ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ಕೊರಟಗೆರೆ : ನೀನೇನು ಎಸಿನಾ ಅಥವಾ ಡಿಸಿನಾ ನಿನ್ನಿಂದ ನಾನು ಹೆದರೋಕೆ.. ನಿನ್ನ ಹೆಸರೇನು ಹೇಳಿ ನೋಡು ನಾನೇನು ಮಾಡ್ತೀನಿ ಅಂತಾ ಗೊತ್ತಾಗುತ್ತೆ.. ನಾನು ಯಾರಿಗೂ ಹೆದರೋದಿಲ್ಲ ಹೆದರಿಸೋಕೆ ಬರಬೇಡಿ ನೀವು. ನಾನು ಪ್ರಕರಣ ದಾಖಲು ಮಾಡ್ತಿದ್ರೇ ನೀವು ಜೈಲಿಗೆ ಹೋಗ್ತಿರಾ ಹುಷಾರ್ ಎಂದು ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ ಮೂಗು ಗಂಟಲು ತಜ್ಞ ಡಾ.ನವೀನ್ ಚಿಕಿತ್ಸೆಗೆಂದು ನಾನು ಹೋದ ಸಂದರ್ಭದಲ್ಲಿ ನನಗೆ ಬೆದರಿಕೆ ಹಾಕಿದ್ದಾನೆ ಎಂದು ದಲಿತ ಹೋರಾಟಗಾರ ಚಿಕ್ಕರಂಗಯ್ಯ ಆರೋಪಿಸಿದ್ದಾರೆ.
ಕೊರಟಗೆರೆ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಜೂನ್ 25ರ ಮಂಗಳವಾರ ಬೆಳಿಗ್ಗೆ 11ಗಂಟೆಯ ಸಮಯದಲ್ಲಿ ಘಟನೆ ನಡೆದಿದೆ. ಡಾ.ನವೀನ್ ಜೂನ್ 24ರ ಸೋಮವಾರ ಬೆಳಿಗ್ಗೆ 9ರಿಂದ ಜೂನ್ 25ರ ಮಂಗಳವಾರ ಬೆಳಿಗ್ಗೆ 9ರವರೆಗೆ ಕರ್ತವ್ಯನಿರತ ವೈದ್ಯರು. ಆದರೆ ಅವರು ಕರ್ತವ್ಯದಲ್ಲಿರಲಿಲ್ಲ. ಅವರನ್ನು ಪ್ರಶ್ನೆ ಮಾಡಿದರೆ ಸಮವಸ್ತ್ರವೂ ಧರಿಸದೇ ರೋಗಿಗಳ ಜೊತೆಗೆ ಉದ್ಧಟತನದಿಂದ ವರ್ತಿಸಿದ್ದಾರೆ.
ಘಟನೆಗೂ ನವೀನ್ ಗೂ ಸಂಬಂಧ ಏನು.?
ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯ ಬಗ್ಗೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಹಾಗೂ ದಲಿತ ಹೋರಾಟಗಾರ ಚಿಕ್ಕರಂಗಯ್ಯ ಆಸ್ಪತ್ರೆಯ ವೈದ್ಯ ಡಾ.ಪುರುಷೋತ್ತಮ್ ಗೆ ಪ್ರಶ್ನೆ ಮಾಡ್ತಾರೇ. ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ವೈದ್ಯ ಡಾ.ನವೀನ್ ಏಕಾಏಕಿ ಕಿರುಚಬೇಡಿ ಇಲ್ಲಿ ಯಾರು ಹೆದರೋರು ಯಾರು ಇಲ್ಲ. ನನಗೆ ಲೌಡಕ್ಕೆಬಾಲ್ ಅಂತಿಯಾ ನೀನು? ನಿನ್ನ ಹೆಸರೇನು ನಿನಗೇ ಏನ್ ಮಾಡ್ತೀನಿ ನೋಡ್ತಾ ಇರು ಅಂತಾರೇ. ವೈದ್ಯ ಡಾ.ಪುರುಷೋತ್ತಮ ಅವರು ಡಾ.ನವೀನ್ ಗೆ ಸುಮ್ಮನಿರಲು ಸೂಚಿಸಿದ್ರು ಆದರೆ ಸುಮ್ಮನಾಗದೇ ಜಗಳಕ್ಕೆ ಇಳಿದಿದ್ದಾರೆ ಎಂದು ಆರೋಪಿಸಲಾಗಿದೆ.
ಪೊಲೀಸ್ ಠಾಣೆಗೆ ದೂರು:
ಸಾರ್ವಜನಿಕ ಆಸ್ಪತ್ರೆಯ ಡಾ.ನವೀನ್ ಸಮವಸ್ತ್ರವೂ ಧರಿಸದೇ ನಿರ್ಲಕ್ಷ್ಯ ವಹಿಸಿದ್ದು, ಚಿಕಿತ್ಸೆಗೆ ಹೋದ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು, ಕೈಎತ್ತಿ ಹೊಡೆಯಲು ಬಂದು ಜಾತಿಯ ಹೆಸರೇಳಿ ನಿಂದನೆ ಮಾಡಿದ್ದಾನೆ ಎಂದು ಕೊರಟಗೆರೆ ಪೊಲೀಸ್ ಠಾಣೆಗೆ ದಲಿತ ಮುಖಂಡ ಚಿಕ್ಕರಂಗಯ್ಯ ದೂರು ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಪದೇ ಪದೇ ಕರ್ತವ್ಯಲೋಪ ಮಾಡುವ ಡಾ.ನವೀನ್ರನ್ನು ತಕ್ಷಣ ಅಮಾನತು ಮಾಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ಮಾಡಿದ್ದಾರೆ.
ಆಸ್ಪತ್ರೆಯ ವೈದ್ಯರಿಗೆ ನೊಟೀಸ್ ಜಾರಿ:
ವೈದ್ಯರು ನಿಗದಿತ ಸಮಯಕ್ಕೆ ಆಸ್ಪತ್ರೆಗೆ ಆಗಮಿಸದೇ ರೋಗಿಗಳಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ದೂರು ಬಂದಿವೆ. ವೈದ್ಯರಿಗೆ ಮೌಖಿಕವಾಗಿ ಹಲವು ಬಾರಿ ತಿಳಿಸಿದ್ರು ಸಮಸ್ಯೆ ಸರಿಹೋಗಿಲ್ಲ. ಕರ್ತವ್ಯಕ್ಕೆ ನಿಗದಿತ ಸಮಯಕ್ಕೆ ಆಗಮಿಸದೇ ಇದ್ದರೇ ವೈದ್ಯರೇ ನೇರಹೊಣೆ ಆಗಬೇಕಾಗುತ್ತದೆ. ಚಿಕ್ಕರಂಗಯ್ಯ ಮೇಲೆ ಡಾ.ನವೀನ್ ನೀಡಿರುವ ದೂರುಪತ್ರ ಕುರಿತು ವಿಚಾರಣೆ ಪ್ರಯುಕ್ತ ಜೂ.25ರ ಮ.3:30ಕ್ಕೆ ಹಾಜರಾಗುವಂತೆ ಮುಖ್ಯ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ಅಧಿಕೃತ ಜ್ಞಾಪನ ಪತ್ರದಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ರೌಡಿಗಳ ರೀತಿಯಲ್ಲಿ ಡಾ.ನವೀನ್ ಬೆದರಿಕೆ ಹಾಕ್ತಾರೇ. ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ಪ್ರಶ್ನೆ ಮಾಡಿದ್ದೇ ತಪ್ಪಾಯ್ತು. ಸಮವಸ್ತ್ರವೇ ಇಲ್ಲದ ಕೊರಟಗೆರೆ ಆಸ್ಪತ್ರೆಯ ವೈದ್ಯ ಡಾ.ನವೀನ್ ನನ್ನ ಮೈಮೇಲಿನ ಬಟ್ಟೆ ಎಳೆದು ಜಾತಿನಿಂದನೆ ಮಾಡಿದ್ದಾರೆ. ಡಾ.ನವೀನ್ ಮೇಲೆ ಪ್ರಕರಣ ದಾಖಲಿಸಲು ಠಾಣೆಗೆ ದೂರು ನೀಡಿದ್ದೇನೆ.
ಚಿಕ್ಕರಂಗಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ದಲಿತ ಹೋರಾಟಗಾರ
ಸರಕಾರಿ ಆಸ್ಪತ್ರೆಗೆ ಚಿಕ್ಕರಂಗಯ್ಯ ಚಿಕಿತ್ಸೆಗೆ ಬಂದಾಗ ಡಾ.ನವೀನ್ ನಡುವೆ ವಾಗ್ವಾದ ನಡೆದಿದೆ. ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಸೌಮ್ಯತೆಯಿಂದ ವರ್ತಿಸಲು ಈಗಾಗಲೇ ನವೀನ್ ಗೆ ಸೂಚಿಸಲಾಗಿದೆ. ದೂರಿನ ಬಗ್ಗೆ ನನಗೇನು ಮಾಹಿತಿ ಇಲ್ಲ. ಆಸ್ಪತ್ರೆಯಲ್ಲಿ ಮತ್ತೆ ಇಂತಹ ಘಟನೆ ಆಗದಂತೆ ಕರೆದು ಮಾತನಾಡ್ತೇನೆ. ಆರೋಗ್ಯ ಇಲಾಖೆಗೆ ಘಟನೆಯ ಬಗ್ಗೆ ವರದಿ ನೀಡಲಾಗಿದೆ.
-ಡಾ.ಲಕ್ಷ್ಮೀಕಾಂತ ಟಿ.ಎಸ್, ಮುಖ್ಯ ಆಡಳಿತ ವೈದ್ಯಾಧಿಕಾರಿ. ಕೊರಟಗೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA