಕ್ಷಕ ಸಿದ್ದಯ್ಯ, ಲೋಕೇಶ್, ರಮೇಶ್, ಸಣ್ಣಸ್ವಾಮಿ, ಶಿವಮೂರ್ತಿ, ಪ್ರಸನ್ನ ಕುಮಾರ್, ನಾಗೇಂದ್ರ, ವೃಷಬೇಂದ್ರೆ, ಅಂಚೆ ಕಚೇರಿ ಧ್ರುವ ಕುಮಾರ್, ಚಿಕ್ಕ ಪುಟ್ಟಯ್ಯ, ನಾರಾಯಣಸ್ವಾಮಿ (ಶನೀಶ್ವರ ಗುಡಪ್ಪ) ಇನ್ನೂ ಮುಖಂಡರು ಸೇರಿದಂತೆ ಗ್ರಾಮದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ಪರ್ಧೆಯ ಗಮನ ಸೆಳೆದರು.

    ಗ್ರಾಮೀಣ ಪ್ರದೇಶದ ರೋಮಾಂಚನಕಾರಿ ಕ್ರೀಡೆಯಲ್ಲಿ ಎತ್ತಿನಗಾಡಿ ಓಟವೂ ಒಂದಾಗಿದೆ. ಹಿಂದಿನ ಕಾಲದಲ್ಲಿ ಸದಾ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ರೈತರು ಮನರಂಜನೆ ಮತ್ತು ಸಾಹಸ ಪ್ರದರ್ಶನಕ್ಕಾಗಿ ಹುಟ್ಟುಹಾಕಿದ ಎತ್ತಿನಗಾಡಿ ಓಟ ಇವತ್ತಿಗೂ ಗ್ರಾಮೀಣ ಭಾಗದ ಪ್ರಮುಖ ಕ್ರೀಡೆಯಾಗಿ ಗಮನಸೆಳೆಯುತ್ತಿದೆ. ಈಗ ಮೊದಲಿಗೆ ಹೋಲಿಸಿದರೆ ಒಂದಷ್ಟು ಬದಲಾವಣೆಗಳೊಂದಿಗೆ ಇನ್ನಷ್ಟು ವೈಭವತೆ ಪಡೆದುಕೊಂಡಿರುವುದು ನಿಜಕ್ಕೂ ಖುಷಿಪಡುವ ಸಂಗತಿಯಾಗಿದೆ.

    ಹಾದನೂರು ಪ್ರಕಾಶ್, ಹಾದನೂರು ಗ್ರಾಪಂ ಉಪಾಧ್ಯಕ್ಷ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಚಿತ್ರದುರ್ಗ: ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್‍ ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ…

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.