nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಜಿ.ಪರಮೇಶ್ವರ್ ಶೀಘ್ರವೇ ಗುಣಮುಖರಾಗಲು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕರ್ತರಿಂದ ಮನವಿ
    ಕೊರಟಗೆರೆ January 31, 2022

    ಡಾ.ಜಿ.ಪರಮೇಶ್ವರ್ ಶೀಘ್ರವೇ ಗುಣಮುಖರಾಗಲು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕರ್ತರಿಂದ ಮನವಿ

    By adminJanuary 31, 2022No Comments2 Mins Read
    parameshwar

    ಕೊರಟಗೆರೆ : ಮಾಜಿ ಉಪಮುಖ್ಯಮಂತ್ರಿ ಶಾಸಕ ಡಾ.ಜಿ.ಪರಮೇಶ್ವರ್ ಅವರು ಶೀಘ್ರವಾಗಿ ಕೋವಿಡ್ ನಿಂದ ಗುಣ ಮುಖವಾಗಲಿ ಎಂದು ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲೂಕಿನ ಪ್ರಸಿದ್ಧ ದೇವಾಲಯಗಳಾದ ಕುರಂಕೋಟೆಯ ದೊಡ್ಡಕಾಯಪ್ಪ, ಸಂಜೀವಿನಿ ಕ್ಷೇತ್ರವಾದ ಸಿದ್ಧರಬೆಟ್ಟದ ಸಿದ್ದೇಶ್ವರ ಸ್ವಾಮಿಗೆ ಮತ್ತು ಚಿಕ್ಕನಹಳ್ಳಿ ಗ್ರಾಮದ ಚನ್ನಕೇಶ್ವರ ಸ್ವಾಮಿ ಹಾಗೂ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಂಡು ಪ್ರಾರ್ಥನೆ ಸಲ್ಲಿಸಿದರು.

    ಪೂಜೆ ನಂತರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕೆರೆ ಶಂಕರ್ ಮಾತನಾಡಿ, ಕ್ಷೇತ್ರ ಜನಪ್ರಿಯ ಶಾಸಕರಾದ ಡಾ.ಜಿ.ಪರಮೇಶ್ವರ ರವರು ಕೊರೊನ ಮೂರನೇ ಅಲೆಯ ಸಂದರ್ಭದಲ್ಲಿ ಮನೆಯಲ್ಲಿ ಇರದೆ ಸದಾ ಕ್ಷೇತ್ರದ ಜನರೊಂದಿಗೆ ಆಭಿವೃಧಿ ಕೆಲಸಗಳಲ್ಲಿ ಕಾರ್ಯವಹಿಸುತ್ತಿದ್ದರು. ಆದರೆ ಈಗ ಅವರಿಗೆ ಕೋವಿಡ್ ಆಗಿರುವ ಕಾರಣ ಶೀಘ್ರವಾಗಿ ಗುಣ ಮುಖರಾಗಿ ಕ್ಷೇತ್ರಕ್ಕೆ ಬರಲಿ ಎಂದು ಕುರಂಕೋಟೆಯ ದೊಡ್ಡಕಾಯಪ್ಪ ಸ್ವಾಮಿಗೆ, ಸಿದ್ದರಬೆಟ್ಟದ ಸಿದ್ದೇಶ್ವರ ಸ್ವಾಮಿಗೆ, ಚಿಕ್ಕನಹಳ್ಳಿಯ ಚನ್ನಕೇಶವ ಸ್ವಾಮಿಗೆ ಹಾಗೂ ತಾಲ್ಲೂಕಿನ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದೇವೆ. ಎಂದರು.


    Provided by
    Provided by
    Provided by

    ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಎಸ್.ಟಿ. ಘಟಕದ ಅಧ್ಯಕ್ಷರಾದ ಗೊಂದಿಹಳ್ಳಿ ರಂಗರಾಜು ಮಾತನಾಡಿ, ರಾಜ್ಯ ಕಂಡತಹ ಸಜ್ಜನ ನಾಯಕರಾದ ಡಾ.ಜಿ.ಪರಮೇಶ್ವರರವರು ಕೋವಿಡ್ ಸಂದರ್ಭದಲ್ಲಿ ಹಲವಾರು ಕೋವಿಡ್ ರೋಗಿಗಳಿಗೆ ತಮ್ಮ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಿ ಆಸರೆಯಾಗಿದ್ದಾರೆ. ಅವರು ಬೇಗ ಗುಣರಾಗಿ ಮತ್ತೆ ಜನ ಸೇವೆಗೆ ಬರಲಿ ಎಂದು ಕ್ಷೇತ್ರ ಹಾಗೂ ರಾಜ್ಯದ ಜನರು ಹಾರೈಸುತ್ತಿದ್ದಾರೆ ಎಂದರು.

    ಕಾಂಗ್ರೆಸ್ ಹಿರಿಯ ಮುಖಂಡ ವೀರಣ್ಣ ಗೌಡ ಮಾತನಾಡಿ,  ಡಾ.ಜಿ.ಪರಮೇಶ್ವರರವರು ಕೋವಿಡ್ ಸಂದರ್ಭದಲ್ಲಿ ಕ್ಷೇತ್ರ ಮತ್ತು ಜಿಲ್ಲೆಯ ಹಲವು ಭಾಗಗಳಲ್ಲಿ ಅವರ ಸಿದ್ದಾರ್ಥ ವೈದ್ಯರಿಂದ ಕೋವಿಡ್ ರೋಗಿಗಳ ಮನೆಗೆ ತೆರಳಿ ಚಿಕಿತ್ಸೆ ಕೊಡಿಸಿ, ಉಚಿತ ಔಷದಿ ನೀಡಿದ್ದಾರೆ. ಇಂತಹ ಸಮಾಜಮುಖಿ ಶಾಸಕರು ಕೊರೊನಾದಿಂದ ಬೇಗ ಗುಣಮುಖವಾಗಿ ಬರಲಿ ಎಂದು ದೇವರಲ್ಲಿ ಕ್ಷೇತ್ರ ಹಲವಾರು ಮಹಿಳೆಯರು ಹಾಗೂ ಕಾರ್ಯಕರ್ತರು ಪ್ರಾರ್ಥಿಸುತ್ತಿದ್ದಾರೆ ಎಂದರು.

    ಹಿರಿಯ ಮುಖಂಡ ವಿಭೂತಿ ಸಿದ್ದಪ್ಪ,  ರಾಜೇಂದ್ರ ನಾಯ್ಕ, ರವಿ ಪ್ರಕಾಶ್, ವಾಲೆ ಚಂದ್ರಯ್ಯ ಇದೇ ವೇಳೆ ಮಾತನಾಡಿ ಪರಮೇಶ್ವರ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

    ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಅರಕೆರೆ ಶಂಕರ್, ವೀರಣ್ಣಗೌಡ, ವಿಭೂತಿ ಸಿದ್ದಪ್ಪ, ಮಹೇಶ್, ಸಿದ್ದರಾಜು, ವೆಂಕಟೇಶ್, ಮಧುಸೂದನ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷರಾದ ಗೊಂದಿಹಳ್ಳಿ ರಂಗರಾಜ್, ವಿನೋದ ನವೀನ್ ಕುಮಾರ್, ಅಖಂಡ ರಾಧ್ಯ, ಸಿದ್ದರಬೆಟ್ಟ ಮತ್ತು ಕುರಂಕೋಟೆ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ

    September 17, 2025

    ಅರಸಾಪುರ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

    September 12, 2025

    ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕ ಪ್ರಶಸ್ತಿಗಳಿಸುವುದು ಸುಲಭವಲ್ಲ: ಈರಣ್ಣ

    September 12, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಬೆಂಗಳೂರು: ಯೋಗ ಸೆಂಟರ್ ​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಗ…

    ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ

    September 18, 2025

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.