ಔರಾದ / ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಭಾಗವಹಿಸಿ ಮಾತನಾಡಿದ ಡಾ.ವಿಶ್ವ ಶಿಂಗಾಡಿ ಅವರು, “ಸಮಾಜಕ್ಕೆ ಡಾ. ಮಹಾಂತ ಶಿವಯೋಗಿಗಳ ಕೊಡುಗೆ ಅತ್ಯಂತ ಅಪಾರವಾಗಿದೆ. ಜನರು ದುಶ್ಚಟಗಳಿಂದ ಮುಕ್ತರಾಗಲು ಅವರು ಕೈಗೊಂಡ ಜಾಗೃತಿ ಅಭಿಯಾನಗಳು ಹಾಗೂ ಅವರ ನಿಸ್ವಾರ್ಥ ಸೇವೆ ಸಮಾಜವನ್ನು ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ,” ಎಂದು ಬಣ್ಣಿಸಿದರು.
ಡಾ. ಮಹಾಂತ ಶಿವಯೋಗಿಗಳು ಜನರ ಬಳಿ ಹಣ ಅಥವಾ ಧಾನ್ಯದ ಬದಲಿಗೆ, ಅವರಲ್ಲಿದ್ದ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯಾಗಿ ಪಡೆದು ಜನರಲ್ಲಿ ವೈಚಾರಿಕ ಹಾಗೂ ನೈತಿಕ ಬದಲಾವಣೆ ತಂದಿದ್ದರು. ಈ ವಿನೂತನ ಮಾರ್ಗವು ಸಮಾಜವನ್ನು ವ್ಯಸನಮುಕ್ತಗೊಳಿಸಲು ದೊಡ್ಡ ಕ್ರಾಂತಿಯನ್ನೇ ಸೃಷ್ಟಿಸಿತು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸತೀಶ್, ಸಂತೋಷ್ ಬಾವಗೆ, ಶ್ರೀಕಾಂತ್, ಕಿರಣ್ ಕುಮಾರ್ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
