nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    ತುಮಕೂರು May 21, 2026

    ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ

    By adminMay 21, 2026No Comments2 Mins Read

    ತುಮಕೂರು: ನಗರದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಿಸಬೇಕೆಂದು ಮಾಡಿದ ಪ್ರಸ್ತಾಪ ರೈತ ವಿರೋಧಿ ಹಾಗೂ ಜಿಲ್ಲೆಗಿರುವ ಐತಿಹಾಸಿಕ ಹೆಸರಿಗೆ ಮಸಿ ಬಳಿಯುವ ಕುತಂತ್ರವೆನಿಸಿದೆ ಎಂದು ಶಾಸಕ ಬಿ. ಸುರೇಶ್‌ ಗೌಡ ಟೀಕಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಜಿಲ್ಲೆಯಿಂದ ರಾಜಕೀಯವಾಗಿ ಎಲ್ಲವನ್ನೂ ಗಳಿಸಿದ, ಅನೇಕ ಶಿಕ್ಷಣ ಸಂಸ್ಥೆಗಳ ಒಡೆತನ ಹೊಂದಿರುವ ಸಚಿವ ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ಈ ಆಗ್ರಹ ಮಾಡಿರುವುದರ ಹಿಂದೆ ಈ ಸರ್ಕಾರದಲ್ಲಿ ಇರುವ ರಿಯಲ್ ಎಸ್ಟೇಟ್ ಹಿತಾಸಕ್ತಿಗಳ ಕೈವಾಡ ಎದ್ದು ಕಾಣುತ್ತದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ರಾಮನಗರ ಜಿಲ್ಲೆಯಾಗಿದ್ದು ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಘೋಷಿಸುವಲ್ಲಿ ಅವರಿಗೆ ಇದ್ದ ರಿಯಲ್ ಎಸ್ಟೇಟ್ ಹಿತಾಸಕ್ತಿಯೇ ಕಾರಣವಾಗಿತ್ತು ಎಂದರು.


    Provided by
    Provided by

    ತುಂಬೆ ಹೂವಿಗೆ ಪ್ರಸಿದ್ಧವಾಗಿದ್ದ ಕಲ್ಪತರು ನಾಡು ಎನಿಸಿರುವ ತುಮಕೂರು ಇಲ್ಲಿನ ಸಿದ್ದಗಂಗಾ ಮಠ, ಶಿವಗಂಗೆ ಬೆಟ್ಟ, ದೇವರಾಯನದುರ್ಗ, ಗೂಳೂರು ಮುಂತಾದ ಐತಿಹಾಸಿಕ ದೇವಾಲಯಗಳಿಂದ ಪ್ರಸಿದ್ಧವಾಗಿದೆ. ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಕರೆದರೆ ಈ ಎಲ್ಲ ಚರಿತ್ರೆಯನ್ನು ಅಳಿಸಿ ಹೋಗುತ್ತದೆ, ಇತಿಹಾಸ ಮರೆಮಾಚಿದಂತಾಗುತ್ತದೆ. ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಿಸುವ ಮೂಲಕ ತುಮಕೂರಿನ ಪರಿಸರದ ಕೃಷಿ ಕ್ಷೇತ್ರಕ್ಕೆ ತೀವ್ರ ಏಟು ಬೀಳುತ್ತದೆ ಎಂದು ಸುರೇಶ್‌ ಗೌಡರು ಪ್ರಶ್ನಿಸಿದರು.

    ಪರಮೇಶ್ವರ್ ಅವರ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ವಿರೋಧವಿಲ್ಲ, ಆದರೆ ನಮ್ಮ ಜಿಲ್ಲೆಯ ಅಸ್ತಿತ್ವಕ್ಕೆ ಧಕ್ಕೆ ಬರುವಂತೆ ತುಮಕೂರು ಹೆಸರು ಬದಲಿಸಲು ನಮ್ಮ ತೀವ್ರ ವಿರೋಧವಿದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಗೆ ತುಮಕೂರು ರಹದಾರಿಯಾಗಬಾರದು. ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಕೈ ಹಾಕಬಾರದು ಎಂದರು.

    ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ತುಮಕೂರಿಗೆ ಅದರದ್ದೇ ಆದ ಅಸ್ತಿತ್ವವಿದೆ. ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿದರೆ ಇಲ್ಲಿನ ಇತಿಹಾಸ, ಪರಂಪರೆಗೆ ಪೆಟ್ಟು ಬೀಳುತ್ತದೆ. ಇಲ್ಲಿನ ಜನಜೀವನ ಶೈಲಿ ಹದಗೆಡುತ್ತದೆ. ತುಮಕೂರನ್ನು ರಿಯಲ್ ಎಸ್ಟೇಟ್‌ಗೆ ಬಲಿ ಕೊಡಬಾರದು ಎಂದು ಒತ್ತಾಯಿಸಿದರು.

    ಸಚಿವ ಡಾ. ಪರಮೇಶ್ವರ್ ಅವರಿಗೆ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಜಿಲ್ಲೆಯ ಹೆಸರು ಉಳಿಸಿಕೊಂಡು ಅಭಿವೃದ್ಧಿ ಮಾಡಲಿ, ಜಿಲ್ಲೆಯ ಇತಿಹಾಸ, ಸಾಂಸ್ಕೃತಿಕ ಮಹತ್ವಕ್ಕೆ ಧಕ್ಕೆ ಮಾಡುವುದು ಬೇಡ. ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವುದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದರು.

    ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ಹೆಬ್ಬಾಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಚ್. ಹನುಮಂತರಾಜು, ನಗರ ಅಧ್ಯಕ್ಷ ಧನುಷ್, ಮುಖಂಡರಾದ ಪ್ರಭಾಕರ್, ನಗರ ಮಹಿಳಾ ಅಧ್ಯಕ್ಷೆ ವಸಂತಮ್ಮ, ಜಿ. ಜಗದೀಶ್, ಮರಿತಿಮ್ಮಯ್ಯ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ

    May 21, 2026

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಕೋಡಿಗೇನಹಳ್ಳಿ: ಅಖಿಲ ಭಾರತ ರಾಷ್ಟ್ರೀಯ ಔಷಧ ವ್ಯಾಪಾರಿಗಳ ಮುಷ್ಕರ ಪ್ರಯುಕ್ತ ನಾವು ಗ್ರಾಮದಲ್ಲಿ ವ್ಯಾಪಾರವಹಿವಾಟು ಬಂದ್ ಮಾಡಿದ್ದು ಎನ್‌ ಐಸಿಡಿಗೆ…

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.