nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ
    ತುಮಕೂರು November 30, 2024

    ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ:  ಡಾ.ಬರಗೂರು ರಾಮಚಂದ್ರಪ್ಪ

    By adminNovember 30, 2024No Comments1 Min Read
    baraguru ramachandrappa

    ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು.

    ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.

    ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

    ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

    ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳೆವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ

    September 9, 2026

    ಬಯಲಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಡಿಜೆ,  ಮಾಡಿಫೈಡ್ ವೆಹಿಕಲ್ ಟ್ಯಾಬ್ಲೋಗಳಿಗೆ ಅವಕಾಶವಿಲ್ಲ: ಎಸ್‌ ಪಿ ಅಶೋಕ್ ಕೆ.ವಿ.

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.