nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025
    Facebook Twitter Instagram
    ಟ್ರೆಂಡಿಂಗ್
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    • ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆಗೂ ಮುನ್ನವೇ ಹೋರಾಟಗಾರರ ಬಂಧನ
    • ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ : ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನ
    • ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ
    • ಪಠ್ಯಪುಸ್ತಕ, ಹೂವು ಹಾಗೂ ಬಣ್ಣದ ಕಿರೀಟ ನೀಡಿ ಮಕ್ಕಳನ್ನು ಸ್ವಾಗತಿಸಿದ ಬಿಒಎಲ್ ಜಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ವಿಷ ಬೀಜವನ್ನ ಬಿತ್ತಬೇಡಿ, ನಾವೆಲ್ಲಾ ಕಾವೇರಿ ತಾಯಿಯ ಮಕ್ಕಳು: ನಿಖಿಲ್ ಕುಮಾರಸ್ವಾಮಿ
    ರಾಜ್ಯ ಸುದ್ದಿ April 22, 2025

    ಜಾತಿ ವಿಷ ಬೀಜವನ್ನ ಬಿತ್ತಬೇಡಿ, ನಾವೆಲ್ಲಾ ಕಾವೇರಿ ತಾಯಿಯ ಮಕ್ಕಳು: ನಿಖಿಲ್ ಕುಮಾರಸ್ವಾಮಿ

    By adminApril 22, 2025No Comments2 Mins Read
    nikhil kumaraswamy

    ತುಮಕೂರು/ತುರುವೇಕೆರೆ : ರಾಜ್ಯದಲ್ಲಿ ಜಾತಿ ವಿಷ ಬೀಜವನ್ನ ಬಿತ್ತಬೇಡಿ. ನಾವೆಲ್ಲಾ ಕಾವೇರಿ ತಾಯಿಯ ಮಕ್ಕಳು, ನಾವೆಲ್ಲಾ ಒಂದೇ. ನಿಮ್ಮ ಕುರ್ಚಿ ಉಳಿಸಿಕೊಳ್ಳೋಕೆ ಜಾತಿ ರಾಜಕೀಯ ಮಾಡಬೇಡಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ತುರುವೇಕೆರೆ ಬೃಹತ್ ಪ್ರತಿಭಟನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಅವರು,  ಜಾತಿ ಗಣತಿ ಮಾಡುವ ಅಧಿಕಾರ ಸಂವಿಧಾನದಡಿ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಆರ್ಥಿಕ, ಸಾಮಾಜಿಕ ಶೈಕ್ಷಣಿಕವಾಗಿ ಸಮೀಕ್ಷೆ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶವಿರುವುದು ಆದರೆ ಜಾತಿ ಎಂಬ ವಿಷ ಬೀಜವನ್ನ ಬಿತ್ತಬೇಡಿ ಎಂದು ಕಿಡಿಕಾರಿದರು.


    Provided by

    ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಕೇವಲ ಎರಡು ವರ್ಷದಲ್ಲಿ ಭ್ರಷ್ಟಾಚಾರ, ದುರಾಡಳಿತ ವೈಫಲ್ಯಗಳೇ ಹೆಚ್ಚಾಗಿ ಕಾಣುತ್ತಿದೆ. ಗಾಳಿ ಒಂದನ್ನ ಹೊರತುಪಡಿಸಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಅವರು ಕಿಡಿಕಾರಿದರು.

    ರೈತರಿಗೆ ಸಿಗಬೇಕಾದ ಹಾಲಿನ ಪ್ರೋತ್ಸಾಹ ಧನವನ್ನ 600 ಕೋಟಿಗೂ ಹೆಚ್ಚು ಹಣವನ್ನ ಇನ್ನು ಬಿಡುಗಡೆ ಮಾಡಿಲ್ಲ. ಕೊಬ್ಬರಿಗೆ  ಕ್ವಿಂಟಾಲ್ ಗೆ 18 ಸಾವಿರ ಹಣ ನಿಗದಿಯಾಗಲು ಕುಮಾರಣ್ಣ ಅವರು ಪ್ರಧಾನಿ ಮೋದಿ ಜೀ ಅವರು ಅಮಿತ್ ಶಾ ಅವರು, ಕೇಂದ್ರ ಕೃಷಿ ಸಚಿವರನ್ನ ಭೇಟಿ ಮಾಡಿ ಕೊಬ್ಬರಿಗೆ ನಿಗದಿತ ದರ ಹೆಚ್ಚಳ ಮಾಡಿಸಿದ್ದಾರೆ ಎಂದು ತಿಳಿಸಿದರು.

    ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಂತ ಇವತ್ತು ರಾಜ್ಯದ ಜನ ಹೇಳ್ತಿದ್ದಾರೆ. ಐದು ಗ್ಯಾರಂಟಿಗಳನ್ನ ಸಮರ್ಪಕವಾಗಿ ಕೊಡುವುದಕ್ಕೆ ಆಗ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ವೇದಿಕೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನ 25 ಸಾವಿರ ವೊಟ್ ನಲ್ಲಿ ಸೋತ್ತಿದ್ದಾರೆ ಅಂತ ಹೇಳಿದ್ರು. ಚುನಾವಣೆ ವೇಳೆ ಏನು ಮಾಡಿದ್ರು, ಎಷ್ಟು ಹುನ್ನಾರ ಮಾಡಿದ್ರು ಅಂತ ನಾಡಿನ ಜನಕ್ಕೆ ಗೊತ್ತಿದೆ ಎಂದರು

    ಚುನಾವಣಾ ಗೆಲುವಿಗಾಗಿ ಜನರನ್ನ ಯಾಮಾರಿಸಿಕೊಂಡು ಹೋಗ್ತಿದ್ದೀರಾ. ಇದು ಎಷ್ಟು ದಿನ ನಡೆಯುತ್ತೆ. ಜಿಲ್ಲಾ ಪಂಚಾಯತ್, ತಾಲ್ಲೂಕ್ ಪಂಚಾಯತ್ ಚುನಾವಣೆಯನ್ನ ಇನ್ನು ಯಾಕೆ ಘೋಷಣೆ ಮಾಡಿಲ್ಲ. ನೀವು ಕೊಟ್ಟಿರುವ ಯೋಜನೆಗೆ ವಿಶ್ವಾಸವಿಲ್ಲ ಅದಕ್ಕೆ ಇಲ್ಲಿಯ ವರೆಗೂ ಯಾಕೆ ಘೋಷಣೆ ಮಾಡಿಲ್ಲ. ನಿಮಗೆ ಧೈರ್ಯವಿದ್ದರೆ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಇಡೀ ರಾಜ್ಯದ ಜನ ಕಾಯ್ತಿದ್ದಾರೆ ಚುನಾವಣೆ ನಡೆಸಿ ಎಂದು ಒತ್ತಾಯಿಸಿದರು.

    ಗಾಂಧಿ ಕುಟುಂಬದ ಕುಡಿ ಭಾರತ್ ಜೋಡೋ ಯಾತ್ರೆ ಮಾಡಿದ್ರು, ತುರುವೇಕೆರೆಗೂ ಬಂದಿದ್ರು, ಎಲ್ಲಾ ಸಮುದಾಯವನ್ನ ಒಗ್ಗೂಡಿಸಲು ಭಾರತ್ ಜೋಡೋ ಯಾತ್ರೆ ಮಾಡಿದ್ದು, ಆದರೆ ರಾಜ್ಯ ಸರ್ಕಾರ ಜಾತಿ ಗಣತಿ ಮಾಡಿ ಜಾತಿ ವಿಷ ಬಿಜ ಬಿತ್ತುತ್ತಿದೆ ಎಂದು ಆರೋಪಿಸಿದರು.

    ಇದೇ ಸಂದರ್ಭದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಟಿ ಕೃಷ್ಣಪ್ಪ ಅವರು, ಮಾಜಿ ಶಾಸಕರಾದ ಶಮಸಾಲೆ ಜಯರಾಮ್ ಅವರು, ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ದೊಡ್ಡೇಗೌಡರು, ಬಿಜೆಪಿ ಮುಖಂಡರಾದ ಶ್ರೀ ಲಕ್ಷ್ಮೀನಾರಾಯಣ್ ಅವರು, ಚಂದ್ರೇಶ್, ನರಸಿಂಹಮೂರ್ತಿ ಅವರು,ವಿಜಯ್ ಕುಮಾರ್ ಅವರು, ಕೊಂಡಜ್ಜಿ ವಿಶ್ವಣ್ಣ ಅವರು ಸೇರಿದಂತೆ ಜೆಡಿಎಸ್ ಬಿಜೆಪಿ ಮೈತ್ರಿ ಕೂಟದ ಪ್ರಮುಖ ಮುಖಂಡರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮಿ.ತಮಿಳ್ ಹಾಸನ್… | ಕಮಲ್ ಹಾಸನ್ ಗೆ ಖಡಕ್ ಉತ್ತರ ನೀಡಿದ ಹಂಸಲೇಖ

    May 30, 2025

    ಕುಣಿಗಲ್ ರೈಲ್ವೆ ಅಂಡರ್‌ಪಾಸ್ ರಸ್ತೆ ಕಾಮಗಾರಿ : ಬದಲಿ ಮಾರ್ಗದ ವ್ಯವಸ್ಥೆ

    May 30, 2025

    ಕಮಲ್  ಹಾಸನ್ ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಇಲ್ಲ: ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು

    May 29, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    June 1, 2025

    ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ಬಳಿ ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕಾಲುವೆ ಯೋಜನೆ ವಿರೋಧಿಸಿ ರೈತ ಸಂಘಟನೆಗಳು, ವಿರೋಧ…

    ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!

    May 31, 2025

    ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ

    May 31, 2025

    ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್

    May 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.