nammatumakuru

    Subscribe to Updates

    Get the latest creative news from FooBar about art, design and business.

    What's Hot

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026
    Facebook Twitter Instagram
    ಟ್ರೆಂಡಿಂಗ್
    • “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ; ರೈತರಿಗೆ ಡಿಕೆಶಿ ಭರವಸೆ
    ರಾಜ್ಯ ಸುದ್ದಿ August 1, 2023

    ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ; ರೈತರಿಗೆ ಡಿಕೆಶಿ ಭರವಸೆ

    By adminAugust 1, 2023No Comments2 Mins Read
    dk shivakumar

    “ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ. ಕೆ. ಶಿವಕುಮಾರ್ ತಿಳಿಸಿದರು.

    ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ ಆಲಿಸಿ, ಅವರ ಸಲಹೆ ಮತ್ತು ಅಭಿಪ್ರಾಯ ಪಡೆದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು,  ಜಮೀನು ಉಳಿಸಿಕೊಳ್ಳಬೇಕು, ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಇಂದಿನ ಸಭೆಯಲ್ಲಿ ನೀವು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದೀರಿ. ಕಾಲ ಮಿತಿಯಲ್ಲಿ ಯೋಜನೆ ಜಾರಿ, ಪರ್ಯಾಯ ಭೂಮಿ ಹಂಚಿಕೆ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಎನ್ ಓ ಸಿ ನೀಡಬೇಕು, ಬದಲಿ ನಿವೇಶನ ನೀಡುವ ಬಗ್ಗೆ ಸಲಹೆ ನೀಡಿದ್ದೀರಿ.

    ನಾನು ಸ್ವಾಧೀನ ಆಗಿರುವ ಭೂಮಿ ಎನ್ ಓ ಸಿ ನೀಡಲು ಸಾಧ್ಯವಿಲ್ಲ. ಅದನ್ನು ನೇರವಾಗಿ ನಿಮಗೆ ಸ್ಪಷ್ಟಪಡಿಸುತ್ತೇನೆ. ನಾನು ಈ ಯೋಜನೆ ನಿಲ್ಲಿಸಲು ಆಗುವುದಿಲ್ಲ. ಆದರೆ ಯಾವ ರೀತಿ ನಿಮ್ಮ ಹಿತ ಕಾಯಬೇಕು, ಯಾವ ರೀತಿ ನಿಮಗೆ ಹೆಚ್ಚಿನ ಅನುಕೂಲ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ರಸ್ತೆಯೂ ಆಗಬೇಕು, ನಿಮಗೂ ನ್ಯಾಯ ಒದಗಿಸಬೇಕು ಎಂಬುದು ನನ್ನ ಉದ್ದೇಶ.

    ನೀವು ಕೊಟ್ಟಿರುವ ಅಮೂಲ್ಯ ಸಲಹೆಗಳನ್ನು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಈ ವಿಚಾರವಾಗಿ ತೀರ್ಮಾನ ಮಾಡಲಾಗುವುದು. ನಾನು ನಿಮ್ಮ ಜತೆ ಇದ್ದೇನೆ. ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ.

    ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2007ರಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಲೇ ಈ ರಸ್ತೆ ನಿರ್ಮಾಣ ಆಗಿದ್ದರೆ ನಮಗೆ ಇಷ್ಟು ಹೊರೆ ಆಗುತ್ತಿರಲಿಲ್ಲ. ನ್ಯಾಯಾಲಯದಲ್ಲಿ ಈ ಯೋಜನೆ ವಿಚಾರಣೆ ಆಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಆದೇಶ ಬಂದಿದೆ.

    ನಮ್ಮ ಸರ್ಕಾರ ಹೊಸ ಭೂಮಿಗೆ ಅಧಿಸೂಚನೆ ಹೊರಡಿಸುವ ಪರಿಸ್ಥಿತಿಯಲ್ಲಿ ಇಲ್ಲ. ನನ್ನ ಜಮೀನು ಕೂಡ ಭೂ ಸ್ವಾಧೀನ ಆಗುತ್ತಿದೆ. ಈ ಸಮಯದಲ್ಲಿ ನೋಟಿಫಿಕೇಶನ್ ಆಗಿರುವ ಜಮೀನುಗಳನ್ನು ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ. ಒಂದುವೇಳೆ ಮಾಡಿದರೆ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ.

    ರೈತನಿಗೆ ಸಹಾಯ ಮಾಡಬೇಕು ಎಂಬುದು ನಮ್ಮ ಆಸೆ. ಈ ಯೋಜನೆಗೆ 25 ಸಾವಿರ ಕೋಟಿ ಅಗತ್ಯವಿದೆ. ಈ ಯೋಜನೆ ಆದರೆ ಸುತ್ತಮುತ್ತಲ ಜಮೀನು ಬೆಲೆ 5 ಪಟ್ಟು ಹೆಚ್ಚಾಗಲಿದೆ. ಇನ್ನು ನಾವು ಈ ಯೋಜನೆ ತಳ್ಳಿಕೊಂಡು ಹೋಗಲು ಆಗುವುದಿಲ್ಲ. ಇದಕ್ಕಾಗಿ ರೈತರಿಂದಲೇ ಅವರ ಸಮಸ್ಯೆ ಅರಿತು, ಅವರ ಸಲಹೆ ಮತ್ತು ಅಭಿಪ್ರಾಯ ಪಡೆಯಲು, ಪರಿಹಾರ ಇದ್ದರೆ ಅದನ್ನು ಪಡೆಯಲು ಈ ಸಭೆ ಮಾಡಿದ್ದೇನೆ. ನಿಮ್ಮ ಪರಿಸ್ಥಿತಿ ನಾನು ಅರಿತಿದ್ದೇನೆ. ನೀವು ನನ್ನ ಸ್ಥಾನದಲ್ಲಿ ನಿಂತು ಈ ವಿಚಾರದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂದು ಸಲಹೆ ನೀಡಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ತುಮಕೂರು: ಕರ್ತವ್ಯದ ಒತ್ತಡಕ್ಕೆ ಸಿಲುಕಿ ಬೆಳ್ಳಂಬೆಳಗ್ಗೆಯೇ ಕೆಲಸಕ್ಕೆ ಹೊರಟಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ (VA) ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ…

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.