nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    • ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರೈನ್ ಡೆಡ್ ಗೊಂಡ ಬಳಿಕ ಯಾವ್ಯಾವ ಅಂಗಗಳನ್ನು ದಾನ ಮಾಡಬಹುದು ಗೊತ್ತಾ..?
    ರಾಜ್ಯ ಸುದ್ದಿ June 7, 2024

    ಬ್ರೈನ್ ಡೆಡ್ ಗೊಂಡ ಬಳಿಕ ಯಾವ್ಯಾವ ಅಂಗಗಳನ್ನು ದಾನ ಮಾಡಬಹುದು ಗೊತ್ತಾ..?

    By adminJune 7, 2024No Comments2 Mins Read
    brain

    ಬ್ರೈನ್ ಡೆತ್ ಅಥವಾ ಮೆದುಳು ಸಾವು ಎಂದರೆ ವ್ಯಕ್ತಿ ಪೂರ್ತಿ ಸತ್ತಿದ್ದಾನೆ ಎಂದು ಅರ್ಥ. ಮೆದುಳು ಸಾವು ಎಂಬುದನ್ನ ವೈದ್ಯರು ದೃಢೀಕರಿಸಬೇಕು. ಕೆಲವೊಮ್ಮೆ ಸಹಜವಾಗಿ ಓಡಾಡುತ್ತಿರುವ ವ್ಯಕ್ತಿ ಬ್ರೈನ್ ಡೆತ್‌ ಗೆ ಒಳಗಾಗುವುದುಂಟು. ಕೆಲವೊಮ್ಮೆ ಅಪಘಾತಕ್ಕೆ ತುತ್ತಾಗಿ ಜೀವರಕ್ಷಕ ವ್ಯವಸ್ಥೆಯಲ್ಲಿರುವ ವ್ಯಕ್ತಿ ಬ್ರೇನ್ ಡೆತ್‌ಗೆ ಒಳಗಾಗುತ್ತಾನೆ/ಳೆ. ಮೆದುಳು ತನ್ನ ಕಾರ್ಯವನ್ನು ಪೂರ್ತಿಯಾಗಿ ನಿಲ್ಲಿಸಲು ನಾನಾ ಕಾರಣಗಳಿರಬಹುದು.

    ಬ್ರೈನ್ ಡೆತ್‌ ಗೆ ಒಳಗಾದಾಗ ಇತರ ಅಂಗಗಳೂ ತಮ್ಮ ಕೆಲಸ ನಿಲ್ಲಿಸುತ್ತವೆ. ಯಾಕೆಂದರೆ ಮೆದುಳಿನಿಂದ ಅವುಗಳಿಗೆ ಯಾವುದೇ ಸಂದೇಶ ಬರುವುದಿಲ್ಲವಾದ್ದರಿಂದ. ಉಳಿದಂತೆ ಅವು ಸುಸ್ಥಿತಿಯಲ್ಲಿರುತ್ತವೆ. ವ್ಯಕ್ತಿಯ ಬೇರೆ ಯಾವುದೇ ಅಂಗ ಕೆಲಸ ನಿಲ್ಲಿಸಿದರೆ ಅದನ್ನು ದುರಸ್ತಿ ಮಾಡಬಹುದು, ಕಸಿ ಮಾಡಬಹುದು ಅಥವಾ ಬೇರೆ ಅಂಗವನ್ನು ಜೋಡಿಸಬಹುದು. ಆದರೆ ಮೆದುಳು ನಿಷ್ಕ್ರಿಯವಾದರೆ, ಏನೂ ಮಾಡಲು ಸಾಧ್ಯವಿಲ್ಲ. ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!


    Provided by
    Provided by

    ಮೆದುಳು ಕೆಲಕಾಲ ಕೆಲಸ ಮಾಡುವಂತೆ ಆಮ್ಲಜನಕ ಪೂರೈಸಬಹುದು, ಜೀವರಕ್ಷಕ ವ್ಯವಸ್ಥೆಯಲ್ಲಿ ದೇಹವನ್ನು ಇಡಬಹುದು. ಆದರೆ ವ್ಯಕ್ತಿಯ ಪ್ರಜ್ಞೆ ಮರಳುವುದಿಲ್ಲ. ಜೀವರಕ್ಷಕ ವ್ಯವಸ್ಥೆಯು ಹೃದಯ ರಕ್ತ ಪಂಪ್ ಮಾಡುವಂತೆ ಮಾಡುತ್ತದೆ, ಶ್ವಾಸಕೋಶ ಉಸಿರಾಡುವಂತೆ ಮಾಡುತ್ತದೆ; ಆದರೆ ಮೆದುಳು ಕಾರ್ಯಾಚರಿಸುವಂತೆ ಮಾಡುವ ಯಾವುದೇ ವ್ಯವಸ್ಥೆ ಇಲ್ಲ. ಆದ್ದರಿಂಧ ಮೆದುಳು ಸತ್ತಿತೆಂದರೆ ವ್ಯಕ್ತಿ ಸತ್ತನೆಂದೇ ಅರ್ಥ. ಬ್ರೈನ್ ಡೆತ್ ಎಂಬುದು ಒಬ್ಬ ವ್ಯಕ್ತಿಯ ಸಾವಿನ ಕಾನೂನಿನ ಪ್ರಕಾರದ ವ್ಯಾಖ್ಯೆ. ದಾನ ಮಾಡುವುದು ಹೇಗೆ? ಸಾಮಾನ್ಯವಾಗಿ ಮೆದುಳು ಕೆಲಸ ನಿಲ್ಲಿಸಿದಾಗ, ಆಸ್ಪತ್ರೆಯಲ್ಲಿರುವ ವ್ಯಕ್ತಿಯನ್ನು ವೆಂಟಿಲೇಟರ್ ‌ನಲ್ಲಿ ಇಡಲಾಗುತ್ತದೆ.

    ಮೆದುಳು ಪೂರ್ತಿಯಾಗಿ ಕೆಲಸ ನಿಲ್ಲಿಸಿದ್ದರೂ, ವೆಂಟಿಲೇಟರ್ ಸಹಾಯದಿಂದ ೨-೩ ದಿನಗಳ ಕಾಲ ಹೃದಯ ಹೊಡೆದುಕೊಳ್ಳುವಂತೆ ನೋಡಿಕೊಳ್ಳಬಹುದು. ಇದು ಅಂಗದಾನದ ಬಗ್ಗೆ ಕುಟುಂಬಸ್ಥರಿಗೆ ನಿರ್ಧರಿಸಲು, ದೇಹದಿಂದ ಅಂಗವನ್ನು ತೆಗೆದು ಸಂರಕ್ಷಿಸುವ ಕೆಲಸ ಮಾಡಲು ವೈದ್ಯರಿಗೆ ಸಾಕಷ್ಟು ಸಮಯ ನೀಡುತ್ತದೆ. ಸಾಮಾನ್ಯವಾಗಿ ಮೆದುಳು ಸಾವಿಗೀಡಾದ ವ್ಯಕ್ತಿಯ ಮನೆಯವರನ್ನು, ಅಗದಾನ ಮಾಡುವಂತೆ ವೈದ್ಯರು ಮನವೊಲಿಸುತ್ತಾರೆ. ಯಾಕೆಂದರೆ ಅಂಗಕಸಿಯ ಅಗತ್ಯವಿರುವವರು ನಮ್ಮ ದೇಶದಲ್ಲಿ ಅತೀ ಹೆಚ್ಚು. ಆದರೆ ಅಂಗದಾನ ಮಾಡುವವರು ಅತೀ ಕಡಿಮೆ ಸಂಖ್ಯೆ ಮಂದಿ. ಭಾರತದಲ್ಲಿ 2 ಲಕ್ಷ ಜನರಿಗೆ ಕಿಡ್ನಿಯ ಅವಶ್ಯಕತೆಯಿದೆ. ದಾನಕ್ಕೆ ಮುಂದೆ ಬಂದವರ ಸಂಖ್ಯೆ 8 ಸಾವಿರ. ಯಕೃತ್ತಿನ ಜರೂರತ್ತಿರುವವರು 80 ಸಾವಿರ. 1800 ಜನ ದಾನಿಗಳು ಒಪ್ಪಿಕೊಂಡಿದ್ದಾರೆ.

    ವರ್ಷಕ್ಕೆ 2 ಲಕ್ಷ ಕಣ್ಣಿನ ಕಾರ್ನಿಯಾ ಅವಶ್ಯಕತೆಯಿದೆ. ದಾನ ದೊರೆತಿರುವುದು 50,000 ಮಾತ್ರ. ವರ್ಷಕ್ಕೆ 15,000 ಹೃದಯ ಬೇಕು. ದೊರೆಯುವುದು 250 ಮಾತ್ರ. ಅಂಗಗಳು ಸುಸ್ಥಿತಿಯಲ್ಲಿದ್ದು ಸತ್ತವರ ಮನವೊಲಿಸಿ ವೈದ್ಯರು ಅಂಗದಾನ ಮಾಡಿಸಿಕೊಳ್ಳುತ್ತಾರೆ. ಕೆಲವು ಕುಟುಂಬಗಳು ಇದಕ್ಕೂ ಒಪ್ಪುವುದಿಲ್ಲ. ಏಳು ಜೀವ ಉಳಿಸಬಹುದು! ಬ್ರೇನ್‌ ಡೆಡ್‌ ಆದ ಒಬ್ಬ ವ್ಯಕ್ತಿ ದೇಹದಾನ ಮಾಡಿದರೆ ಏಳು ಜೀವಗಳನ್ನು ಉಳಿಸಬಲ್ಲ- ಹೃದಯ, ಶ್ವಾಸಕೋಶ, ಎರಡು ಕಿಡ್ನಿಗಳು, ಪಿತ್ಥಕೋಶ, ಪಿತ್ತಜನಕಾಂಗ, ಕರುಳು ನೀಡುವ ಮೂಲಕ. ಇದಲ್ಲದೆ ಕಾರ್ನಿಯಾ, ಇತರ ಅಂಗಾಂಶಗಳನ್ನೂ ನೀಡಬಹುದು. ಒಂದುವೇಳೆ ಹೃದಯಸ್ತಂಭನದಿಂದ ವ್ಯಕ್ತಿ ಸತ್ತಿದ್ದರೆ ಹೃದಯ ಕಸಿ ಮಾಡಲು ಬರುವುದಿಲ್ಲ. ಮಧುಮೇಹ ಇತ್ಯಾದಿಗಳಿಂದ ಸತ್ತಿದ್ದರೆ ಲಿವರ್, ಕಿಡ್ನಿ, ಇತ್ಯಾದಿ ನೀಡಲು ಸಾಧ್ಯವಿಲ್ಲ.

    ಆದರೆ ಕೇವಲ ಬ್ರೈನ್ ಡೆತ್‌ ನಿಂದ ಸತ್ತವರ ಹೆಚ್ಚಿನ ಅಂಗಗಳ ಸದ್ಬಳಕೆ ಸಾಧ್ಯವಿದೆ. ಆದ್ದರಿಂದಲೇ ಮೆದುಳು ಸಾವಿಗೀಡಾದವರ ಅಂಗದಾನಕ್ಕೆ ಆದ್ಯತೆ. ಸ್ವಯಂಪ್ರೇರಿತವಾಗಿ ನೀವು ಅಂಗದಾನ ಮಾಡಬಹುದು ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಡಿ ಇರುವ National Organ and Tissue Transplant Organization NOTTO ಅಂಗದಾನಕ್ಕೆ ಪ್ರೇರೇಪಣೆ ನೀಡುತ್ತಿದೆ. ಇದರ ವೆಬ್‌ಸೈಟ್‌ www.notto.gov.inದಲ್ಲಿ ಅಂಗದಾನದ ಕುರಿತು ಎಲ್ಲ ವಿವರಗಳೂ ಲಭ್ಯವಿವೆ. ಈ ಜಾಲತಾಣದಲ್ಲಿರುವ ಅರ್ಜಿಯನ್ನು ತುಂಬಿ ಅಂಗದಾನಕ್ಕೆ ನಮ್ಮ ಸಮ್ಮತಿಯನ್ನೂ ನೀಡಬಹುದು. ಇಂತದೇ ಇನ್ನೊಂದು ಸರಕಾರಿ ಸಂಸ್ಥೆ Regional Organ and Tissue Transplant Organization ROTTO.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸರಗೂರು:  ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್  ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ…

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.