nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ
    ತುಮಕೂರು November 30, 2024

    ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ

    By adminNovember 30, 2024No Comments1 Min Read
    baraguru ramachandrappa

    Provided by
    Provided by

    ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.

    ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

    ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.


    Provided by
    Provided by

    ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳೆವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.