nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ: ಜಿಲ್ಲಾಧಿಕಾರಿ ಮನವಿ
    ತುಮಕೂರು January 31, 2025

    ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ: ಜಿಲ್ಲಾಧಿಕಾರಿ ಮನವಿ

    By adminJanuary 31, 2025No Comments3 Mins Read
    shubha kalyan

    ತುಮಕೂರು: ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಗಳಿಗೆ ಅಸಲು ಹಣಕ್ಕಿಂತ ಬಡ್ಡಿಯನ್ನೇ ಹೆಚ್ಚಾಗಿ ಕಟ್ಟಬೇಕಾಗುತ್ತದೆ. ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವ ಮುನ್ನ ಜನರು ಆಲೋಚಿಸಬೇಕು ಎಂದು ತಿಳಿಸಿದರು.


    Provided by
    Provided by

    ಸಾರ್ವಜನಿಕರು ತಮ್ಮ ಖರ್ಚು–ವೆಚ್ಚಗಳು ಇತಿ–ಮಿತಿಯೊಳಗಿರುವಂತೆ ಎಚ್ಚರವಹಿಸಬೇಕು. ಮೈಕ್ರೋ ಫೈನಾನ್ಸ್ ನಿಂದ ತಾವು ಸಾಲ ಪಡೆಯುವುದಲ್ಲದೆ ಸ್ನೇಹಿತರು, ಬಂಧುಗಳ ಹೆಸರಲ್ಲಿಯೂ ತೆಗೆದುಕೊಳ್ಳುತ್ತಿರುವುದು ಪರಿಶೀಲನೆ ವೇಳೆಯಲ್ಲಿ ಗಮನಕ್ಕೆ ಬಂದಿದೆ. ಸ್ನೇಹಿತರ ಸಾಲಕ್ಕೆ ಜಾಮೀನು ಹಾಕುವ ಮುನ್ನ ಯೋಚಿಸಬೇಕು. ಇದರಿಂದ ಸಾಲ ಪಡೆದವರು ಹಾಗೂ ಜಾಮೀನು ಹಾಕಿದವರೂ ಸಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿ ಹೇಳಿದರು.

    ಗ್ರಾಮೀಣ ಪ್ರದೇಶದಲ್ಲಿ ಸ್ವ– ಸಹಾಯ ಗುಂಪುಗಳ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಅವಕಾಶವಿದ್ದು, ಮಹಿಳೆಯರು ಈ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ. ಇದರಿಂದ ಸಾಲದ ಶೂಲಕ್ಕೆ ಸಿಲುಕುವುದು ತಪ್ಪುತ್ತದೆ ಎಂದು ತಿಳಿಸಿದರು.

    ಆರ್‌ ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಲು ಕ್ರಮಕೈಗೊಳ್ಳಲಾಗುವುದು. ಬುಧವಾರ ಮೈಕ್ರೋ ಫೈನಾನ್ಸ್ ಕಂಪನಿಗಳೊಂದಿಗೆ ಸಭೆ ನಡೆಸಿ ಕಂಪನಿಯ ಲಾಭಕ್ಕಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಿರದ ಮುಗ್ಧರಿಗೆ ಸಾಲ ನೀಡಬಾರದು. ಜಿಲ್ಲೆಯಲ್ಲಿ ಸಾಲ ನೀಡಲು ಅನುಸರಿಸಬೇಕಾದ ನಿಯಮಗಳ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳು ಜಿಲ್ಲೆಯಲ್ಲಿ 64 ಕೋಟಿ ರೂ.ಗಳ ಸಾಲವನ್ನು ನೀಡಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಹೆಚ್ಚು ಸಾಲ ನೀಡಿಕೆಯಲ್ಲಿ ಜಿಲ್ಲೆಯು 2ನೇ ಸ್ಥಾನದಲ್ಲಿದೆ. ಮುಂದಾಲೋಚನೆಯಿಲ್ಲದೆ ಯಾರೂ ಸಾಲ ಮಾಡಬಾರದು ಎಂದು ಮನವಿ ಮಾಡಿದರಲ್ಲದೆ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವ–ಸಹಾಯ ಗುಂಪಿನಿಂದ ಸಾಲ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ನೀಡುವಾಗ ಕಡ್ಡಾಯವಾಗಿ ಆರ್‌ ಬಿಐ ಮಾರ್ಗಸೂಚಿಯನ್ನು ಪಾಲಿಸಬೇಕು. ಒಬ್ಬ ವ್ಯಕ್ತಿ ಗರಿಷ್ಠ 3 ಲಕ್ಷದವರೆಗೆ 4 ಬಾರಿ ಮಾತ್ರ ಸಾಲ ಪಡೆಯಲು ಅವಕಾಶವಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಸಾಲ ಹಾಗೂ ಕೈಸಾಲ ಪಡೆಯುವಾಗ ಮುನ್ನೆಚ್ಚರಿಕೆವಹಿಸಬೇಕು. ಮರು ಪಾವತಿ ಮಾಡಲು ಶಕ್ತರಿರುವವರಿಗೆ ಮಾತ್ರ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ನೀಡಬೇಕು. ನಿಯಮ ಮೀರಿ ಸಾಲಗಾರರಿಗೆ ಸಾಲ ನೀಡುವ ಫೈನಾನ್ಸ್ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

    ಆರ್‌ ಬಿಐ ಮಾರ್ಗಸೂಚಿಗಳ ಪ್ರಕಾರ ನಿಗದಿತ ಅವಧಿಯೊಳಗೆ ಸಾಲದ ಕಂತುಗಳನ್ನು ತೀರಿಸಲಾಗದ ಸಾಲಗಾರರನ್ನು ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಅವಾಚ್ಯ ಶಬ್ದಗಳಿಂದ ಬೈಯ್ಯುವಂತಿಲ್ಲ. ದೌರ್ಜನ್ಯ–ದಬ್ಬಾಳಿಕೆ ಮಾಡುವಂತಿಲ್ಲ. ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆ ಬಳಿ ವಸೂಲಾತಿಗೆ ಬರುವಂತಿಲ್ಲ. ಇಂತಹ ಪ್ರಕರಣಗಳು ವರದಿಯಾದಲ್ಲಿ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪನಿಯಿಂದ 2ಲಕ್ಷ ರೂ. ಸಾಲ ಪಡೆದ ಕುರಂಕೋಟೆ ಗ್ರಾಮದ ವಿನುತ ಕೋಂ ಮಾರುತಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ವಿನುತ ಅವರು ನಿಗದಿತ ಅವಧಿಯಲ್ಲಿ ಸಾಲದ ಕಂತು ಕಟ್ಟದೆ ಇದ್ದುದರಿಂದ ಫೈನಾನ್ಸ್ ಕಂಪನಿಯವರು ಅವರ ಮನೆಯ ಮೇಲೆ “ಈ ಸ್ವತ್ತು ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪನಿಗೆ ಅಡಮಾನವಾಗಿದೆ” ಎಂದು ಬರೆಸಿದ್ದು, ಹೀಗೆ ಬರೆಸಿರುವುದು ಕಾನೂನು ರೀತ್ಯಾ ತಪ್ಪು. ಕಾನೂನು ಉಲ್ಲಂಘಿಸಿರುವ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಕೂಡಲೇ ಬರವಣಿಗೆಯನ್ನು ಅಳಿಸಿ ಬಣ್ಣ ಬಳಿಯಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇದಕ್ಕೂ ಮುನ್ನ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ಹನುಮಂತಪುರ ಗ್ರಾಮದಲ್ಲಿ ಸಾಲ ತೀರಿಸಲಾಗದೆ 30 ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಮಂಗಳಮ್ಮ ಅವರ ಮನೆಗೆ ಭೇಟಿ ನೀಡಿ ಅವರ ಮಗನಿಂದ ಮಾಹಿತಿ ಪಡೆದರು.

    ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.