ಬೆಂಗಳೂರು: ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆ ಪ್ರಕರಣವು ಇದೀಗ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದ್ದು, ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂಪಾಯಿ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.
ಈ ಬಗ್ಗೆ ಸ್ವತಃ ಸಚಿವರೇ ಹಗರಣ ನಡೆದಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ತಾವೇ ಒಪ್ಪಿಕೊಂಡಂತೆ ಹಾಗಾದರೆ ಈ ಹಗರಣ ನಡೆದಿರುವುದು ಸತ್ಯ.
ಆದರೆ, ಈ ಅವ್ಯವಹಾರದಲ್ಲಿ ತಮ್ಮ ಪಾತ್ರ ಇದೆಯೂ ಇಲ್ಲವೋ ಎಂದು ನಿರ್ಧಾರ ಮಾಡಬೇಕಾಗಿರೋದು ನ್ಯಾಯಾಲಯ. ತಮಗೆ ತಾವೇ ಕ್ಲೀನ್ ಚೀಟ್ ಕೊಟ್ಟುಕೊಳ್ಳಲು ಇದು ತಮ್ಮ ಮನೆಯ ಆಸ್ತಿಯಲ್ಲ. ಪರಿಶಿಷ್ಟ ಪಂಗಡಗಳ ಜನರ ಕಲ್ಯಾಣಕ್ಕೆ ಸೇರಬೇಕಾದ ಹಣ. ಸಿಎಂ ಸಿದ್ದರಾಮಯ್ಯ ಅವರೇ, ಮೃತ ಅಧಿಕಾರಿ ಡೆತ್ ನೋಟ್ ನಲ್ಲಿ ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡು 24 ಗಂಟೆ ಕಳೆದರೂ ಇನ್ನೂ ಸಚಿವರ ರಾಜೀನಾಮೆ ಪಡೆದುಕೊಂಡಿಲ್ಲ ಎಂದು ಅಶೋಕ್ ಆರೋಪಿಸಿದ್ದಾರೆ. ಸಚಿವರ ರಾಜೀನಾಮೆ ಕೇಳಿದರೆ ತಮ್ಮ ಕುರ್ಚಿಯೇ ಅಲುಗಾಡಬಹುದು ಎಂಬ ಭಯವೇ ಅಥವಾ ಈ ಭ್ರಷ್ಟಾಚಾರದಲ್ಲಿ ತಮ್ಮ ಪಾಲೂ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


