nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ: ಜಿಲ್ಲಾಧಿಕಾರಿ ಮನವಿ
    ತುಮಕೂರು January 31, 2025

    ಅವಶ್ಯಕತೆ ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬೇಡಿ: ಜಿಲ್ಲಾಧಿಕಾರಿ ಮನವಿ

    By adminJanuary 31, 2025No Comments3 Mins Read
    shubha kalyan

    ತುಮಕೂರು: ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಗಳಿಗೆ ಅಸಲು ಹಣಕ್ಕಿಂತ ಬಡ್ಡಿಯನ್ನೇ ಹೆಚ್ಚಾಗಿ ಕಟ್ಟಬೇಕಾಗುತ್ತದೆ. ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವ ಮುನ್ನ ಜನರು ಆಲೋಚಿಸಬೇಕು ಎಂದು ತಿಳಿಸಿದರು.

    ಸಾರ್ವಜನಿಕರು ತಮ್ಮ ಖರ್ಚು–ವೆಚ್ಚಗಳು ಇತಿ–ಮಿತಿಯೊಳಗಿರುವಂತೆ ಎಚ್ಚರವಹಿಸಬೇಕು. ಮೈಕ್ರೋ ಫೈನಾನ್ಸ್ ನಿಂದ ತಾವು ಸಾಲ ಪಡೆಯುವುದಲ್ಲದೆ ಸ್ನೇಹಿತರು, ಬಂಧುಗಳ ಹೆಸರಲ್ಲಿಯೂ ತೆಗೆದುಕೊಳ್ಳುತ್ತಿರುವುದು ಪರಿಶೀಲನೆ ವೇಳೆಯಲ್ಲಿ ಗಮನಕ್ಕೆ ಬಂದಿದೆ. ಸ್ನೇಹಿತರ ಸಾಲಕ್ಕೆ ಜಾಮೀನು ಹಾಕುವ ಮುನ್ನ ಯೋಚಿಸಬೇಕು. ಇದರಿಂದ ಸಾಲ ಪಡೆದವರು ಹಾಗೂ ಜಾಮೀನು ಹಾಕಿದವರೂ ಸಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿ ಹೇಳಿದರು.

    ಗ್ರಾಮೀಣ ಪ್ರದೇಶದಲ್ಲಿ ಸ್ವ– ಸಹಾಯ ಗುಂಪುಗಳ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಅವಕಾಶವಿದ್ದು, ಮಹಿಳೆಯರು ಈ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ. ಇದರಿಂದ ಸಾಲದ ಶೂಲಕ್ಕೆ ಸಿಲುಕುವುದು ತಪ್ಪುತ್ತದೆ ಎಂದು ತಿಳಿಸಿದರು.

    ಆರ್‌ ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಲು ಕ್ರಮಕೈಗೊಳ್ಳಲಾಗುವುದು. ಬುಧವಾರ ಮೈಕ್ರೋ ಫೈನಾನ್ಸ್ ಕಂಪನಿಗಳೊಂದಿಗೆ ಸಭೆ ನಡೆಸಿ ಕಂಪನಿಯ ಲಾಭಕ್ಕಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಿರದ ಮುಗ್ಧರಿಗೆ ಸಾಲ ನೀಡಬಾರದು. ಜಿಲ್ಲೆಯಲ್ಲಿ ಸಾಲ ನೀಡಲು ಅನುಸರಿಸಬೇಕಾದ ನಿಯಮಗಳ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳು ಜಿಲ್ಲೆಯಲ್ಲಿ 64 ಕೋಟಿ ರೂ.ಗಳ ಸಾಲವನ್ನು ನೀಡಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಹೆಚ್ಚು ಸಾಲ ನೀಡಿಕೆಯಲ್ಲಿ ಜಿಲ್ಲೆಯು 2ನೇ ಸ್ಥಾನದಲ್ಲಿದೆ. ಮುಂದಾಲೋಚನೆಯಿಲ್ಲದೆ ಯಾರೂ ಸಾಲ ಮಾಡಬಾರದು ಎಂದು ಮನವಿ ಮಾಡಿದರಲ್ಲದೆ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವ–ಸಹಾಯ ಗುಂಪಿನಿಂದ ಸಾಲ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ನೀಡುವಾಗ ಕಡ್ಡಾಯವಾಗಿ ಆರ್‌ ಬಿಐ ಮಾರ್ಗಸೂಚಿಯನ್ನು ಪಾಲಿಸಬೇಕು. ಒಬ್ಬ ವ್ಯಕ್ತಿ ಗರಿಷ್ಠ 3 ಲಕ್ಷದವರೆಗೆ 4 ಬಾರಿ ಮಾತ್ರ ಸಾಲ ಪಡೆಯಲು ಅವಕಾಶವಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಸಾಲ ಹಾಗೂ ಕೈಸಾಲ ಪಡೆಯುವಾಗ ಮುನ್ನೆಚ್ಚರಿಕೆವಹಿಸಬೇಕು. ಮರು ಪಾವತಿ ಮಾಡಲು ಶಕ್ತರಿರುವವರಿಗೆ ಮಾತ್ರ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ನೀಡಬೇಕು. ನಿಯಮ ಮೀರಿ ಸಾಲಗಾರರಿಗೆ ಸಾಲ ನೀಡುವ ಫೈನಾನ್ಸ್ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

    ಆರ್‌ ಬಿಐ ಮಾರ್ಗಸೂಚಿಗಳ ಪ್ರಕಾರ ನಿಗದಿತ ಅವಧಿಯೊಳಗೆ ಸಾಲದ ಕಂತುಗಳನ್ನು ತೀರಿಸಲಾಗದ ಸಾಲಗಾರರನ್ನು ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು ಅವಾಚ್ಯ ಶಬ್ದಗಳಿಂದ ಬೈಯ್ಯುವಂತಿಲ್ಲ. ದೌರ್ಜನ್ಯ–ದಬ್ಬಾಳಿಕೆ ಮಾಡುವಂತಿಲ್ಲ. ಸಂಜೆ 6 ಗಂಟೆಯ ನಂತರ ಸಾಲಗಾರರ ಮನೆ ಬಳಿ ವಸೂಲಾತಿಗೆ ಬರುವಂತಿಲ್ಲ. ಇಂತಹ ಪ್ರಕರಣಗಳು ವರದಿಯಾದಲ್ಲಿ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪನಿಯಿಂದ 2ಲಕ್ಷ ರೂ. ಸಾಲ ಪಡೆದ ಕುರಂಕೋಟೆ ಗ್ರಾಮದ ವಿನುತ ಕೋಂ ಮಾರುತಿ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ವಿನುತ ಅವರು ನಿಗದಿತ ಅವಧಿಯಲ್ಲಿ ಸಾಲದ ಕಂತು ಕಟ್ಟದೆ ಇದ್ದುದರಿಂದ ಫೈನಾನ್ಸ್ ಕಂಪನಿಯವರು ಅವರ ಮನೆಯ ಮೇಲೆ “ಈ ಸ್ವತ್ತು ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪನಿಗೆ ಅಡಮಾನವಾಗಿದೆ” ಎಂದು ಬರೆಸಿದ್ದು, ಹೀಗೆ ಬರೆಸಿರುವುದು ಕಾನೂನು ರೀತ್ಯಾ ತಪ್ಪು. ಕಾನೂನು ಉಲ್ಲಂಘಿಸಿರುವ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಕೂಡಲೇ ಬರವಣಿಗೆಯನ್ನು ಅಳಿಸಿ ಬಣ್ಣ ಬಳಿಯಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಇದಕ್ಕೂ ಮುನ್ನ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ಹನುಮಂತಪುರ ಗ್ರಾಮದಲ್ಲಿ ಸಾಲ ತೀರಿಸಲಾಗದೆ 30 ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಮಂಗಳಮ್ಮ ಅವರ ಮನೆಗೆ ಭೇಟಿ ನೀಡಿ ಅವರ ಮಗನಿಂದ ಮಾಹಿತಿ ಪಡೆದರು.

    ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.