nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ

    December 8, 2025

    ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು

    December 8, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
    • ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು
    • ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ
    • ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ
    • AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ
    • ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ
    • ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ
    ತುಮಕೂರು November 30, 2024

    ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ

    By adminNovember 30, 2024No Comments1 Min Read
    baraguru ramachandrappa

    ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.


    Provided by
    Provided by

    ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

    ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

    ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳೆವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ

    December 8, 2025

    ಕೊರಟಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ಕೊರಟಗೆರೆ  ತಾಲ್ಲೂಕು ಕುರುಬ ಸಂಘದ ಅಧ್ಯಕ್ಷರಾದ ಮೈಲಾರಪ್ಪನವರ ಅಕಾಲಿಕ ಮರಣದಿಂದ…

    ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು

    December 8, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.