nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಡೋಜ ಡಾ. ಕಮಲಾ ಹಂಪನಾರವರಿಗೆ ತುಮಕೂರು ಜಿಲ್ಲಾ ಕಸಾಪ ನುಡಿನಮನ
    ತುಮಕೂರು June 23, 2024

    ನಾಡೋಜ ಡಾ. ಕಮಲಾ ಹಂಪನಾರವರಿಗೆ ತುಮಕೂರು ಜಿಲ್ಲಾ ಕಸಾಪ ನುಡಿನಮನ

    By adminJune 23, 2024No Comments2 Mins Read
    nudinamana

    ತುಮಕೂರು: ಸಾಹಿತಿ ಡಾ.ಕಮಲಾ ಹಂಪನಾ ರವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನುಡಿನಮನ ಸಲ್ಲಿಸಲಾಯಿತು.

    ಇದೇ ವೇಳೆ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ, ಕಮಲಾ ಹಂಪನಾರವರು ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ  ೬೦ ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿದ್ದಾರೆ. ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಅವರ ದೀರ್ಘಕಾಲಿಕ ಹಾಗೂ ಮೌಲಿಕ ಕೊಡುಗೆಗೆ ಸಂದ ಗೌರವಗಳಲ್ಲಿ ಪ್ರಮುಖವಾದುವು,  ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ ೭೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. ಡಾ. ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು ಎಂದರು.


    Provided by
    Provided by

    ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ ೬೦ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas  ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ರಚಿಸಿದ್ದಾರೆ ಎಂದು ತಿಳಿಸಿದರು.

    ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವಕಮಲಾ ಹಂಪನಾ ಕನ್ನಡದ ಹೆಮ್ಮೆ. ಕರ್ನಾಟಕ ಸರ್ಕಾರ ಅವರ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದೆ ಎಂದರು.

    ಇವೆಲ್ಲದಕ್ಕೂ ಕಿರೀಟಪ್ರಾಯವಾಗಿ – ಜಗತ್ತಿನ ಅಯ್ದು ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರದಲ್ಲಿ ಇಡೀ ಭಾರತದ ಪರವಾಗಿ ಕಮಲಾ–ಹಂಪನಾ ಜೋಡಿ ಆಯ್ಕೆಯಾಗಿ ಸೇರಿರುವುದು. ಅವರು ಪಟ್ಟ ಶ್ರಮ, ನಡಸಿದ ನಿರಂತರ ಹೋರಾಟ, ಮಾಡಿದ ಸಾಧನೆಗಳು ಹಲವಾರು. ಅವರ ಪರಿಶ್ರಮದ ಫಲವಾಗಿ ೧. ಕರ್ನಾಟಕ ಸರ್ಕಾರ ಪ್ರತಿವರ್ಷ ಲೇಖಕಿಯೊಬ್ಬರಿಗೆ ಮೂರು ಲಕ್ಷರೂಪಾಯಿ ನಗದನ್ನೂ ಒಳಗೊಂಡ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಯನ್ನು ನೀಡುತ್ತಿದೆ ಎಂದರು.

    ಜಿಲ್ಲಾ ಕಸಾಪ ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ ಮಾತನಾಡಿ, ಸುಮಾರು ೮೦ಕ್ಕೂ ಹೆಚ್ಚು ವಿದ್ವತ್‌ಪೂರ್ಣ ಕೃತಿಗಳನ್ನು ಕನ್ನಡ ಸಾಹಿತ್ಯಲೋಕಕ್ಕೆ ನೀಡಿರುವ ಡಾ. ಕಮಲಾ ಹಂಪನಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಸಂಶೋಧನೆ, ವಿಮರ್ಶೆ ಮೊದಲಾದ ಕ್ಷೇತ್ರಗಳಲ್ಲಿ ಆಳವಾಗಿ ಅಧ್ಯಯನ ನಡೆಸಿರುವ ಇವರು ಅಗಣಿತ ಸ್ನೇಹ ವಿದ್ಯಾರ್ಥಿ ಬಳಗದ ಒಡತಿಯಾಗಿದ್ದರು. ಲೇಖಕಿ, ಅನುವಾದಕಿ, ವಾಗ್ಮಿ, ಹೋರಾಟಗಾರ್ತಿ, ಆಶಾವಾದಿ, ಸುಸಂಸ್ಕೃತೆ, ಸಜ್ಜನ ಮೃದು ಮಾತಿನ, ದಿಟ್ಟ ನಿಲುವಿನ ಹೆಣ್ಣುಮಗಳಾಗಿದ್ದ ಕಮಲಾ ಹಂಪನಾ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದವರಾಗಿರುವುದು ಹೆಮ್ಮೆಯ ವಿಷಯ ಎಂದರು.

    ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷರಾದ ಬಾ.ಹ.ರಮಾಕುಮಾರಿ ಮಾತನಾಡಿ, ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಪ್ರಥಮ ಮಹಿಳಾ ಸಮ್ಮೇಳನದ ಅಧ್ಯಕರಾಗಿ ಲೇಖಕಿಯರಿಗೆ ಸ್ಫೂರ್ತಿ ತುಂಬಿದ್ದಾರೆ. ಹಂಪನಾ ಮತ್ತು ಕಮಲಾ ಹಂಪನಾ ದಂಪತಿಗಳು ಮುದ್ದಣ ಮನೋರಮೆಯರಂತೆ ಮಾದರಿಯಾಗಿದ್ದರು. ಜೈನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿ, ಅಮೂಲ್ಯ ಕೃತಿಗಳ ರಚನೆ ಮಾಡಿದ್ದಾರೆ. ಕಮಲಾ ಹಂಪನಾ ನೆನಪಿನ ವಿಚಾರ ಸಂಕಿರಣವನ್ನು ಏರ್ಪಡಿಸಿ, ಮತ್ತಷ್ಟು ವಿಷಯಗಳನ್ನು ಸಾಹಿತ್ಯಾಸಕ್ತರು ಮೆಲುಕು ಹಾಕುವಂತೆ ಮಾಡಬೇಕೆಂದರು.

    ಕಾಯಕ್ರಮದಲ್ಲಿ ಜೈನ ಅಧ್ಯಕ್ಷರಾದ  ನಾಗರಾಜ್ ನುಡಿನಮನ ಸಲ್ಲಿಸಿ ಕಳೆದ ಆರು ತಿಂಗಳ ಹಿಂದೆ ತುಮಕೂರಿಗೆ ಭೇಟಿ ತಮ್ಮೊಂದಿಗೆ ಕಾಲ ಕಳೆದ ನೆನಪನ್ನು ಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಕೆ.ಎಸ್.ಉಮಾಮಹೇಶ್, ಚಿಕ್ಕಬೆಳ್ಳಾವಿ ಶಿವಕುಮಾರ್, ಕೆಂಕೆರೆ ಮಲ್ಲಿಕಾರ್ಜುನ್, ಜಿ.ಹೆಚ್.ಮಹದೇವಪ್ಪ, ರಾಣಿ ಚಂದ್ರಶೇಖರ್, ನಟರಾಜ್, ಜಲದಿ ರಾಜು, ಚೆಲುವರಾಜು, ಚಾಂದು ಮುಂತಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.